ತಮಿಳುನಾಡಿಗೆ ನೀರು ಬಿಡುಗಡೆ: ರೈತರ ಪ್ರತಿಭಟನೆ
Team Udayavani, Jul 23, 2019, 3:00 AM IST
ಮೈಸೂರು: ಕಬಿನಿ, ಕಾವೇರಿ ಜಲಾಶಯಗಳ ಭರ್ತಿಗೂ ಮುನ್ನವೇ ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಕೂಡಲೇ ರಾಜ್ಯದ ರೈತರಿಗೆ ನೀರು ಬಿಡುವಂತೆ ಆಗ್ರಹಸಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ, ಕಬಿನಿ ಹಿತ ರಕ್ಷಣಾ ಸಮಿತಿ ವತಿಯಿಂದ ಪ್ರತಿಭಟಿಸಲಾಯಿತು.
ನಗರದ ಕಾವೇರಿ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಮುಂಭಾಗ ಜಮಾವಣೆಗೊಂಡ ರೈತರು ನೀರು ಬಿಟ್ಟ ರಾಜ್ಯ ಸರ್ಕಾರ ಅಧಿಕಾರಿಗಳ ನಡೆ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಈ ಕೂಡಲೇ ರಾಜ್ಯದ ರೈತರ ಬೆಳೆಗಳಿಗೆ ನೀರು ಬಿಡುವಂತೆ ಆಗ್ರಹಿಸಿಯೂ ವಿವಿಧ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತ್ಕುಮಾರ್, ರಾಜ್ಯದ ಜಲಾಶಯದ ನೀರನ್ನು ತಮಿಳುನಾಡಿಗೆ ಹರಿಸಬೇಕೆಂಬ ಆದೇಶ ಬಂದಿಲ್ಲ. ಜತೆಗೆ ತಮಿಳುನಾಡಿನ ಪರವಾಗಿ ರಾಜ್ಯದ ಅಧಿಕಾರಿಗಳು ನೀರುಗಂಟಿ ಕೆಲಸ ಮಾಡುವ ಅಗತ್ಯವಿಲ್ಲ. ಜಲಾಶಯದ ಒಳ ಹರಿವಿನ 75 ಭಾಗದಷ್ಟು ನೀರನ್ನು ನದಿ ಮೂಲಕ ಹರಿಸುವ ಆದೇಶವನ್ನು ಅಧಿಕಾರಿಗಳಿಗೆ ನೀಡಿದವರು ಯಾರು ಎಂದು ಪ್ರಶ್ನಿಸಿದರು.
ಚಳವಳಿ: ನಾಲೆಗಳಿಗೆ ನೀರು ಬಿಡದಿದ್ದರೆ ನಾಳೆಯಿಂದಲೇ ತಾಲೂಕು ಹೋಬಳಿ ಹಳ್ಳಿಹಳ್ಳಿಗಳಲ್ಲಿ ರಾಜ್ಯದಲ್ಲಿ ನೀರಿನ ಚಳವಳಿಗಳನ್ನು ನಡೆಸುವ ಮೂಲಕ ಅಧಿಕಾರಿಗಳ ಜನಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸಲಾಗುವುದು ಎಂದು ಹೇಳಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಸೋಮಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರ್ ಶಂಕರ್, ರಂಗಸಮುದ್ರ ಸುರೇಶ್, ಸಿದ್ದೇಶ್, ಮಾದಪ್ಪ, ಕೃಷ್ಣೇಗೌಡ, ಬಿ.ಪಿ.ಪರಶಿವಮೂರ್ತಿ, ಹೆಚ್.ರಂಗರಾಜು, ಬರಡನಪುರ ನಾಗರಾಜ್, ಜೆ.ಮಹೇಶ್, ಸಿ.ನಿಂಗಣ್ಣ, ವೆಂಕಟೇಶ್, ರಾಮಕೃಷ್ಣ, ಕುಮಾರ್, ಗುರುಸ್ವಾಮಿ, ವೆಂಕಟರಮಣ, ರಾಮೇಗೌಡ, ನಾಗಣ್ಣ, ಕೃಷ್ಣಪ್ಪ, ಕೃಷ್ಣಕುಮಾರ್, ಜಯಸ್ವಾಮಿ, ಭವಾನಿಶಂಕರ್, ಚೇತನ್, ಬಿ.ನಿಂಗರಾಜು, ಅರುಣ್, ಶಿವಣ್ಣ ಮುಂತಾದ ನೂರಾರು ಮಂದಿ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ