ವಿಶ್ವನಾಥ್‌ ದಕ್ಷ ಆಡಳಿತಗಾರರು: ಮುಕಡಪ್ಪ


Team Udayavani, Nov 24, 2019, 3:00 AM IST

vishvanat-daksh

ಹುಣಸೂರು: ಎಲ್ಲಾ ವರ್ಗಗಳನ್ನು ಪ್ರೀತಿ-ವಿಶ್ವಾಸದಿಂದ ಕಾಣುವ ವಿಶ್ವನಾಥ್‌ ಒಬ್ಬ ದಕ್ಷ ಆಡಳಿತಗಾರರಾಗಿದ್ದು, ಈ ಉಪ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಅವರನ್ನು ಬೆಂಬಲಿಸಬೇಕೆಂದು ಅಹಿಂದ ರಾಜ್ಯಾಧ್ಯಕ್ಷ ಮುಕಡಪ್ಪ ಮನವಿ ಮಾಡಿದರು. ಕಾಗಿನೆಲೆ ಪೀಠದ ಸಂಸ್ಥಾಪಕ ಅಧ್ಯಕ್ಷರು, ಸಮಾಜವಾದಿಗಳಾಗಿರುವ ವಿಶ್ವನಾಥರಿಂದಾಗಿಯೇ ಸಿದ್ದರಾಮಯ್ಯ ಕಾಂಗ್ರೆಸ್ಸಿಗೆ ಬಂದು ಮುಖ್ಯಮಂತ್ರಿಯಾದವರು.

ಆದರೆ, ಕರೆತಂದವರನ್ನೇ ಹೊರ ಕಳುಹಿಸಿದ ಸಿದ್ದರಾಮಯ್ಯ ಒಬ್ಬ ಸ್ವಾರ್ಥಿ. ಉಡಾಫೆ ಮನುಷ್ಯ, ಕುರುಬ ಸಮಾಜಕ್ಕೆ ಏನು ಮಾಡಲಿಲ್ಲ. ಕನಿಷ್ಠ ಹಿಂದುಳಿವ ವರ್ಗಗಳಿಗೆ ನ್ಯಾಯ ಸಿಗುತ್ತಿದ್ದ ಜನಗಣತಿ ವರದಿ ಬಿಡುಗಡೆ ಮಾಡುವಲ್ಲಿ ಹಿಂದೇಟು ಹಾಕಿದರು ಎಂದು ದೂರಿದರು. ಆದರೆ, ಯಡಿಯೂರಪ್ಪ ಕೊಟ್ಟ ಮಾತಿನಿಂತೆ ನಡೆದುಕೊಳ್ಳವ ರಾಜಕಾರಣಿ. ಹೀಗಾಗಿ ಅವರನ್ನು ಬೆಂಬಲಿಸುತ್ತಿದ್ದೇವೆ. ಇನ್ನು ಮೋದಿಯವರ ಕಾರ್ಯಕ್ರಮಗಳನ್ನು ಮೆಚ್ಚಿ ಬಿಜೆಪಿ ಸೇರಿದ್ದೇವೆಂದರು.

ಸುದ್ದಿಗೋಷ್ಠಿಯಲ್ಲಿ ಅಖೀಲ ಭಾರತೀಯ ಮಡಿವಾಳ ಮಹಾಸಭಾದ ಅಧ್ಯಕ್ಷ ಜಿ.ಎಂಜೆರಪ್ಪ, ಬಿಜೆಪಿ ಮುಖಂಡ ಎಸ್‌.ಪುಟ್ಟಸ್ವಾಮಿ, ಹಿಂದುಳಿದ ವರ್ಗಗಳ ಮುಖಂಡ ಟಿ.ಬಿ.ಬೆಳಗಾವಿ, ಆದಿವಾಸಿ ಮುಖಂಡ ಗೋಪಾಲ್‌ ಪೂಜಾರಿ ಮತ್ತಿತರರಿದ್ದರು.

ವಿಶ್ವನಾಥ್‌ಗೆ ದಸಂಸ ಬೆಂಬಲ: ಹಿಂದಿನಿಂದಲೂ ಬಿಜೆಪಿಯನ್ನು ವಿರೋಧಿಸುತ್ತಲೇ ಬಂದಿರುವ ದಸಂಸ, ಈ ಬಾರಿ ಸಾಮಾಜಿಕ ನ್ಯಾಯ ಗೌರವಿಸುವ ಎಲ್ಲಾ ಸಮಾಜಗಳನ್ನು ಪ್ರೀತಿಯಿಂದ ಕಾಣುವ ಎಚ್‌.ವಿಶ್ವನಾಥ ಅವರನ್ನು ಬೆಂಬಲಿಸಲಿದೆ ಎಂದು ದಸಂಸ ಜಿಲ್ಲಾ ಕಾರ್ಯದರ್ಶಿ ನಿಂಗರಾಜಮಲ್ಲಾಡಿ ತಿಳಿಸಿದರು.

ಜನರಿಗಾಗಿ ಜಾಗೃತಿ ವೇದಿಕೆ ಸಂಚಾಲಕ ಡೀಡ್‌ ಡಾ.ಶ್ರೀಕಾಂತ್‌ ಮಾತನಾಡಿ, ಚುನಾವಣೆಗಾಗಿ ಜನಸಾಮಾನ್ಯರ ಪ್ರಣಾಳಿಕೆ ಹುಣಸೂರನ್ನು ಜಿಲ್ಲೆಯಾಗಿ ಘೋಷಿಸುವುದು, ಲಕ್ಷ್ಮಣತೀರ್ಥ ನದಿ ಶುದ್ಧೀಕರಣ ಹಾಗೂ ಆದಿವಾಸಿಗಳಿಗೆ ಸಂಬಂಧಿಸಿದ ಅರಣ್ಯ ಹಕ್ಕು ಮಾನ್ಯತಾ ಕಾಯ್ದೆ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಣಾಳಿಕೆಯಲ್ಲಿ ಸೇರಿಸಿದ್ದಲ್ಲಿ ಬಿಜೆಪಿ ಬೆಂಬಲಿಸುವುದಾಗಿ ತಿಳಿಸಿದರು. ಗೋಷ್ಠಿಯಲ್ಲಿ ರಾಮು, ದೇವೇಂದ್ರ, ಕೆಂಪರಾಜು, ಶೇಖರ್‌ ಇದ್ದರು.

ಹಾಲುಮತ ಮಹಾಸಭಾ ಬೆಂಬಲ: ಈ ಚುನಾವಣೆಯಲ್ಲಿ ವಿಶ್ವನಾಥರು ಗೆಲ್ಲಬೇಕಿರುವುದು ಈ ರಾಜ್ಯದ ಜನರ ಆಶಯವಾಗಿದ್ದು, ಹಾಲುಮತ ಸಂಘಟನೆ ತಾಲೂಕಿನಲ್ಲಿ ಮನೆಮನೆಗೆ ತೆರಳಿ ವಿಶ್ವನಾಥ ಅವರನ್ನು ಬೆಂಬಲಿಸುವಂತೆ ಕೋರಲಾಗುವುದೆಂದು ಅಖೀಲ ಕರ್ನಾಟಕ ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ಬಿ.ಮಲ್ಲೇಶ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗೋಷ್ಠಿಯಲ್ಲಿ ಮಹಾಸಭಾದ ಬೀರೇಶ್‌, ಸೋಮಣ್ಣ, ಚಿಕ್ಕಸ್ವಾಮಿ, ಉಮೇಶ್‌ ಇದ್ದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.