ಸಾಹಿತ್ಯಕ್ಕೆ ತಳುಕಿನ ವೆಂಕಣಯ್ಯ ಮನೆತನದ ಕೊಡುಗೆ


Team Udayavani, May 11, 2019, 3:00 AM IST

sahityakke

ಮೈಸೂರು: ತಳುಕಿನ ವೆಂಕಣಯ್ಯ ಮನೆತನ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ನಿತ್ಯೋತ್ಸವ ಕವಿ ಪ್ರೊ. ನಿಸಾರ್‌ ಅಹಮದ್‌ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಗರದ ಹೊಯ್ಸಳ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ಪ್ರಕಾಶಕ ಟಿ.ಎಸ್‌. ಛಾಯಾಪತಿ ಅವರ 75ನೇ ಹುಟ್ಟುಹಬ್ಬ ಮತ್ತು ಅಭಿನಂದನ ಸಮಾರಂಭದಲ್ಲಿ ಮಾತನಾಡಿದರು.

ಸಾಹಿತ್ಯಾಭಿರುಚಿ ಎನ್ನುವುದು ಛಾಯಾಪತಿ ಅವರ ವಂಶಪಾರಂಪರ್ಯವಾಗಿ ಬೆಳೆದು ಬಂದಿದೆ. ಇವರ ಕುಟುಂಬದ ತರಾಸು, ತಳುಕಿನ ವೆಂಕಣಯ್ಯ, ಸೇರಿದಂತೆ ಹಲವರು ಕನ್ನಡ ಸಾಹಿತ್ಯಕ್ಕೆ ಮೌಲ್ಯಯುತ ಹಾಗೂ ಗಂಭೀರ ಕೃತಿಗಳನ್ನು ನೀಡಿದ್ದಾರೆ.

ಜೊತೆಗೆ ಛಾಯಾಪತಿಯವರು ಕೂಡ ತಮ್ಮ ತಂದೆಯಂತೆ ಪ್ರಕಾಶಕರಾಗಿ ಸಾವಿರಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ ಎಂದು ಹೇಳಿದರು. ನಮ್ಮ ಸರಕಾರ ಯಾರ್ಯಾರಿಗೋ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತದೆ. ಆದರೆ ಉತ್ತಮ ಪ್ರಕಾಶಕರಾಗಿ ಸಾಹಿತ್ಯ ಕ್ಷೇತ್ರಕ್ಕೆ ದುಡಿಯುತ್ತಿರುವ ಟಿ.ಎಸ್‌. ಛಾಯಾಪತಿ ಅವರನ್ನು ಗುರುತಿಸಲಿಲ್ಲ.

ಇದು ಬೇಸರದ ಸಂಗತಿ. ರಾಜ್ಯೋತ್ಸವ ಪ್ರಶಸ್ತಿ ಬಂದರೆ ದೊಡ್ಡವರಾಗುತ್ತವೆ ಎಂಬುದಲ್ಲ, ಬದಲಿಗೆ ಅದೊಂದು ಸರಕಾರದ ಅಧೀಕೃತ ಮುದ್ರೆಯಷ್ಟೇ. ಮುಂದಾದರು ಕನ್ನಡ ನಾಡಲ್ಲಿ ಹಲವಾರು ಸಾಹಿತಿಗಳು, ಬರಹಗಗಾರರು, ಪ್ರಕಾಶಕರು ಇದ್ದಾರೆ ಅವರನ್ನು ಗುರುತಿಸುವ ಕೆಲಸವಾಗಲಿ ಎಂದರು.

ನನ್ನದು ಮತ್ತು ಟಿ.ಎನ್‌. ಛಾಯಾಪತಿ ಅವರದು 45 ವರ್ಷಗಳ ಸ್ನೇಹ. ನಮ್ಮಿಬ್ಬರ ಮಧ್ಯೆ ಹಲವು ಬಾರಿ ಮಾತಿನ ಚಕಮಕಿ ನಡೆದಿದೆ. ಆದರೂ ಅಣ್ಣನಂತೆ ನನ್ನನ್ನು ನೋಡಿಕೊಂಡಿದ್ದಾರೆ. ನನ್ನ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ಲೇಖಕನನ್ನು ಔದಾರ್ಯದಿಂದ ನೋಡಿಕೊಳ್ಳುವ ಉದಾರ ಮನಸ್ಸು ಟಿ.ಎನ್‌. ಛಾಯಾಪತಿ ಅವರಲ್ಲಿ ಇದೆ. ಅವರು ಹಣ, ಆಸ್ತಿ, ಮನೆಗಳನ್ನು ಸಂಪಾದಿಸಿರುವುದಕ್ಕಿಂತ ಹೆಚ್ಚು ಸ್ನೇಹ ಸಂಪಾದಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಟಿ.ಎಸ್‌. ಛಾಯಾಪತಿ ಶತೋತ್ತರ ಬದುಕಲಿ ಎಂದು ಹಾರೈಸಿದರು.

ಸ್ನೇಹಜೀವಿ: ಸಾಹಿತಿ ಎಚ್‌.ಎಸ್‌.ವೆಂಕಟೇಶ ಮೂರ್ತಿ ಮಾತನಾಡಿ, ಮೈಸೂರು-ಬೆಂಗಳೂರು ಅಕ್ಕಪಕ್ಕದಲ್ಲಿದ್ದರೂ ಸಂಸ್ಕೃತಿ ಸ್ವರೂಪ ಭಿನ್ನವಾಗಿದೆ. ಪುಸ್ತಕ ಪ್ರಕಾಶನದಲ್ಲಂತೂ ಈ ಮಾತು ನಿಜವಾಗಿದೆ. ಸಮಕಾಲೀನ ಸಾಹಿತ್ಯ ಬೆಂಗಳೂರಿನಲ್ಲಿ ಪ್ರಕಟವಾದರೆ, ಪ್ರಾಚೀನ, ಗಂಭೀರ, ಸಂಶೋಧನಾ ಗ್ರಂಥಗಳು ಮೈಸೂರಿನಲ್ಲಿ ಪ್ರಕಟವಾಗುತ್ತವೆ.

ಪ್ರಕಾಶಕರಿಗೆ ಒಂದು ಘನತೆ ತಂದುಕೊಟ್ಟ ಊರು ಮೈಸೂರು. ಟಿ.ಎನ್‌. ಛಾಯಾಪತಿ ಕಲಾವಂತಿಕೆ ಹಾಗೂ ಗುಣಮಟ್ಟದ ದೃಷ್ಟಿಯಿಂದ ಉತ್ತಮ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ನನ್ನ ಪಾಲಿಗೆ ಬರೀಯ ಪ್ರಕಾಶಕರಾಗಿ ಉಳಿಯದೆ, ಕುಟುಂಬದ ಹಿರಿಯರಾಗಿ ಉಳಿದ ಅಪ್ಪಟ್ಟ ಸ್ನೇಹಜೀವಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕವಿ ಪ್ರೊ.ಎಚ್‌.ಎಸ್‌. ವೆಂಕಟೇಶಮೂರ್ತಿ, ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್‌, ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್‌, ಜಿಲ್ಲಾ ಕಸಾಪ ಅಧ್ಯಕ್ಷ ಡಾ. ವೈ.ಡಿ. ರಾಜಣ್ಣ ಸೇರಿದಂತೆ ಮತ್ತಿತರರು ಇದ್ದರು.

ಮೋದಿ ಮಾತನ್ನೇ ಖಂಡಿಸಿದ ಪ್ರಸಾದ್‌ ರಾಜಕೀಯ ಪ್ರೌಢಿಮೆ: ನನಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಶ್ರೀನಿವಾಸ ಪ್ರಸಾದ್‌ ಮೇಲೆ ಇದ್ದ ಅಭಿಮಾನ ಮತ್ತಷ್ಟು ಇಮ್ಮಡಿಯಾಗಿದೆ. ಕಾರಣ ಪ್ರಧಾನಿ ಮೋದಿಯವರು, ರಾಜೀವ್‌ ಗಾಂಧಿಯವರನ್ನು ಮಹಾಭ್ರಷ್ಟ ಎಂದು ಹೇಳಿದ್ದರು.

ಆದರೆ ಅದೇ ಪಕ್ಷದಲ್ಲಿದ್ದುಕೊಂಡು ಪ್ರಧಾನಿ ಮಾತನ್ನು ಪ್ರಸಾದ್‌ ನೇರವಾಗಿ ಖಂಡಿಸಿದರು. ಇದು ವ್ಯಕ್ತಿಯಲ್ಲಿರುವ ಬದ್ಧತೆ, ಪ್ರಾಮಾಣಿಕತೆ ಹಾಗೂ ರಾಜಕೀಯ ಪ್ರೌಢಿಮೆಯನ್ನು ತೋರಿಸುತ್ತದೆ. ರಾಜೀವ್‌ ಗಾಂಧಿ ಒಬ್ಬ ಪ್ರಬುದ್ಧ ರಾಜಕಾರಣಿಯಾಗಿದ್ದರು ಎಂದು ಕವಿ ಪ್ರೊ. ನಿಸಾರ್‌ ಅಹಮದ್‌ ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.