ಸರ್ಕಾರದ ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಇಲ್ಲ: ಎಸ್.ಟಿ ಸೋಮಶೇಖರ್ ಸ್ಪಷ್ಟನೆ
Team Udayavani, Apr 5, 2021, 12:04 PM IST
ಮೈಸೂರು: ಸರ್ಕಾರದ ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಇಲ್ಲ. ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಉಸ್ತುವಾರಿ ಸಚಿವ ಎಸ್. ಟಿ ಸೋಮಶೇಖರ್ ಕಿಡಿಕಾರಿದ್ದಾರೆ.
ವಿಜಯೇಂದ್ರ ವಿರುದ್ದ ಕಾಂಗ್ರೆಸ್ ಶಾಸಕರ ಆರೋಪ ವಿಚಾರವಾಗಿ ಮಾತನಾಡಿದ ಅವರು. ಮೈಸೂರು ಉಸ್ತುವಾರಿಯಾಗಿ ಸಿಎಂ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಎರಡು ವರ್ಷದ ಅವಧಿಯಲ್ಲಿ ಇಲ್ಲದ ಹಸ್ತಕ್ಷೇಪ ಈಗ ಬಂತಾ? ಮುಖ್ಯಮಂತ್ರಿಗಳು ರಬ್ಬರ್ ಸ್ಟ್ಯಾಂಪ್ ಅಲ್ಲ. ಅವರಿಗೆ 45 ವರ್ಷಗಳ ರಾಜಕೀಯ ಅನುಭವ ಇದೆ.
ಯಾವ್ಯಾವ ಮುಖ್ಯಮಂತ್ರಿಗಳ ಕುಟುಂಬದವರು ಏನು ಮಾಡಿದ್ರು ಎಂಬುದು ಜನರಿಗೆ ಗೊತ್ತಿದೆ. ಈವರೆಗೂ ನನ್ನ ಅವಧಿಯಲ್ಲಿ ಎಂದೂ ಹಸ್ತಕ್ಷೇಪ ಮಾಡಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: ಕೋವಿಡ್ 19 ಸೋಂಕು ದೃಢ; ಬಾಲಿವುಡ್ ನಟ ಅಕ್ಷಯ್ ಕುಮಾರ್ ಆಸ್ಪತ್ರೆಗೆ ದಾಖಲು
ಮಂತ್ರಿಗಳು, ಶಾಸಕರಿಗೆ ಸ್ಪಂದಿಸದಿದ್ದರೆ ಸಿಎಂ ಮಧ್ಯಪ್ರವೇಶ ಮಾಡ್ತಾರೆ. ಅದು ಸಿಎಂ ಅವರ ಪರಮಾಧಿಕಾರ. ಮಂತ್ರಿಗಳು ತಕ್ಷಣ ಸ್ಪಂದಿಸಿದ್ರೆ ಸಿಎಂಗೆ ಯಾರು ದೂರು ಕೊಡೋದಿಲ್ಲ. ನಾನು ಸಹಕಾರಿ ಸಚಿವನಾಗಿದ್ದೇನೆ. ನಾನು ಸಹಕಾರಿಗಳಿಗೆ, ಶಾಸಕರಿಗೆ ಸ್ಪಂದಿಸೋದು ನನ್ನ ಕೆಲಸ. ನಾನು ಸ್ಪಂದಿಸದಿದ್ದರೆ ಸಿಎಂ ಮಧ್ಯ ಪ್ರವೇಶ ಮಾಡ್ತಾರೆ ಎಂದು ಈಶ್ವರಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಟಿ.ಸೋಮಶೇಖರ್ ಮಾರ್ಮಿಕ ಉತ್ತರ ನೀಡಿದರು.
ಈಶ್ಚರಪ್ಪ ಪ್ರಕರಣ ಅಂತಲ್ಲ, ಎಲ್ಲ ಸಚಿವರ ವಿಷಯದಲ್ಲೂ ಇದೆ ಆಗುವುದು. ಯಾವ ಮಂತ್ರಿಯೇ ಆಗಲಿ ಅವರ ಕೆಲಸ ಮಾಡಬೇಕು. ಮಂತ್ರಿಗಳು ಸ್ಪಂದಿಸದಿದ್ದರೆ ಸಿಎಂ ಮಧ್ಯ ಪ್ರವೇಶ ಮಾಡುವುದರಲ್ಲಿ ತಪ್ಪೇನಿಲ್ಲ. ಸಾರ್ವಜನಿಕರು, ಶಾಸಕರು ಯಾವ ಇಲಾಖೆ ಮೇಲೆ ಹೆಚ್ಚು ದೂರು ಕೊಡ್ತಾರೆ ಆಗ ಸಿಎಂ ಮಧ್ಯಪ್ರವೇಶ ಮಾಡುತ್ತಾರೆ.
ಈಶ್ವರಪ್ಪ ಪ್ರಕರಣದಲ್ಲಿ ಕೆಲವು ಶಾಸಕರು ದೂರು ನೀಡಿದ್ದಾರೆ. ನೀವು ಹಣ ಬಿಡುಗಡೆ ಮಾಡಿದರು ಆರ್ಡಿಪಿಆರ್ ಬಿಡುಗಡೆ ಮಾಡ್ತಿಲ್ಲ ಅಂತ ದೂರಿದ್ದಾರೆ. ಅದಕ್ಕೆ ಸಿಎಂ ಮಧ್ಯಪ್ರವೇಶ ಮಾಡಿದ್ದಾರೆ. ಇದರಲ್ಲಿ ತಪ್ಪೆನಿಲ್ಲ ಎಂದು ಸಿಎಂ ಯಡಿಯೂರಪ್ಪರವರನ್ನು ಎಸ್.ಟಿ.ಸೋಮಶೇಖರ್ ಸಮರ್ಥಿಸಿಕೊಂಡರು.
ಇದನ್ನೂ ಓದಿ: ಕರುಣೆ ತೋರೋಣ : ಸುಡು ಬಿಸಿಲಿಗೆ ನಿತ್ರಾಣಗೊಂಡಿದೆ ಮೂಕ ಪ್ರಾಣಿ- ಪಕ್ಷಿ ಸಂಕುಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ