ಅರಸು ಕಲ್ಲಹಳ್ಳಿಯಲ್ಲಿ ಮತದಾನ ಬಹಿಷ್ಕಾರ


Team Udayavani, Apr 9, 2019, 3:00 AM IST

arusukallahalli

ಹುಣಸೂರು: ತಾಲೂಕಿನ ಅರಸು ಕಲ್ಲಹಳ್ಳಿಯ ಗ್ರಾಮ ಪಂಚಾಯ್ತಿ ಕಟ್ಟಡವನ್ನು ಹುಣಸೂರು-ವಿರಾಜಪೇಟೆ ಹೆದ್ದಾರಿಯ ಬಳಿಯ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲು ಹಲವಾರು ಬಾರಿ ಒತ್ತಾಯಿಸಿದ್ದರೂ ಸ್ಪಂದಿಸದಿರುವ ತಾಲೂಕು ಆಡಳಿತದ ಧೋರಣೆಯನ್ನು ಖಂಡಿಸಿ ಕಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಹಳ್ಳಿಗರು ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಈ ಸಂಬಂದ ಕಲ್ಲಹಳ್ಳಿ ಗ್ರಾಪಂ ಗೇಟ್‌ ಬಳಿ ಹುಣಸೇಗಾಲ, ಮಂಗಳೂರುಮಾಳ, ಮುತ್ತುರಾಯನಹೊಸಹಳ್ಳಿ, ಆಡಿಗನಹಳ್ಳಿಯ ಗ್ರಾಮಸ್ಥರು ಕಲ್ಲಹಳ್ಳಿ ಗ್ರಾಪಂ ಅಧ್ಯಕ್ಷ ತಮ್ಮೇಗೌಡರ ಸಮ್ಮುಖದಲ್ಲಿ ಸೋಮವಾರ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ತಮ್ಮೇಗೌಡ, ಮುಖಂಡರಾದ ವೆಂಕಟೇಶ್‌, ಬೈರು, ಅಪ್ಪಣ್ಣ, ಶಿವರಾಮು, ಜಗದೀಶ್‌, ಗ್ರಾಪಂ ಕೇಂದ್ರವು ಊರಿನ ಒಳಗಿದ್ದು, ಹೋಗಿ ಬರಲು ತೊಂದರೆಯಾಗುತ್ತಿದೆ. ಇದರಿಂದ ಕೆಲಸ ಕಾರ್ಯಕ್ಕೂ ತೊಡಕಾಗುತ್ತಿದೆ. ಗ್ರಾಪಂ ಕಟ್ಟಡ ದೇವರಾಜು ಅರಸರ ಪುತ್ರಿ ಭಾರತಿ ಅರಸ್‌ಗೆ ಸೇರಿದ್ದು, ಕಟ್ಟಡ ತೆರವಿಗೆ ನೋಟಿಸ್‌ ನೀಡಿದ್ದಾರೆ.

2017ರಿಂದ ಈವರೆಗೆ ಹಲವಾರು ಬಾರಿ ಗೇಟ್‌ ಬಳಿ ಇರುವ ಸರ್ವೆ ನಂ.67ರಲ್ಲಿ 5 ಗುಂಟೆ ಜಮೀನಿದ್ದು, ಇಲ್ಲಿ ಗ್ರಾಪಂ ಕೇಂದ್ರ ನಿರ್ಮಿಸಲು ನಿರ್ಣಯ ಕೈಗೊಂಡು ಹತ್ತಾರು ಬಾರಿ ಕಂದಾಯ ಇಲಾಖೆಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ.

ಇದರಿಂದ ಬೇಸತ್ತು ಈ ಬಾರಿಯ ಚುನಾವಣೆ ಬಹಿಷ್ಕರಿಸುತ್ತೇವೆ. ಜೊತೆಗೆ ಚುನಾವಣೆಗೂ ಮುನ್ನ ಅಧಿಕೃತ ಘೋಷಣೆಯಾಗದಿದ್ದಲ್ಲಿ ಗ್ರಾಪಂ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೇವೆಂದು ಘೋಷಿಸಿದರು.

ಮಂಗಳೂರು ಮಾಳದಲ್ಲೂ ಬಹಿಷ್ಕಾರ: ಇದೇ ವೇಳೆ ಮಂಗಳೂರು ಮಾಳ ಗ್ರಾಮದ ಯಜಮಾನ ಬೈರು ಮಾತನಾಡಿ, ತಮ್ಮ ಗ್ರಾಮಕ್ಕೆ ಸಂಪರ್ಕ ರಸ್ತೆ ಕಲ್ಪಿಸಲು ಮನವಿ ಮಾಡಿದ್ದೆವು. ಟೆಂಡರ್‌ ಆಗಿದೆ ಎಂದು ಎರಡು ವರ್ಷದಿಂದ ಸಬೂಬು ಹೇಳುತ್ತಿದ್ದಾರೆ.

ನಮ್ಮೂರಿಗೆ ರಸ್ತೆ ನಿರ್ಮಿಸಿಕೊಡಬೇಕು ಹಾಗೂ ಗ್ರಾಪಂ ಕೇಂದ್ರವನ್ನು ಗೇಟ್‌ ಬಳಿಗೆ ಸ್ಥಳಾಂತರಿಸುವವರೆಗೆ ಮಂಗಳೂರು ಮಾಳ ಗ್ರಾಮಸ್ಥರು ಮತದಾನದಲ್ಲಿ ಭಾಗವಹಿಸದಿರುವ ನಿರ್ಣಯ ಕೈಗೊಂಡಿದ್ದೇವೆಂದು ಪ್ರಕಟಿಸಿದರು.

ಈ ವೇಳೆ ಗ್ರಾಪಂ ಮಾಜಿ ಅಧ್ಯಕ್ಷ ಜಗದೀಶ, ಮುಖಂಡರಾದ ಶ್ರೀನಿವಾಸ, ದಿನೇಶ ಸೇರಿದಂತೆ 200ಕ್ಕೂ ಹೆಚ್ಚು ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.