![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿ
Team Udayavani, Feb 17, 2017, 12:54 PM IST
![mys6.jpg](https://www.udayavani.com/wp-content/uploads/2017/02/17/mys6.jpg)
ಮೈಸೂರು: ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಇದಕ್ಕೆ ಗ್ರಾಮಸ್ಥರ ಸಹಕಾರವು ಅತ್ಯಗತ್ಯ ಎಂದು ಕಾಂಗ್ರೆಸ್ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಬಡಗಲಹುಂಡಿಯಲ್ಲಿ 18 ಲಕ್ಷ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಮುಖ್ಯಮಂತ್ರಿಗಳ ವರುಣ ಕ್ಷೇತ್ರದ ಜತೆಗೆ ರಾಜ್ಯದ ಪ್ರತಿಯೊಂದು ಗ್ರಾಮವು ಮಾದರಿ ಗ್ರಾಮವಾಗಬೇಕು. ಇದಕ್ಕೆ ಗ್ರಾಮಸ್ಥರು ಸಹಕಾರ ನೀಡಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಹಿಂದೆಂದೂ ಆಗದಂತಹ ಅಭಿವೃದ್ಧಿ ಕೆಲಸಗಳು ಆಗಿದ್ದು, ನೀರಾವರಿಗೆ 50 ಸಾವಿರ ಕೋಟಿ ರೂ. ಖರ್ಚು ಮಾಡಿರುವುದರಿಂದ ಎಲ್ಲಾ ನಾಲೆಗಳ ಆಧುನೀಕರಣವಾಗಿ ನಾಲೆಯ ಕೊನೆ ಹಂತದಲ್ಲಿರುವ ರೈತರಿಗೆ ನೀರು ತಲುಪವಂತಾಗಿದೆ.
ಈಗಾಗಲೇ ರಾಜ್ಯದ ಜನರ ಆರೋಗ್ಯದ ದೃಷ್ಟಿಯಿಂದ ರಾಜಾÂದ್ಯಂತ ಸಾವಿರಾರು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಅಂತರ್ಜಲ ವೃದ್ಧಿಗಾಗಿ ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ. ಇದಲ್ಲದೆ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಬಡವರ ಮನೆಗಳ ಮೇಲೆ ಇದ್ದ ಸಾಲವನ್ನು ಮನ್ನಾ ಮಾಡಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿದ್ದ 1500 ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದ್ದಾರೆ.
ಇದರಿಂದ ಬಡ ಜನರು ಆರ್ಥಿಕವಾಗಿ ಸಬಲರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದರು. ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜವಾಬ್ದಾರಿ ವಹಿಸಿಕೊಂಡಿರುವುದರಿಂದ ವರುಣ ಕ್ಷೇತ್ರದ ಕೆಲಸ ಮಾಡಲು ಡಾ.ಯತೀಂದ್ರ ಅವರನ್ನು ಅವರ ಪ್ರತಿನಿಧಿಯಾಗಿ ಕಳುಹಿಸಿದ್ದಾರೆ.
ನಾವು ಗ್ರಾಮೀಣ ಭಾಗದಲ್ಲಿ ಪ್ರವಾಸ ಮಾಡುವಾಗ ಹೆಚ್ಚು ಮಹಿಳೆಯರು ಪಡಿತರ ಅಕ್ಕಿಯನ್ನು ಹೆಚ್ಚು ಮಾಡಬೇಕೆಂದು ಕೇಳಿದ್ದರು. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದ ಪರಿಣಾಮವಾಗಿ ಏಪ್ರಿಲ್ 1ರಿಂದ 8 ಕೆ.ಜಿ. ಅಕ್ಕಿ ಕೊಡಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ.
ಬಿಪಿಎಲ್ ಕಾರ್ಡ್, ವಿದ್ಯುತ್ ಸಮಸ್ಯೆ ಹಾಗೂ ಉಳಿದ ಎಲ್ಲಾ ಸಮಸ್ಯೆಗಳನ್ನು ಮ್ಯುಮಂತ್ರಿಗಳ ಗಮನಕ್ಕೆ ತಂದು ಈ ವರ್ಷದೊಳಗೆ ಎಲ್ಲಾ ಕೆಲಸಗಳನ್ನು ಮಾಡಿಕೊಡುತ್ತೇವೆ ಎಂದ ಅವರು ಕೆಂಪೇಗೌಡನಹುಂಡಿ ಭಾಗದ 500 ಎಕರೆಗೆ ಏತ ನೀರಾವರಿ ಯೋಜನೆ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದರು.ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಭಾಗ್ಯ, ಎಪಿಎಂಸಿ ಸದಸ್ಯ ಆನಂದ್, ತಾಪಂ ಮಾಜಿ ಸದಸ್ಯ ಎಂ.ಟಿ.ರವಿಕುಮಾರ್, ಮುಖಂಡರಾದ ದೊಡ್ಡರಾಮೇಗೌಡ, ಎಂ.ಆರ್.ಗೌಡ, ಗ್ರಾಪಂ ಉಪಾಧ್ಯಕ್ಷೆ ಶಿವಮ್ಮ ಮೊದಲಾದವರು ಹಾಜರಿದ್ದರು.
ಇದೇ ವೇಳೆ ವರುಣ ಕ್ಷೇತ್ರದ ಬಡಗಲಹುಂಡಿ, ಹುನಗನಹಳ್ಳಿ, ರಂಗಸಮುದ್ರ, ಹಿಟ್ಟವಳ್ಳಿ, ತುಂಬಲ, ಎಡದೊರೆ, ಕುರಿಸಿದ್ದನಹುಂಡಿ, ಗಗೇìಶ್ವರಿ, ಕೆಂಪಯ್ಯನಹುಂಡಿ, ಇಂಡವಾಳು, ರಾಯರಹುಂಡಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳ ಭೂಮಿಪೂಜೆ, ಉದ್ಘಾಟನೆ ಹಾಗೂ ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಿಗೆ ಮತ ಹಾಕಿದ ಮತದಾರರಿಗೆ ಡಾ.ಯತೀಂದ್ರ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.