ಮೂಲ ಸೌಲಭ್ಯವಿಲ್ಲದಕ್ಕೆ ಮತದಾನ ಬಹಿಷ್ಕಾರ


Team Udayavani, Apr 14, 2019, 3:00 AM IST

moola

ಹುಣಸೂರು: ತಾಲೂಕಿನ ನೇರಳಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಿಲ್ಲೇನಹೊಸಳ್ಳಿ, ಕೆ.ಜಿ.ಹೆಬ್ಬನಕುಪ್ಪೆ ಹಾಗೂ ವಿವಿಧ ಹಾಡಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಈ ಬಾರಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನ ಕೈಗೊಂಡಿದ್ದಾರೆ.

ಬಿಲ್ಲೇನಹೊಸಹಳ್ಳಿ ಹಾಡಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಗ್ರಾಮದ ಮುಖಂಡ ಎಂ.ಕೆ.ಪೂಣಚ್ಚ ಮತ್ತಿತರರು ಮಾತನಾಡಿ, ನೇರಳಕುಪ್ಪೆ ಜಂಕ್ಷನ್‌ನಿಂದ ಬಿಲ್ಲೇನಹೊಸಹಳ್ಳಿ ಸಂಪರ್ಕ ಕಲ್ಪಿಸುವ 3 ಕಿ.ಮೀ.ವರೆಗಿನ ರಸ್ತೆಯಲ್ಲಿ ಗುಂಡಿ ಬಿದ್ದು 10 ವರ್ಷ ಕಳೆದರೂ ದುರಸ್ತಿಪಡಿಸಿಲ್ಲ. ಈ ರಸ್ತೆ ಸಂಪೂರ್ಣ ಹಾಳಾಗಿದ್ದು, ಯಾವ ವಾಹನಗಳು ಓಡಾಡಲಾಗದ ಸ್ಥಿತಿ ತಲುಪಿದೆ ಎಂದು ಕಿಡಿಕಾರಿದರು.

ಬಿಲ್ಲೇನಹೊಸಹಳ್ಳಿಯ ಹೊಸಕೆರೆ, ತಾವರೆಕೆರೆ, ಅಮಕನಕಟ್ಟೆ ಕೆರೆಗಳಿಗೆ ಪಕ್ಕದಲ್ಲೇ ಇರುವ ಲಕ್ಷ್ಮಣತೀರ್ಥ ನದಿಯಿಂದ ನೀರು ತುಂಬಿಸಬೇಕು. ತೋಟದೊಳಗೆ ಇರುವ ಗ್ರಾಮದ ಮನೆಗಳಿಗೆ ನಿರಂತರ ಜ್ಯೋತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಹುಲಿ, ಕಾಡಾನೆ ಹಾವಳಿ: ನಾಗರಹೊಳೆ ಉದ್ಯಾನದಂಚಿನಲ್ಲಿರುವ ಈ ಗ್ರಾಮಗಳ ಸುತ್ತ ರೈಲ್ವೆ ಹಳಿ ಬೇಲಿ ಅಳವಡಿಕೆ ಯೋಜನೆ ಅಧಕ್ಕೆ ಸ್ಥಗಿತಗೊಂಡಿದೆ. ಹಗಲು ವೇಳೆಯೇ ಹುಲಿ, ಚಿರತೆ, ಕಾಡಾನೆಗಳು ಸೇರಿದಂತೆ ವನ್ಯಜೀವಿಗಳು ಗ್ರಾಮದೊಳಗೆ ನಿರಾತಂಕವಾಗಿ ಓಡಾಡುತ್ತವೆ. ಕಳೆದ ಆರು ತಿಂಗಳಿನಿಂದ ಹುಲಿ ಆಗಾಗ್ಗೆ ಕಾಣಿಸಿಕೊಂಡು ಜೀವ ಭಯ ಹುಟ್ಟಿಸಿದ್ದರೂ ಅರಣ್ಯ ಇಲಾಖೆ ನಿರ್ಲಕ್ಷ್ಯವಹಿಸಿದೆ. ಸಾಕಷ್ಟು ಜಾನುವಾರುಗಳನ್ನು ಕೊಂದು ಹಾಕಿದೆ ಎಂದು ಉದಯ್‌, ಅಪ್ಪಣ್ಣ ಅವಲತ್ತುಕೊಂಡರು.

ಸೌಲಭ್ಯವಂಚಿತ ಹಾಡಿಗಳು: ಬಿಲ್ಲೇನಹೊಸಹಳ್ಳಿ ಹಾಗೂ ಚಂದನಗಿರಿ ಗಿರಿಜನ ಹಾಡಿಗೆ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ. ಗಿರಿಜನರ ಭೂಮಿಗೆ ನೀರಾವರಿ ಸೌಲಭ್ಯ ನೀಡಿಲ್ಲ. ಜಮೀನಿಗೆ ತೆರಳಲು ರಸ್ತೆ ಸಂಪರ್ಕವಿಲ್ಲ, ಹೀಗೆ ಹತ್ತು ಹಲವು ಸಮಸ್ಯೆಗಳಿದ್ದರೂ ಸ್ಪಂದಿಸಬೇಕಾದ ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತ ನಿರ್ಲಕ್ಷ್ಯವಹಿಸಿದೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಹೇಳಿ-ಕೇಳಿ ಸುಸ್ತಾಗಿದ್ದೇವೆ.

ಜಡ್ಡುಗಟ್ಟಿರುವ ಆಡಳಿತ, ಸ್ಪಂದಿಸದ ಜನಪ್ರತಿನಿಧಿಗಳ ತಾತ್ಸಾರ ಮನೋಭಾವದಿಂದ ಬೇಸತ್ತು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದೇವೆಂದು ಗ್ರಾಮಸ್ಥರು ತಿಳಿಸಿದರು. ಸಭೆಯಲ್ಲಿ ಮೂರು ಗ್ರಾಮಗಳ ಮುಖಂಡರಾದ ಉದಯ, ಪಾಲಾಕ್ಷ, ಜಿ.ಡಿ.ಮೋಹನ್‌, ಅಪ್ಪಣ್ಣ, ವಾಸು, ಕೆ.ರಮೇಶ್‌, ಅಣ್ಣಯ್ಯ, ರಮೇಶ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಉಪಸ್ಥಿತರಿದ್ದರು. ನಂತರ ಹುಣಸೂರು ನಗರಕ್ಕೆ ಆಗಮಿಸಿ, ಮನವಿ ಪತ್ರವನ್ನು ಶಿರಸ್ತೇದಾರ್‌ ಲೋಕೇಶ್‌ ಅವರಿಗೆ ಸಲ್ಲಿಸಲಾಯಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.