ಮಳೆ ಹಾನಿ ಪ್ರದೇಶಗಳಿಗೆ ವಿಶ್ವನಾಥ್‌ ಭೇಟಿ


Team Udayavani, Apr 25, 2019, 3:00 AM IST

malehaani

ಹುಣಸೂರು: ಬಿರುಗಾಳಿ ಮಳೆಗೆ ಹಾನಿಗೀಡಾದ ಹನಗೋಡು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ, ಶಾಸಕ ಎಚ್‌.ವಿಶ್ವನಾಥ್‌ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಲ್ಲಹಳ್ಳಿ, ಹುಣಸೇಗಾಲ, ಆಡಿಗನಹಳ್ಳಿ, ತಟ್ಟೆಕೆರೆ, ಮುದಗನೂರು, ಹನಗೋಡು ಮತ್ತಿತರ ಕಡೆ ಪರಿಶೀಲಿಸಿದರು. ಕಲ್ಲಹಳ್ಳಿಯಲ್ಲಿ ಗುಡಿಸಿಲು ಮೇಲ್ಛಾವಣಿ ಕುಸಿದು ಮೃತಪಟ್ಟ ವೃದ್ಧೆ ದೊಡ್ಡತಾಯಮ್ಮರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ರಾಷ್ಟ್ರೀಯ ಪ್ರಕೃತಿ ವಿಕೋಪ ಯೋಜನೆಯಡಿ ತಕ್ಷಣವೇ 4 ಲಕ್ಷ ರೂ. ಹಾಗೂ ಮುಖ್ಯಮಂತ್ರಿಗಳ ನಿಧಿಯಿಂದ ಲಕ್ಷ ರೂ. ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಆಡಿಗನಹಳ್ಳಿಯಲ್ಲಿ ಡಿ.ದೇವರಾಜ ಅರಸ ಅವರ ಜಮೀನಿನಲ್ಲಿ ಮನೆ ಮಾಡಿಕೊಂಡಿದ್ದ ವೃದ್ಧೆ ದೊಡ್ಡಮ್ಮತಾಯಿ ಮೇಲ್ಛಾವಣಿ ಕುಸಿದ ಪರಿಣಾಮ ಮಲಗಿದ್ದಲ್ಲೇ ಮೃತಪಟ್ಟಿದ್ದರು. ಮೃತರಅಂತ್ಯಸಂಸ್ಕಾರದಲ್ಲಿ ಶಾಸಕ ಪಾಲ್ಗೊಂಡರು. ಆಡಿಗನಹಳ್ಳಿಯಲ್ಲಿ ಮನೆಯ ಮೇಲೆ ತೆಂಗಿನಮರವೊಂದು ಬಿದ್ದಿರುವುದನ್ನೂ ಗಮನಿಸಿದರು.

ನಂತರ ಹುಣಸೇಗಾಲ ಹಾಗೂ ಆಡಿಗನಹಳ್ಳಿಗೆ ತೆರಳಿ ಹಾನಿ ಕುರಿತು ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು. ಮುದಗನೂರು, ಕೊಳವಿಗೆ, ಹನಗೋಡು ಇತರೆ ಗ್ರಾಮಗಳಿಗೂ ಭೇಟಿ ನೀಡಿ ಪರಿಶೀಲಿಸಿದರು.

ಹೆಚ್ಚಿನ ಪರಿಹಾರಕ್ಕೆ ಕ್ರಮ: ನಮ್ಮದೇ ಸರ್ಕಾರವಿದೆ. ಅಧಿಕಾರಿಗಳು ನಷ್ಟದ ಅಂದಾಜಿನ ವರದಿಯನ್ನು ತಕ್ಷಣವೇ ಸಲ್ಲಿಸಬೇಕು. ತಾವು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಪರಿಹಾರ ಕೊಡಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಹನಗೋಡು ಜಿಪಂ ಸದಸ್ಯ ಕಟ್ಟನಾಯಕ ಮಾತನಾಡಿ, ಹನಗೋಡು ನಾಡ ಕಚೇರಿಯ ಆರ್‌.ಐ.ರಾಜ್‌ಕುಮಾರ್‌, ಸೆಸ್ಕ್ ಇಂಜಿನಿಯರ್‌ ರೈತರಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಬಸವರಾಜು, ಸೆಸ್ಕ್ ಎಇಇ ಸಿದ್ದಪ್ಪ, ಕೃಷಿ ಹಾಗೂ ತೋಟಗಾರಿಗೆ ಇಲಾಖೆ ಅಧಿಕಾರಿಗಳು, ಕಲ್ಲಹಳ್ಳಿ ಗ್ರಾಪಂ ಅಧ್ಯಕ್ಷ ತಮ್ಮೇಗೌಡ, ತಾಲೂಕು ಜೆಡಿಎಸ್‌ ಅಧ್ಯಕ್ಷ ಹರಳಹಳ್ಳಿ ಮಹದೇವೇಗೌಡ, ಪಿಡಿಒ ಅರುಣ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.