
ಮೈಸೂರು ದಸರಾ ಪ್ರಯುಕ್ತ ವಿಂಟೇಜ್ ಕಾರ್ ಶೋಗೆ ಚಾಲನೆ
Team Udayavani, Oct 1, 2022, 12:02 PM IST

ಮೈಸೂರು: ದಸರಾ ಪ್ರಯುಕ್ತ ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಆಯೋಜಿಸಿದ್ದ ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
80, 100 ವರ್ಷ ಹಳೆಯದಾದ ಮ್ಯಾರಿಸ್ ಮೈನರ್, ಅಸ್ಟಿನ್, ರೋಡ್ ಮಾಸ್ಟರ್, ರೋಲ್ಸ್ ರಾಯ್ಸ್ ಸೇರಿದಂತೆ ನಾನಾ ಮಾಡೆಲ್ ಕಾರುಗಳು ಮತ್ತು ಸ್ಕೂಟರ್ ಗಳ ವೀಕ್ಷಣೆ ಮಾಡಿದ ಸಚಿವರು, ವಿಂಟೇಜ್ ಕಾರಿನಲ್ಲಿ ಸಂಚರಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಇಷ್ಟೊಂದು ಬಗೆಬಗೆಯ ವಿಂಟೇಜ್ ಕಾರುಗಳನ್ನು ಹೊಂದಿರುವ ಉದ್ಯಮಿ ಗೋಪಿನಾಥ್ ಶೆಣೈ ಅವರಿಗೆ ಸರ್ಕಾರದ ಪರವಾನಗಿ ಅಭಿನಂದನೆಗಳು. ಅಮೆರಿಕ, ಆಸ್ಟ್ರೇಲಿಯಾ, ಜರ್ಮನಿ ಸೇರಿದಂತೆ ನಾನಾ ದೇಶಗಳ ತರಹವೇರಿ ಕಾರುಗಳು ಒಂದಕ್ಕಿಂತ ಒಂದು ವಿಭಿನ್ನವಾಗಿದೆ. 80, 100 ವರ್ಷಗಳ ಹಳೆಯ ಕಾರುಗಳ ನಿರ್ವಹಣೆ ಮಾಡುವುದು ಸುಲಭದ ಕೆಲಸವಲ್ಲ ಎಂದರು.
ಇದನ್ನೂ ಓದಿ:5ಜಿ ಸೇವೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ; ಅಗ್ಗದ ದರದಲ್ಲಿ ಇಂಟರ್ನೆಟ್ ಎಂದ ಜಿಯೋ
ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಬಿಜೆಪಿ ನಗರ ಜಿಲ್ಲಾಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಹಲವು ಮುಖಂಡರು ಜೊತೆಯಲ್ಲಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಭಾರತ ಇಂದು ನಿರ್ಭೀತ ಮತ್ತು ನಿರ್ಣಾಯಕ, ಸದೃಢ ಸರ್ಕಾರ ಹೊಂದಿದೆ: ರಾಷ್ಟ್ರಪತಿ ಮುರ್ಮು

ಮಂಗಳೂರು: ಮೊಬೈಲ್ ಬಳಸುವಾಗ ತಾಯಿ ಗದರಿದ್ದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 14 ವರ್ಷದ ಬಾಲಕ

ಕಾರು – ಬಸ್ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ಸಿದ್ದು ಹೆಣವನ್ನು ನಾಯಿನೂ ಮೂಸುವುದಿಲ್ಲ, ಅದನ್ನು ನಾವು ಯಾಕೆ ಮುಟ್ಟಬೇಕು: ಈಶ್ವರಪ್ಪ

ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೂ ಭಾರತದ ಬಜೆಟ್ ಮೇಲೆ ವಿಶ್ವದ ಚಿತ್ತ ನೆಟ್ಟಿದೆ; ಪ್ರಧಾನಿ ಮೋದಿ