ಶಾಸಕ-ಸಂಸದರ ತಿಕ್ಕಾಟಕ್ಕೆ ಸೊರಗಿದ ತ್ಯಾಜ್ಯ ಸಂಸ್ಕರಣ ಘಟಕ


Team Udayavani, Feb 13, 2021, 3:16 PM IST

ಶಾಸಕ-ಸಂಸದರ ತಿಕ್ಕಾಟಕ್ಕೆ ಸೊರಗಿದ ತ್ಯಾಜ್ಯ ಸಂಸ್ಕರಣ ಘಟಕ

ಮೈಸೂರು: ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ, ಸ್ವಪ್ರತಿಷ್ಠೆಯಿಂದಾಗಿ ನಗರದ ಸುಯೇಜ್‌ ಫಾರಂ ಸಮಸ್ಯೆ ಜೀವಂತವಾಗಿಯೇ ಉಳಿದಿದ್ದು, ಸ್ಥಳೀಯರು ನಿತ್ಯ ದುರ್ವಾಸನೆಯಲ್ಲೇ ಜೀವನ ನಡೆಸುವಂತಾಗಿದೆ.

ಸಮಸ್ಯೆ ಜಟಿಲ: ನಗರದ ವಿದ್ಯಾರಣ್ಯಪುರಂನ ಸುಯೇಜ್‌ ಫಾರಂನಲ್ಲಿ ಸಂಗ್ರಹ ವಾಗಿರುವ ತ್ಯಾಜ್ಯದಿಂದ ವಿದ್ಯಾರಣ್ಯಪುರಂ, ಜೆ.ಪಿ.ನಗರ ಸೇರಿ ಅದಕ್ಕೆ ಹೊಂದಿಕೊಂಡಂತಿರುವ 5-6 ಬಡಾವಣೆಗಳ ಜನ ಕಳೆದ 35 ವರ್ಷಗಳಿಂದರೋಸಿಹೋಗಿದ್ದು, ಪ್ರತಿನಿತ್ಯ ದುರ್ವಾಸನೆ, ಸೊಳ್ಳೆ ಹಾಗೂ ನೊಣಗಳ ಕಾಟದಿಂದ ನಲುಗಿದ್ದಾರೆ. ಸ್ಥಳೀಯ ಶಾಸಕರ ನಿರಾಸಕ್ತಿಯಿಂದಾಗಿ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ.

ಸಮಸ್ಯೆ ಜೀವಂತ: ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸ್ಥಳೀಯರು, ಸಂಘ ಸಂಸ್ಥೆಗಳು ಹಾಗೂ ಮುಖಂಡರು ನೂರಾರು ಪ್ರತಿಭಟನೆ, ಧರಣಿ, ಮನವಿ ನೀಡಿದ್ದರು. ಈ ನಡುವೆ ಕಳೆದ ವರ್ಷ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಸೋಮಣ್ಣ ನೇತೃತ್ವದಲ್ಲಿ ಸಂಸದ ಪ್ರತಾಪ್‌ ಸಿಂಹ ರಾಶಿ ರಾಶಿ ಬಿದ್ದಿರುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿ “ಬಯೋ ರೆಮಿಡಿಯೇಶನ್‌’ ಯೋಜನೆ ಆರಂಭಕ್ಕೆ ಟೆಂಡರ್‌ ಹಂತಕ್ಕೆ ಕೊಂಡೊಯ್ದಿದ್ದರು. ಆದರೆ, ಈ ಹೊತ್ತಿಗೆ ಸ್ಥಳೀಯ ಶಾಸಕರು ತಮ್ಮ ಸ್ವ ಹಿತಾಸಕ್ತಿಯಿಂದಾಗಿ ಅಡ್ಡಿಯಾದ ಹಿನ್ನೆಲೆ 35 ವರ್ಷಗಳ ಸಮಸ್ಯೆ ಮತ್ತೆ ಜೀವಂತವಾಗಿ ಉಳಿಯುವಂತಾಗಿದೆ.

ಅಂದಿನ ಉಸ್ತುವಾರಿ ಸಚಿವ ಸೋಮಣ್ಣ ಅವರು ಸುಯೇಜ್‌ ಫಾರಂ  ಸಮಸ್ಯೆ ನೀಗಿಸಲು ತೆಗೆದುಕೊಳ್ಳಬೇಕಿರುವ ಕ್ರಮದ ಕುರಿತು ಚರ್ಚಿಸಲು 2019 ನವೆಂಬರ್‌ನಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದರು. 3 ಲಕ್ಷಕ್ಕೂ ಅಧಿಕ ಟನ್‌ ತ್ಯಾಜ್ಯ ವಿಲೇವಾರಿಯಾಗದೇ ಉಳಿದಿರುವುದನ್ನು ಕಂಡು, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಸ್ಥಳದಲ್ಲಿಯೇ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಿ, 20 ದಿನದ ಒಳಗೆ ವರದಿ ನೀಡಲು ಸೂಚಿಸಿದ್ದರು.

ಸಚಿವರು ಸೂಚಿಸಿದ್ದರು: ನಂತರ ಪಾಲಿಕೆ ಮೇಯರ್‌, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರ ತಂಡ ಡಿ. 31ರಂದು ನಾಗ್ಪುರದ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಭೇಟಿ ನೀಡಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಪರಿಶೀಲಿಸಿ, 2020ರ ಜನವರಿಯಲ್ಲಿ ನಡೆದ ಕೆಡಿಪಿ ಸಭೆಗೆ ಸಕಾರಾತ್ಮಕವಾದ ವರದಿ ನೀಡಿತ್ತು. ಬಳಿಕ ಸಭೆಯಲ್ಲಿ ನಾಗ್ಪುರ ಮೂಲದ ಝಿಗ್ಮಾಕಂಪನಿ ತ್ಯಾಜ್ಯ ವಿಲೇವಾರಿಗೆ ಮುಂದೆ ಬಂದಿತ್ತು. ಬಳಿಕ ಟೆಂಡರ್‌ ಮೂಲಕ ಯೋಜನೆಗೆ ಚಾಲನೆ ನೀಡಲು ಸಚಿವರು ಸೂಚಿಸಿದ್ದರು.

ಈ ಎಲ್ಲಾ ಬೆಳವಣಿಗೆ ನಡೆದ ನಂತರ ಸ್ಥಳೀಯ ಶಾಸಕರು ತಮ್ಮ ಗಮನಕ್ಕೆ ತಾರದೆ ಯೋಜನೆ ಕೈಗೆತ್ತಿಕೊಂಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ,ತ್ಯಾಜ್ಯ ಸಂಸ್ಕರಣೆಯನ್ನು ಬೇರೆಡೆಗೆ ಸ್ಥಳಾಂತರ ಮಾಡುವಂತೆ ಪಟ್ಟು.

ನಗರದ ಸುಯೇಜ್‌ ಫಾರಂನಲ್ಲಿ ಸಂಗ್ರಹವಾಗಿರುವ ಕಸವನ್ನು ಬಯೋ ರೆಮಿಡಿಯೇಶನ್‌ ಮೂಲಕ ಸಂಸ್ಕರಿಸುವಸಂಬಂಧ ಟೆಂಡರ್‌ ಪ್ರಕ್ರಿಯೆ ಹಾಗೂಅನುದಾನಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆಪತ್ರ ಬರೆಯಲಾಗಿದೆ. ಸರ್ಕಾರದಿಂದ ಆದೇಶಬಂದಾಕ್ಷಣ ಕಾರ್ಯೋನ್ಮುಖರಾಗುತ್ತೇವೆ. ಡಾ. ಡಿ.ಜಿ.ನಾಗರಾಜ್‌, ಆರೋಗ್ಯಾಧಿಕಾರಿ ನಗರಪಾಲಿಕೆ ಮೈಸೂರ

ಸಚಿವ ಸೋಮಣ್ಣ, ಸಂಸದರು ಕಸ ವಿಲೇವಾರಿಗೆ ಯೋಜನೆ ರೂಪಿಸಿದ್ದರು. ಆದರೆ, ಅದಕ್ಕೆ ಸ್ಥಳೀಯಶಾಸಕರು ಅಡ್ಡಗಾಲು ಹಾಕಿರುವ ಪರಿಣಾಮ ಸಮಸ್ಯೆ ಹಾಗೆ ಉಳಿದುಕೊಂಡಿದೆ. ಈಗಿರುವ ಜಿಲ್ಲಾ ಉಸ್ತುವಾರಿ ಸಚಿವರು ಟೆಂಡರ್‌ ಪ್ರಕ್ರಿಯೆ ಆರಂಭಿಸಿ ಸಮಸ್ಯೆ ಬಗೆಹರಿಸಲಿ. ಎಂ.ಕೆ.ಸೋಮಶೇಖರ್‌, ಮಾಜಿ ಶಾಸಕ

ಏನಿದು ಯೋಜನೆ? :

ಸಂಗ್ರಹವಾಗಿರುವ ತ್ಯಾಜ್ಯವನ್ನು ಬಯೋರೆಮಿಡಿಯೇಶನ್‌ ಪದ್ಧತಿಯಿಂದ ಸಂಸ್ಕರಿಸಲಾಗುತ್ತದೆ. ಇದರಲ್ಲಿ ಬರುವ ಕಟ್ಟಡತ್ಯಾಜ್ಯವನ್ನು ಸಿಮೆಂಟ್‌ ಫ್ಯಾಕ್ಟರಿಗೆ ಕಳುಹಿಸಿ ಉಳಿದದ್ದನ್ನು ಇಳಿಜಾರು,ಗುಂಡಿ ಇರುವ ಪ್ರದೇಶಗಳಿಗೆ ಹಾಕಲಾಗುತ್ತದೆ. ಉಳಿದ ಪ್ಲಾಸ್ಟಿಕ್‌ ಅನ್ನುಮರು ಬಳಕೆಗೆ ಹಾಗೂ ತ್ಯಾಜ್ಯವನ್ನು ಗೊಬ್ಬರವಾಗಿ ಬಳಕೆ ಮಾಡಿಕೊಳ್ಳಲಾಗುತ್ತದೆ. ಈ ಯೋಜನೆ ಈಗಾಗಲೇ ನಾಗ್ಪುರದಲ್ಲಿನಡೆಯುತ್ತಿದ್ದು, ತ್ಯಾಜ್ಯ ವೈಜ್ಞಾನಿಕ ವಿಲೇವಾರಿ ಮಾಡುವಲ್ಲಿ ಯಶಸ್ವಿಯಾಗಿದೆ.ಸುಯೇಜ್‌ ಫಾರಂನಲ್ಲಿ ಸದ್ಯಕ್ಕೆ 2 ಲಕ್ಷಕ್ಕೂ ಅಧಿಕ ಟನ್‌ನಷ್ಟು ಕಸ ಸಂಗ್ರಹವಾಗಿದ್ದು, ನಾಗ್ಪುರ ಮಾದರಿಯಲ್ಲಿ ಕಸ ಸಂಸ್ಕರಣೆಗೆ 1 ವರ್ಷ ಅವಧಿ ಬೇಕಾಗಿದೆ. ಇದಕ್ಕೆ 16 ರಿಂದ 18 ಕೋಟಿ ರೂ. ಹಣ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.