ಮತದಾನ ಜಾಗೃತಿಗೆ ಬೈಕ್‌ನಲ್ಲಿ ರಾಜ್ಯ ಸುತ್ತಾಟ


Team Udayavani, Mar 29, 2019, 1:07 PM IST

m5-mat-jagru

ಹುಣಸೂರು: ಯುವಕನೋರ್ವ ವಿಶಿಷ್ಟವಾಗಿ ವಿನ್ಯಾಸಗೊಳಿಸಿರುವ ಬೈಕ್‌ ಮೂಲಕ ರಾಜ್ಯಾದ್ಯಂತ ಪ್ರವಾಸ ಮಾಡಿ ಮತದಾನದ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡು ಗಮನ ಸೆಳೆಯುತ್ತಿದ್ದಾರೆ.

ಮೂಲತಃ ಬೆಂಗಳೂರಿನ ಸಮರ್ಥ ಕನ್ನಡಿಗರು ಸಂಘದ ಪ್ರಧಾನ ಸಂಚಾಲಕರಾಗಿರುವ ಬಸವರಾಜು ಎಸ್‌.ಕಲ್ಲುಸಕ್ಕರೆ ಅವರು ಬೈಕ್‌ನಲ್ಲಿ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಾ ಮತದಾನ ಜಾಗೃತಿಯಲ್ಲಿ ನಿರತರಾಗಿದ್ದಾರೆ.

ಈಗಾಗಲೇ 27 ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ನಡೆಸಿದ್ದು, ಬುಧವಾರ ಸಂಜೆ ಹುಣಸೂರಿಗೆ ಆಗಮಿಸಿ, ಬಸ್‌ ನಿಲ್ದಾಣ, ಕಲ್ಪತರು ವೃತ್ತ ಮತ್ತಿತರೆಡೆ ತೆರಳಿ ಸಾರ್ವಜನಿಕರಿಗೆ ಕಾಲೇಜು ವಿದ್ಯಾರ್ಥಿಗಳಿಗೆ “ನಮ್ಮ ಮತ ನಮ್ಮ ಹೆಮ್ಮೆ, ಎಲ್ಲರೂ ಮತ ಚಲಾಯಿಸಿ,

ಪ್ರಜಾಪ್ರಭುತ್ವ ಗೆಲ್ಲಿಸೋಣ, ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಮತದಾನದಲ್ಲಿ ಪಾಲ್ಗೊಳ್ಳಿ, ಮತದಾನ ನಮ್ಮ ಜನ್ಮ ಸಿದ್ಧ ಹಕ್ಕು, ಇದನ್ನು ಮಾರಿಕೊಳ್ಳುವುದು ಬೇಡ. ಎಲ್ಲರೂ ಸೇರಿ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸೋಣ’ ಎಂಬ ಘೋಷಣೆಯುಳ್ಳ ಕರಪತ್ರವನ್ನು ವಿತರಿಸಿ, ಮತದಾನ ಮಾಡುವಂತೆ ಮನವಿ ಮಾಡಿಕೊಂಡರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್‌ ಟೆಕ್ನಿಷಿಯನ್‌ ಆಗಿರುವ ಇವರು ಮತದಾನ ಜಾಗೃತಿಗಾಗಿಯೇ ಕೆಲಸ ಬಿಟ್ಟು, ತಮ್ಮ ಬಜಾಜ್‌ ಆವೆಂಜರ್‌ ಬೈಕನ್ನು ಮತದಾನದ ಬಗ್ಗೆ ಅರಿವು ಮೂಡಿಸುವ ಘೋಷಣೆಯೊಂದಿಗೆ, ನೆರಳು ನೀಡುವಂತೆ ಕಮಾನು ಮಾದರಿಯಲ್ಲಿ ವಿನ್ಯಾಸಗೊಳಿಸಿಕೊಂಡಿದ್ದಾರೆ. ಇವರು ಹೋದೆಡೆ ಜನರು ಕುತೂಹಲದಿಂದ ವೀಕ್ಷಿಸುತ್ತಾರೆ. ಈ ವೇಳೆ ನೆರೆದಿದ್ದವರಿಗೆ ಕರಪತ್ರ ನೀಡಿ ತಪ್ಪದೇ ಮತದಾನ ಮಾಡಿರೆಂದು ಮನವಿ ಮಾಡುತ್ತಾರೆ.

ಶಾಲಾ ಕಾಲೇಜಿನಲ್ಲೂ ಅರಿವು: ಇದೇ ವೇಳೆ ಮಾರ್ಗಮಧ್ಯದಲ್ಲಿ ಸಿಗುವ ಶಾಲಾ-ಕಾಲೇಜುಗಳಿಗೆ ತೆರಳಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಮಹತ್ವವನ್ನು ಮನವರಿಕೆ ಮಾಡಿಕೊಡುತ್ತಾರೆ. ಜೊತೆಗೆ ಮತಚಲಾಯಿಸುತ್ತೇವೆಂಬ ಪ್ರತಿಜ್ಞೆಯನ್ನು ಮಾಡಿಸುತ್ತಾರೆ. ಹೀಗೆ ಇವರ ಬೈಕ್‌ ಜಾಗೃತಿ ಜಾಥಾ ಚುನಾವಣೆ ಪೂರ್ಣಗೊಳ್ಳುವವರೆಗೂ ಮುಂದುವರಿಯುತ್ತಲೇ ಇರುತ್ತದೆ.

ಚುನಾವಣಾ ಆಯೋಗದಿಂದ ಅನುಮತಿ: ತಾವು ಸಾಮಾಜಿಕ ಜಾಗೃತಿಗಾಗಿ ಅಖಂಡ ಕರ್ನಾಟಕವನ್ನು ದ್ವಿಚಕ್ರವಾಹನದ ಮೂಲಕ ಸುತ್ತಾಡುತ್ತಾ ಮತದಾನ ಕುರಿತ ಜಾಗೃತಿ ಅಭಿಯಾನ ನಡೆಸುತ್ತಿದ್ದೇನೆ. ಇದಕ್ಕಾಗಿ ಚುನಾವಣಾ ಆಯೋಗದಿಂದ ಅನುಮತಿ ದೊರೆತಿದೆ.

ಈಗಾಗಲೇ 23 ಜಿಲ್ಲೆಗಳಲ್ಲಿ ಸಂಚರಿಸಿದ್ದು, ಇನ್ನುಳಿದ ಜಿಲ್ಲೆಗಳಿಗೆ ತೆರಳಿ ಜಾಗೃತಿ ಮೂಡಿಸುವೆ. ಹೋದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಮತದಾನ ಜಾಗೃತಿಯೊಟ್ಟಿಗೆ ಕನ್ನಡದ ಬಗ್ಗೆ, ರಕ್ತದಾನ ಹಾಗೂ ಪರಿಸರ ಉಳಿವಿಗಾಗಿಯೂ ಮನವಿ ಮಾಡುತ್ತಿರುವುದಾಗಿ ಬಸವರಾಜು ಎಸ್‌.ಕಲ್ಲುಸಕ್ಕರೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.