ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸಿ
Team Udayavani, May 7, 2018, 2:49 PM IST
ಹುಣಸೂರು: ಮತದಾನ ಜಾಗೃತಿಗಾಗಿ ಸ್ವೀಪ್ ಸಮಿತಿ ಪ್ರಜಾಪ್ರಭುತ್ವ ಸಬಲೀಕರಣ ಅಭಿಯಾನದಡಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಹುಣಸೂರು ತಾಪಂ ಕಚೇರಿ ಹೊರಾವರಣದಲ್ಲಿ ದಿಶಾ ಫೌಂಡೇಶನ್ ಸಹಯೋಗದಲ್ಲಿ ಆಯೋಜಿದ್ದ ಸ್ಪರ್ಧೆಯಲ್ಲಿ 42 ಮಹಿಳೆಯರು ಭಾಗವಹಿಸಿ ಬಣ್ಣ-ಬಣ್ಣದ ರಂಗೋಲಿ ಬಿಡಿಸಿದರು. ಉತ್ತಮ ರಂಗೋಲಿ ಬಿಡಿಸಿದ ಮಹಿಳೆಯರಿಗೆ ಬಹುಮಾನ ಹಾಗೂ ಭಾಗವಹಿಸಿದ್ದ ಎಲ್ಲರಿಗೂ ಸಮಾಧಾನಕರ ಬಹುಮಾನ ವಿತರಿಸಲಾಯಿತು.
ಪ್ರಮಾಣ ಸ್ವೀಕಾರ: ಇದೇ ಸಂದರ್ಭದಲ್ಲಿ ಸೇವಾ ಮನೋಭಾವವಿರುವ, ಸರ್ವರ ಕ್ಷೇಮಾಭಿವೃದ್ಧಿ ಅಭ್ಯರ್ಥಿಗೆ ಆಸೆ ಆಮಿಷಗಳಿಗೆ ಬಲಿಯಾಗದೆ ಕಡ್ಡಾಯವಾಗಿ ಮತ ಚಲಾಯಿಸುತ್ತೇವೆಂದು ಮಹಿಳೆಯರು ಹಾಗೂ ತಾಪಂ ಇಒ ಕಷ್ಣಕುಮಾರ್, ಸಂಜೀವಿನಿ ಯೋಜನೆಯ ಮುಖ್ಯಸ್ಥೆ ಮಂಜುಳಾ ಸೇರಿದಂತೆ ಇತರರು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಮತದಾನ ಹೆಚ್ಚಲಿ: ಚುನಾವಣಾ ಆಯೋಗದ ಸೂಚನೆಯಂತೆ ಸ್ವೀಪ್ ಸಮಿತಿ ವತಿಯಿಂದ ಈಗಾಗಲೇ ಹಳ್ಳಿಗಳಲ್ಲಿ ಸೈಕಲ್-ಬೈಕ್, ಜಾಗೃತಿ ಜಾಥಾಗಳು ನಡೆದಿವೆ. ಮತದಾನವನ್ನು ಹಬ್ಬದಂತೆ ಆಚರಿಸಲು ವಿಶೇಷ ಕಾರ್ಯಕ್ರಮ ರೂಪಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದರು. ಈ ಸಂದರ್ಭದಲ್ಲಿ ದಿಶಾ ಫೌಂಡೇಶನ್ನ ಬೋರಪ್ಪ, ನಾಗೇಂದ್ರ, ಪಿಡಿಒ ನರಹರಿ, ಸಂಜೀವಿನಿ ಯೋಜನೆಯ ಪ್ರವೀಣ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್