ಪಂಚಭೂತಗಳಲ್ಲಿ ವಿಶಾಲಾಕ್ಷೀ ದೇವಿ ಲೀನ
Team Udayavani, Oct 21, 2018, 6:15 AM IST
ಮೈಸೂರು: ರಾಜವಂಶಸ್ಥೆ ವಿಶಾಲಾಕ್ಷೀ ದೇವಿ(56) ಅವರ ಅಂತ್ಯಸಂಸ್ಕಾರ ನಗರದ ಮೈಸೂರು-ಊಟಿ ರಸ್ತೆಯಲ್ಲಿರುವ
ಮಧುವನ (ಮನುವನ)ದಲ್ಲಿ ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಯದುವಂಶದ ಕುಡಿ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷೀ ದೇವಿ ಅವರು ಅನ್ಯಾರೋಗ್ಯದ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಹೀಗಾಗಿ, ರಾಜವಂಶಸ್ಥರ ಅಂತ್ಯಕ್ರಿಯೆ ನಡೆಸುವ ಮಧುವನದಲ್ಲೇ ಮೃತರ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿತ್ತು.
ಮೃತರ ಪಾರ್ಥಿವ ಶರೀರವನ್ನು ಶನಿವಾರ ಮಧ್ಯಾಹ್ನದ ವೇಳೆಗೆ ಬೆಂಗಳೂರಿನಿಂದ ಮೈಸೂರಿಗೆ ತರಲಾಯಿತು. ಈ ಸಂದರ್ಭದಲ್ಲಿ ಸಚಿವ ಸಾ.ರಾ.ಮಹೇಶ್, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ರಾಜವಂಶದ ಅನೇಕರೊಂದಿಗೆ ಹಲವು ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಬಳಿಕ, ಸಕಲ ಸರ್ಕಾರಿ ಗೌರವಗಳೊಂದಿಗೆ,ರಾಜಮನೆ ತನದ ಸಂಪ್ರದಾಯದಂತೆ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಈ ಮಧ್ಯೆ, ವಿಶಾಲಾಕ್ಷಿದೇವಿ,ಪುಟ್ಟರತ್ನಮ್ಮಣ್ಣಿ ಅವರ ನಿಧನಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ