
ನಾನು ಎನ್ನುವ ಅಹಂಕಾರ ನಿಮ್ಮನ್ನಿಲ್ಲಿಗೆ ತೆಗೊಂಡೋಗಿದೆ: ಸಿದ್ದು ವಿರುದ್ಧ ವಿಶ್ವನಾಥ್ ಕಿಡಿ
Team Udayavani, Feb 20, 2021, 3:04 PM IST

ಮೈಸೂರು: ನಾನು ನಾನು ಎನ್ನುವು ದುರಹಂಕಾರ, ದರ್ಪ ನಿಮ್ಮನ್ನು ಇಲ್ಲಿಗೆ ತಗೊಂಡು ಹೋಗಿದೆ. ನಾನೇ ಮುಖ್ಯಮಂತ್ರಿ ಆಗುತ್ತೇನೆ ಎನ್ನುತ್ತಾರೆ. ಚುನಾವಣೆಗೆ ಇನ್ನೂ ಎರಡೂವರೆ ವರ್ಷವಿದೆ, ಜನರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಯಾರಿಗೆ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುರುಬರಿಗೆ ಸಿದ್ದರಾಮಯ್ಯನವರ ಕಾಲದಲ್ಲಿ ಆದಷ್ಟು ಅನ್ಯಾಯ ಯಾವಾಗಲೂ ಆಗಿಲ್ಲ. ಕೊನೆಯಲ್ಲಿ ಸಿಕ್ಕಿಸಿಕ್ಕದ್ದಕ್ಕೆ ಹಣ ಕೊಟ್ಟು ಹೋದರು. ಮತ್ತೆ ಮುಖ್ಯಮಂತ್ರಿಯಾಗುದಲ್ಲವೆಂದು ನಿಮಗೆ ಗೊತ್ತಿತ್ತು. ಶಿಳ್ಳೆ, ಕೇಕೆಗಷ್ಟೇ ಸಿದ್ದರಾಮಯ್ಯ ಭಾಷಣ ಮಾಡ್ತಾರೆ. ದೇವರಾಜ ಅರಸು ಅವರಿಗಿಂತ ದೊಡ್ಡ ಆಡಳಿತಗಾರನ ನೀವು ಎಂದು ಕುಟುಕಿದರು.
ಇದನ್ನೂ ಓದಿ:ರಾಮ ಜನರ ಧಾರ್ಮಿಕ ನಂಬಿಕೆ, ನಾನೂ ರಾಮಮಂದಿರ ಕಟ್ಟಿಸುತ್ತಿದ್ದೇನೆ: ಸಿದ್ದರಾಮಯ್ಯ
ನಾನು ಆಳಾಗಿದ್ದು ಸಿದ್ದರಾಮಯ್ಯನನ್ನು ಉದ್ದಾರ ಮಾಡಲು ಹೋಗಿ. ದೇವೇಗೌಡರು ನಿನ್ನನ್ನು ಪಕ್ಷದಿಂದ ಹೊರ ಹಾಕಿದ್ದರು. ನಾನು ಸಾಕಷ್ಟು ಜನರ ಕಾಲು ಹಿಡಿದು ನಿನ್ನನ್ನು ಪಕ್ಷಕ್ಕೆ ಕರೆದುಕೊಂಡು ಬಂದೆ. ನಿನ್ನನ್ನು ಉದ್ದಾರ ಮಾಡಲು ಹೋಗಿ ನಾನು ಆಳಾದೆ ಎಂದು ಏಕವಚನದಲ್ಲಿ ಕಿಡಿಕಾರಿದರು.
ಸಂಗೊಳ್ಳಿ ರಾಯಣ ಅಭಿವೃದ್ಧಿಗೆ 260 ಕೋಟಿ ಹಣ ಬಿಡುಗಡೆ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ಕೊಟ್ಟಿದ್ದು ಕೇವಲ 10 ಕೋಟಿ ಮಾತ್ರ. ಕೇವಲ ಬಜೆಟ್ನಲ್ಲಿ ಹೇಳಿ ಹೋದರೆ ಆಗಲಿಲ್ಲ. ಮೇಲಾಗಿ ಅದಕ್ಕಾಗಿ ಹಣವನ್ನು ಮೀಸಲಿಡಬೇಕಿತ್ತು. ಎಫ್ಡಿ ಹಣ ಮೀಸಲಿಟ್ಟು ಮಾತನಾಡಬೇಕಿತ್ತು. ಅದು ಬಿಟ್ಟು ನಾನೇ ಜನಾಂಗವನ್ನು ಉದ್ದಾರೆ ಮಾಡಿದೆ ಎನ್ನುವುದು ಸರಿಯಲ್ಲ ಎಂದು ಹೇಳಿದರು.
ಇದನ್ನೂ ಓದಿ: ಸಂಬಂಧಿಕರ ಮದುವೆಗಾಗಿ ಬರುತ್ತಿದ್ದವರ ಕಾರಿನ ಟಯರ್ ಸ್ಫೋಟ: ಪತಿ ಸಾವು, ಪತ್ನಿ ಗಂಭೀರ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಕಾಶ್ಮೀರ ಕುರಿತ ಹೇಳಿಕೆ; ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ವಿವೇಕ್ ಅಗ್ನಿಹೋತ್ರಿ

ಬಳ್ಳಾರಿಯಲ್ಲಿ ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!!

180 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಢಿಕ್ಕಿ ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ಡಾ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ : ಅಭಿಮಾನಿಗಳ ಭಾವನೆಗಳಿಗೆ ಸಕಾರಾತ್ಮಕ ಸ್ಪಂದನೆ: ಸಿಎಂ

ಪಾಕಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ: ಕಳೆದ 10 ದಿನದಲ್ಲಿ 2ನೇ ಬಾರಿ ಕಂಪಿಸಿದ ಭೂಮಿ