ವಿವಿಧ ಆಸನ ಪ್ರದರ್ಶಿಸಿ ಗಮನ ಸೆಳೆದ ಯೋಗಪಟುಗಳು


Team Udayavani, Jan 22, 2020, 3:00 AM IST

vividha-asana

ಮೈಸೂರು: ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿ ವಿವಿಧ ಆಸನ ಪ್ರದರ್ಶಿಸಿ ಗಮನ ಸೆಳೆದರು.

ಎಸ್‌ಜಿಎಸ್‌ ಅಂತಾರಾಷ್ಟ್ರೀಯ ಯೋಗ ಫೌಂಡೇಷ‌ನ್‌ ಮತ್ತು ಸಂಶೋಧನೆ ಸಂಸ್ಥೆಯು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯೋಗಾಸನ ಕ್ರೀಡಾ ಪಂದ್ಯಾವಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಂದ್ಯಾವಳಿಯಲ್ಲಿ 28 ರಾಜ್ಯಗಳಿಂದ 1400ಕ್ಕೂ ಹೆಚ್ಚು ಯೋಗಾಸಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.

ಬೆಳಗ್ಗೆಯಿಂದ ಸಂಜೆವರೆಗೆ ಎಂಟು ವಿಭಾಗದಲ್ಲಿ ಸ್ಪರ್ಧೆಗಳು ನಡೆದವು. 1400 ಮಂದಿಯ ಪೈಕಿ ಸಾವಿರ ಮಕ್ಕಳೇ ಭಾಗವಹಿಸಿ ಪಂದ್ಯಾವಳಿಯಲ್ಲಿ ಉತ್ಸಾಹ ಹೆಚ್ಚಿಸಿದರು. ಸಣ್ಣ ಮಕ್ಕಳು ಕಷ್ಟಕರ ಆಸನಗಳನ್ನು ಪ್ರದರ್ಶಿಸಿದರು.

ಅಂತಾರಾಷ್ಟ್ರೀಯ ಯೋಗ ಹಾಗೂ ಯೋಗ ದಸರಾ ಬಳಿಕ ಮೈಸೂರಿನಲ್ಲಿ ನಡೆದ ಯೋಗದ ಮಹತ್ವ ಸಾರುವ ಬೃಹತ್‌ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯದ ಯೋಗಸಕ್ತರು ಭಾಗವಹಿಸಿ ಸಣ್ಣ ಮಕ್ಕಳಿಂದ ಹಿರಿಯ ವಯಸ್ಸಿನವರು ವಯಸ್ಸಿಮ ಬೇಧವಿಲ್ಲದ ಯೊಗ ಪ್ರದರ್ಶಿಸಿದರು.

8-10 ವರ್ಷದ ಬಾಲಕ, ಬಾಲಕಿ, 10ರಿದ 12 ವರ್ಷದ ಬಾಲಕ, ಬಾಲಕಿ, 12-15 ವರ್ಷದ ಬಾಲಕ, ಬಾಲಕಿ, 15-20 ವರ್ಷದ ಯುವ-ಯುವತಿ, 20-30 ವರ್ಷದ ಮಹಿಳಾ ಮತ್ತು ಪುರುಷ, 30-40, 40-50, 50-60 ಹಾಗೂ 60 ವರ್ಷಕ್ಕೂ ಮೇಲ್ಪಟವರಿಗೆ ಮಹಿಳೆ ಮತ್ತು ಪುರುಷರ ವಿಭಾಗದಲ್ಲಿ ಪಂದ್ಯಾವಳಿ ನಡೆಯಿತು. ಅಥ್ಲೆಟಿಕ್‌ ಯೋಗಾಸನ, ಆರ್ಟ್‌ ಸ್ಟಿಕ್‌ ಸೋಲೊ ಯೋಗಾಸನ, ಸಮೂಹ ಆರ್ಟ್‌ಸ್ಟಿಕ್‌ ಯೋಗಾಸನ, ರಿದಮಿrಕ್‌ ಯೋಗಾಸನ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತು.

ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಮೋದಿ ಅವರನ್ನು ಕರೆಸಬೇಕೆಂದು ಹಲವು ವರ್ಷಗಳ ಬೇಡಿಕೆ ಇದೆ. ಈ ಬಾರಿ ಮೋದಿ ಅವರನ್ನು ಕರೆತರಲೇಬೇಕೆಂದು ನಿರ್ಧಾರಿಸಿದ್ದೇವೆ ಎಂದರು.

ಮುಖ್ಯಮಂತ್ರಿಗಳ ವಿಶೇಷ ಸಲಹೆಗಾರರಾದ ಎಂ.ಲಕ್ಷ್ಮೀನಾರಾಯಣ ರಾಷ್ಟ್ರೀಯ ಯೋಗಾಸನ ಕ್ರೀಡಾ ಪಂದ್ಯಾವಳಿಗೆ ಚಾಲನೆ ನೀಡಿದರು. ಶಾಸಕ ಎಸ್‌.ರಾಮದಾಸ್‌ ಅಧ್ಯಕ್ಷತೆವಹಿಸಿದ್ದರು. ಕೇಂದ್ರದ ಸರಕಾರದ ಇಂಡಿಯನ್‌ ಯೋಗ ಆಸೋಸಿಯೇಷನ್‌ನ ಜಂಟಿ ಕಾರ್ಯದರ್ಶಿ ಡಾ.ಜೈ ದೀಪ್‌ ಆರ್ಯ, ಯೋಗನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ಇತರರಿದ್ದರು.

ಒಲಂಪಿಕ್‌ ಕ್ರೀಡೆಯಾಗಲಿ: ರಾಷ್ಟ್ರೀಯ ಯೋಗಾಸನ ಕ್ರೀಡಾ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರದ ಆಯುಷ್‌ ಇಲಾಖೆಯ ಯೋಗ ಪ್ರಮಾಣ ಪತ್ರ ಮಂಡಳಿಯ ಸಿಇಒ, ದೆಹಲಿ ಮೊರಾರ್ಜಿ ದೇಸಾಯಿ ಯೋಗ ಸಂಸ್ಥೆ ನಿರ್ದೇಶಕ ಡಾ.ಈಶ್ವರ್‌ ವಿ.ಬಸವರಡ್ಡಿ ಮಾತನಾಡಿ, ಕಳೆದ ಆರು ವರ್ಷಗಳಿಂದ ಯೋಗ ಅಂತಾರಾಷ್ಟ್ರೀಯ ಮಾನ್ಯತೆ ಪಡೆದುಕೊಂಡಿದೆ.

ವಿಶ್ವವ್ಯಾಪಿಯಾಗಿ ಯೋಗವನ್ನು ಅಳವಡಿಸಿಕೊಂಡು ಯೋಗದ ಹಬ್ಬ ಆಚರಿಸುತ್ತಿದ್ದಾರೆ. ಪ್ರಸ್ತುತ ಯೋಗ ವಿಶ್ವಮಟ್ಟದಲ್ಲಿ ತನ್ನದೆ ಆದ ಸ್ಥಾನ ಹೊಂದಿದೆ. ಹಾಗಾಗಿ ಯೋಗ ಕ್ರೀಡೆಯಾಗಿ ಘೋಷಣೆಯಾಗಬೇಕಿದೆ. ಒಲಂಪಿಕ್‌ನಲ್ಲಿ ಯೋಗವು ಸೇರ್ಪಡೆಯಾಗಬೇಕಿದೆ. ಮುಂದಿನ 2028ರ ಒಲಂಪಿಕ್‌ನಲ್ಲಿ ಯೋಗಸಾನವು ಸ್ಪರ್ಧೆಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.