ಪಿರಿಯಾಪಟ್ಟಣ: ದೃಷ್ಟಿ ವಿಶೇಷ ಚೇತನ ಯುವತಿ ಯುಪಿಎಸ್ಸಿಯಲ್ಲಿ 425 ನೇ ರ್ಯಾಂಕ್ ಸಾಧನೆ
Team Udayavani, May 31, 2022, 2:33 PM IST
ಪಿರಿಯಾಪಟ್ಟಣ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಪ್ರಸ್ತುತ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ತಾಲೂಕಿನ ಕುಡುಕೂರು ಗ್ರಾಮದ ಕೆ.ಟಿ. ಮೇಘನಾ ಅವರು 425 ನೇ ರ್ಯಾಂಕ್ ಪಡೆದಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಕುಡುಕೂರು ಮೂಲದವರಾದ ಇವರು ಹಾಲಿ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಾಗಿದ್ದಾರೆ. ತಾಂಡವಮೂರ್ತಿ ಹಾಗೂ ನವನೀತ ದಂಪತಿ ಪುತ್ರಿ.
ಮೇಘನಾ ಅವರು ಪೂರ್ಣ ಪ್ರಮಾಣದಲ್ಲಿ ದೃಷ್ಟಿ ಸಮಸ್ಯೆ ಎದುರಿಸುತ್ತಿದ್ದಾರೆ. 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ರೆಟಿನಾ ಸಮಸ್ಯೆ ಎದುರಾಗಿ ಶೇ.70 ರಷ್ಟು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದರು. ಆದರೆ ತಮಗಿರುವ ಈ ವೈಕಲ್ಯವನ್ನು ಮೆಟ್ಟಿನಿಂತು ಯುಪಿಎಸ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ.
2020 ನೇ ಸಾಲಿನಲ್ಲೂ ಮೇಘನ 465ನೇ ರ್ಯಾಂಕ್ ಪಡೆದಿದ್ದರು. ಶಾಲಾ ಕಾಲೇಜು ಶಿಕ್ಷಣವನ್ನು ಬೆಂಗಳೂರಿನಲ್ಲಿ ಮುಗಿಸಿದ್ದ ಮೇಘನಾ, 2015ನೇ ಬ್ಯಾಚ್ ನಲ್ಲಿ ಕೆಎಎಸ್ ಪರೀಕ್ಷೆಯಲ್ಲಿ 11ನೇ ರ್ಯಾಂಕ್ ಪಡೆದು ಪಾಸಾಗಿದ್ದರು. ಮಗಳ ಸಾಧನೆ ಬಗ್ಗೆ ಪೋಷಕರು, ಕುಟುಂಬಸ್ಥರು ಸೇರಿದಂತೆ ಪಿರಿಯಾಪಟ್ಟಣ ತಾಲೂಕಿನ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್