
ಪ್ರವಾಸಿಗರಿಗೆ ಮೈಸೂರು ಪಾಕ್, ಗುಲಾಬಿ ಹೂ ಸ್ವಾಗತ
Team Udayavani, Sep 28, 2021, 4:45 PM IST

ಮೈಸೂರು: ಪ್ರವಾಸಿ ತಾಣಗಳಿಗೆ ಹೋಗುವ ಪ್ರವಾಸಿಗರು ಪರಿಸರ ಸಂರಕ್ಷಣೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್. ಆರ್. ಮಹದೇವಸ್ವಾಮಿ ಹೇಳಿದರು.
ವಿಶ್ವ ಪ್ರವಾಸಿಗರ ದಿನಾಚರಣೆ ಅಂಗವಾಗಿ ಕರ್ನಾಟಕ ಮೃಗಾಲಯಪ್ರಾಧಿಕಾರ ಮತ್ತು ಅಪೂರ್ವ ಸ್ನೇಹಬಳಗದ ವತಿಯಿಂದ ಮೃಗಾಲಯಆವರಣದಲ್ಲಿ ಪ್ರವಾಸಿಗರಿಗೆ ಮೈಸೂರುಪಾಕ್ ಹಾಗೂ ಗುಲಾಬಿ ಹೂ ನೀಡಿ ಶುಭ ಕೋರಿ ಮಾತನಾಡಿದರು.
ಮೈಸೂರಿನಲ್ಲಿ ಪ್ರವಾಸೋದ್ಯಮಕ್ಕೆ ಅದ್ಭುತ ಅವಕಾಶಗಳಿದ್ದು, ದಕ್ಷಿಣ ಭಾರತದ ಪ್ರಮುಖ ಪ್ರವಾಸಿ ಕೇಂದ್ರವಾಗಿ ರೂಪುಗೊಂಡಿದೆ. ಇಂದು ಪ್ರವಾಸಿ ತಾಣಗಳಿಗೆ ಹೋಗುವ ಪ್ರವಾಸಿಗರುಪರಿಸರ ಸಂರಕ್ಷಣೆ ಮನೋಭಾವರೂಢಿಸಿಕೊಳ್ಳಬೇಕಿದೆ. ಕಸ, ಪ್ಲಾಸಿಕನ್ನುಎಲ್ಲೆಂದರಲ್ಲಿ ಎಸೆಯದೇ ನಿಗದಿತಜಾಗದಲ್ಲೇ ಹಾಕಬೇಕು ಎಂದು ಮನವಿ ಮಾಡಿದರು.
ಮೈಸೂರು ಪ್ರವಾಸಿ ತಾಣಗಳ ಅಭಿವೃದ್ಧಿ ಪರಿಸರಕ್ಕೆ ಪೂರಕವಾಗಿದೆ. ಕೆಲವು ಖಾಸಗಿ ವಲಯಗಳಲ್ಲಿ ಹಲವುಕಡೆ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನುಒದಗಿಸಿಕೊಡುವ ಹಿನ್ನೆಲೆಯಲ್ಲಿ ಮಾನವ ನಿರ್ಮಿತ ಕಟ್ಟಡಗಳು ಹೆಚ್ಚಾಗುತ್ತಿವೆ.ಇದರಿಂದಾಗಿ ಪ್ರಾಕೃತಿಕ ಸೌಂದರ್ಯ ಹಾಳಾಗಬಾರದು ಎಂದರು.
ಈ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಸದಸ್ಯೆ ಜ್ಯೋತಿ ರೇಚಣ್ಣ, ಮುಡಾ ಲಕ್ಷ್ಮೀದೇವಿ, ಮಹಿಳಾ ಮತ್ತುಮಕ್ಕಳ ಕಲ್ಯಾಣ ರಾಜ್ಯ ಅಭಿವೃದ್ಧಿ ನಿಗಮನಿರ್ದೇಶಕ ರೇಣುಕರಾಜ, ಅಪೂರ್ವಸ್ನೇಹ ಬಳಗದ ಅಧ್ಯಕ್ಷ ಅಪೂರ್ವಸುರೇಶ್, ರವಿಶಂಕರ್, ಅಜಯ್ ಶಾಸ್ತ್ರಿ, ರಾಕೇಶ್ ಕುಂಚಿಟಿಗ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು ಪಾಕ್ನಿಂದ ಆರೋಗ್ಯ ವೃದ್ಧಿ:
ಮೈಸೂರು ಪಾಕ್ ಮೈಸೂರು ಅವರದ್ದೇ ಎಂದು ಪ್ರವಾಸಿಗರಿಗೆ ತಿಳಿಸಿ ಅರಿವು ಮೂಡಿಸಲಾಗುತ್ತಿದೆ. ಸಂತಸದ ಸಂಕೇತ ಸಿಹಿಯಾಗಿದ್ದು, ಇದು ಕೆಲವರು ಆರೋಗ್ಯಕ್ಕೆ ಹಾನಿಕರ ಎಂದು ಭಾವಿಸಲಾಗುತ್ತಿದೆ. ಮೈಸೂರು ಪಾಕ್ ತಿಂದರೆ ಆರೋಗ್ಯ ವೃದ್ಧಿಸುತ್ತದೆ. ಕಡಲೇ ಹಿಟ್ಟು ಚರ್ಮದ ಕಾಯಿಲೆ ಗುಣಪಡಿಸುತ್ತದೆ.ಸಕ್ಕರೆಯಲ್ಲಿ ಆಮ್ಲಜನಕ ಹೆಚ್ಚಾಗಿದ್ದು. ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ತುಪ್ಪವು ಮೂಳೆ ಸವೆತವನ್ನು ನಿವಾರಿಸುತ್ತದೆ ಎಂದು ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಎಸ್.ಇ ಗಿರೀಶ್ ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

Hunsur: ದೆಹಲಿ ಲೈಂಗಿಕ ದೌರ್ಜನ್ಯದ ಆರೋಪಿ ಬಂಧಿಸಲು ಆಗ್ರಹ

ಪಠ್ಯಪುಸ್ತಕ ವಿಚಾರದಲ್ಲಿ ಬಿಜೆಪಿ ಮಾಡಿದ ಎಡವಟ್ಟು ಸರಿ ಮಾಡುತ್ತೇವೆ: ಸಚಿವ ಮಹದೇವಪ್ಪ

ರಾಜ್ಯದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ

ಬಡವರ ಕೆಲಸದ ಬಗ್ಗೆ ನಿರ್ಲಕ್ಷ್ಯ ತರವಲ್ಲ: ಶಾಸಕ ಹರೀಶ್ ಗೌಡ ಎಚ್ಚರಿಕೆ