ಪ್ರವಾಸಿಗರಿಗೆ ಮೈಸೂರು ಪಾಕ್‌, ಗುಲಾಬಿ ಹೂ ಸ್ವಾಗತ


Team Udayavani, Sep 28, 2021, 4:45 PM IST

Untitled-1

ಮೈಸೂರು: ಪ್ರವಾಸಿ ತಾಣಗಳಿಗೆ ಹೋಗುವ ಪ್ರವಾಸಿಗರು ಪರಿಸರ ಸಂರಕ್ಷಣೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್‌. ಆರ್‌. ಮಹದೇವಸ್ವಾಮಿ ಹೇಳಿದರು.

ವಿಶ್ವ ಪ್ರವಾಸಿಗರ ದಿನಾಚರಣೆ ಅಂಗವಾಗಿ ಕರ್ನಾಟಕ ಮೃಗಾಲಯಪ್ರಾಧಿಕಾರ ಮತ್ತು ಅಪೂರ್ವ ಸ್ನೇಹಬಳಗದ ವತಿಯಿಂದ ಮೃಗಾಲಯಆವರಣದಲ್ಲಿ ಪ್ರವಾಸಿಗರಿಗೆ ಮೈಸೂರುಪಾಕ್‌ ಹಾಗೂ ಗುಲಾಬಿ ಹೂ ನೀಡಿ ಶುಭ ಕೋರಿ ಮಾತನಾಡಿದರು.

ಮೈಸೂರಿನಲ್ಲಿ ಪ್ರವಾಸೋದ್ಯಮಕ್ಕೆ ಅದ್ಭುತ ಅವಕಾಶಗಳಿದ್ದು, ದಕ್ಷಿಣ ಭಾರತದ ಪ್ರಮುಖ ಪ್ರವಾಸಿ ಕೇಂದ್ರವಾಗಿ ರೂಪುಗೊಂಡಿದೆ. ಇಂದು ಪ್ರವಾಸಿ ತಾಣಗಳಿಗೆ ಹೋಗುವ ಪ್ರವಾಸಿಗರುಪರಿಸರ ಸಂರಕ್ಷಣೆ ಮನೋಭಾವರೂಢಿಸಿಕೊಳ್ಳಬೇಕಿದೆ. ಕಸ, ಪ್ಲಾಸಿಕನ್ನುಎಲ್ಲೆಂದರಲ್ಲಿ ಎಸೆಯದೇ ನಿಗದಿತಜಾಗದಲ್ಲೇ ಹಾಕಬೇಕು ಎಂದು ಮನವಿ ಮಾಡಿದರು.

ಮೈಸೂರು ಪ್ರವಾಸಿ ತಾಣಗಳ ಅಭಿವೃದ್ಧಿ ಪರಿಸರಕ್ಕೆ ಪೂರಕವಾಗಿದೆ. ಕೆಲವು ಖಾಸಗಿ ವಲಯಗಳಲ್ಲಿ ಹಲವುಕಡೆ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನುಒದಗಿಸಿಕೊಡುವ ಹಿನ್ನೆಲೆಯಲ್ಲಿ ಮಾನವ ನಿರ್ಮಿತ ಕಟ್ಟಡಗಳು ಹೆಚ್ಚಾಗುತ್ತಿವೆ.ಇದರಿಂದಾಗಿ ಪ್ರಾಕೃತಿಕ ಸೌಂದರ್ಯ ಹಾಳಾಗಬಾರದು ಎಂದರು.

ಈ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಸದಸ್ಯೆ ಜ್ಯೋತಿ ರೇಚಣ್ಣ, ಮುಡಾ ಲಕ್ಷ್ಮೀದೇವಿ, ಮಹಿಳಾ ಮತ್ತುಮಕ್ಕಳ ಕಲ್ಯಾಣ ರಾಜ್ಯ ಅಭಿವೃದ್ಧಿ ನಿಗಮನಿರ್ದೇಶಕ ರೇಣುಕರಾಜ, ಅಪೂರ್ವಸ್ನೇಹ ಬಳಗದ ಅಧ್ಯಕ್ಷ ಅಪೂರ್ವಸುರೇಶ್‌, ರವಿಶಂಕರ್‌, ಅಜಯ್‌ ಶಾಸ್ತ್ರಿ, ರಾಕೇಶ್‌ ಕುಂಚಿಟಿಗ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರು ಪಾಕ್‌ನಿಂದ ಆರೋಗ್ಯ ವೃದ್ಧಿ:

ಮೈಸೂರು ಪಾಕ್‌ ಮೈಸೂರು ಅವರದ್ದೇ ಎಂದು ಪ್ರವಾಸಿಗರಿಗೆ ತಿಳಿಸಿ ಅರಿವು ಮೂಡಿಸಲಾಗುತ್ತಿದೆ. ಸಂತಸದ ಸಂಕೇತ ಸಿಹಿಯಾಗಿದ್ದು, ಇದು ಕೆಲವರು ಆರೋಗ್ಯಕ್ಕೆ ಹಾನಿಕರ ಎಂದು ಭಾವಿಸಲಾಗುತ್ತಿದೆ. ಮೈಸೂರು ಪಾಕ್‌ ತಿಂದರೆ ಆರೋಗ್ಯ ವೃದ್ಧಿಸುತ್ತದೆ. ಕಡಲೇ ಹಿಟ್ಟು ಚರ್ಮದ ಕಾಯಿಲೆ ಗುಣಪಡಿಸುತ್ತದೆ.ಸಕ್ಕರೆಯಲ್ಲಿ ಆಮ್ಲಜನಕ ಹೆಚ್ಚಾಗಿದ್ದು. ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ತುಪ್ಪವು ಮೂಳೆ ಸವೆತವನ್ನು ನಿವಾರಿಸುತ್ತದೆ ಎಂದು ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಎಸ್‌.ಇ ಗಿರೀಶ್‌ ತಿಳಿಸಿದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.