1.10 ಲಕ್ಷ ಕುಡಿವ ನೀರುನ ಎಕರೆಗೆ ನೀರಿನ ಕೊರತೆ


Team Udayavani, Jul 22, 2018, 4:56 PM IST

mys-1.jpg

ಚಾಮರಾಜನಗರ: ತಮಿಳುನಾಡಿಗೆ ಪ್ರತಿವರ್ಷ ಕಬಿನಿ ಜಲಾಶಯದಿಂದ ನಿಗದಿತ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದರೂ, ನೀರಿನ ಕೊರತೆಯಿಂದಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿರುವ ಕಬಿನಿ ಬಲದಂಡೆ, ಎಡದಂಡೆ ನಾಲೆಗಳಿಗೆ ಸಮರ್ಪಕವಾಗಿ ನೀರು ದೊರಕದೇ ಅಚ್ಚುಕಟ್ಟು ಪ್ರದೇಶದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ.

ಸಮುದ್ರದ ನೆಂಟು ಉಪ್ಪಿಗೆ ಬರ ಎಂಬ ಗಾದೆಯಂತೆ ಕಬಿನಿ ಜಲಾಶಯ ಅವಳಿ ಜಿಲ್ಲೆಯಲ್ಲೇ ಇದ್ದರೂ, ತಿಂಗಳುಗಟ್ಟಲೆ ನೀರು ಸಂಗ್ರಹಿಸಿಕೊಂಡು ಪ್ರತಿ ತಿಂಗಳು ತಮಿಳುನಾಡಿಗೆ ನದಿಯ ಮೂಲಕ ನಿಗದಿತ ಪ್ರಮಾಣದ ನೀರು ಬಿಡಲಾಗುತ್ತಿದೆ. ಆದರೆ ರಾಜ್ಯದ ರೈತರ ಬೆಳೆಗಳಿಗೆ ನೀರಿನ ಕೊರತೆ ಎದುರಾಗುತ್ತಿದೆ. ಅದರಲ್ಲೂ ಕಳೆದ ವರ್ಷಗಳಿಂದ ಎರಡೂ ಜಿಲ್ಲೆಯ ಅಚ್ಚುಕಟ್ಟು ಪ್ರದೇಶಕ್ಕೆ ಕಬಿನಿ ನಾಲೆಯಲ್ಲಿ ನೀರು ಹರಿಸಲೇ ಇಲ್ಲ.

55600 ಎಕರೆ ಅಚ್ಚುಕಟ್ಟು : ಕಬಿನಿ ಬಲದಂಡೆ ನಾಲೆಯ ನೀರು ಆಶ್ರಯಿಸಿ ಚಾಮರಾಜನಗರ ಜಿಲ್ಲೆ ಯಲ್ಲಿ ಒಟ್ಟು 55600 ಎಕರೆ ಅಚ್ಚುಕಟ್ಟು ಪ್ರದೇಶ ವಿದೆ. ಇದರಲ್ಲಿ ಚಾಮರಾಜನಗರ ತಾಲೂಕಿನ 3400 ಎಕರೆ, ಯಳಂದೂರು ತಾಲೂಕಿನ 11 ಸಾವಿರ ಎಕರೆ, ಕೊಳ್ಳೇಗಾಲ ತಾಲೂಕಿನ 36200 ಎಕರೆ ಅಚ್ಚುಕಟ್ಟು ಪ್ರದೇಶವಿದೆ. ಇನ್ನು, ಮೈಸೂರು ಜಿಲ್ಲೆ ಒಟ್ಟು 51350 ಎಕರೆ ಯಷ್ಟು ಅಚ್ಚುಕಟ್ಟು ಪ್ರದೇಶವನ್ನು ಹೊಂದಿದ್ದು, ಹೆಗ್ಗಡದೇವನಕೋಟೆ ತಾಲೂಕಿನಲ್ಲಿ 4,074 ಎಕರೆ, ತಿ. ನರಸೀಪುರ ತಾಲೂಕಿನಲ್ಲಿ 30 ಸಾವಿರ, ನಂಜನಗೂಡು ತಾಲೂ ಕಿನಲ್ಲಿ 17,276 ಎಕರೆ ಅಚ್ಚುಕಟ್ಟು ಒಳಗೊಂಡಿದೆ. ಅಲ್ಲದೇ ಕಬಿನಿ ಎಡದಂಡೆ ನಾಲೆಯು ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟಿ ತಾಲೂಕಿನಲ್ಲಿ ಮಾತ್ರ 3,125 ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿದೆ.

ಎರಡೂ ಜಿಲ್ಲೆಯಿಂದ ಕಬಿನಿ ಆಶ್ರಯಿಸಿ ಒಟ್ಟು 1,10,075 ಎಕರೆ ಜಮೀನು ನೀರಾವರಿ ಸೌಲಭ್ಯ ಕ್ಕೊಳಪಟ್ಟಿದೆ. ಕಬಿನಿ ಜಲಾಶಯ ಪಕ್ಕದಲ್ಲೇ ಇದ್ದರೂ ಇಷ್ಟು ಪ್ರಮಾಣದ ಅಚ್ಚುಕಟ್ಟು ಪ್ರದೇಶಕ್ಕೆ ತೃಪ್ತಿಕರ ವಾಗಿ ನೀರು ಪೂರೈಕೆಯಾಗುತ್ತಿಲ್ಲ. ಮಳೆಯ ಕೊರತೆಯಿಂದಾಗಿ ಕಬಿನಿ ಜಲಾಶಯ ಭರ್ತಿ ಯಾಗದ ಕಾರಣ ಕಳೆದ ಎರಡು ವರ್ಷಗಳಿಂದ ಈ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಬಿಡಲಿಲ್ಲ.

ಒಣಗಿನಿಂತ 55600 ಎಕರೆ ಪ್ರದೇಶ: ಚಾಮರಾಜನಗರ ಜಿಲ್ಲೆಯಲ್ಲಿ ಯಳಂದೂರು ಹಾಗೂ ಕೊಳ್ಳೇಗಾಲ ತಾಲೂಕಿನ ಕೆಲ ಭಾಗ ಮಾತ್ರ ನೀರಾವರಿ ಸೌಲಭ್ಯ ಪಡೆದಿವೆ. ಉಳಿದಂತೆ ಜಿಲ್ಲೆಯಲ್ಲಿ ಮಳೆಯಾಶ್ರಿತ ಬೇಸಾಯವಿದೆ. ಕೊಳವೆ ಬಾವಿಗಳಲ್ಲಿ ಒಂದು ಸಾವಿರ ಅಡಿ ಕೊರೆದರೂ ನೀರು ಬರುತ್ತಿಲ್ಲ. ಇಂಥ ಸನ್ನಿವೇಶದಲ್ಲಿ ಕಬಿನಿ ಬಲದಂಡೆ ನಾಲೆಯ 55600 ಎಕರೆ ಪ್ರದೇಶದ ರೈತರು ನಾಲೆಯಲ್ಲಿ ಬರುವ ನೀರನ್ನಾಧರಿಸಿ ಭತ್ತ ಬೆಳೆಯುತ್ತಿದ್ದಾರೆ. ವರ್ಷಕ್ಕೆ ಎರಡು ಬೆಳೆ ತೆಗೆಯುವ ಅವಕಾಶ ಇದ್ದರೂ, ಪ್ರಸ್ತುತ ಒಂದು ಬೆಳೆಗೆ ಮಾತ್ರ ನೀರು ದೊರಕುತ್ತಿತ್ತು. ಕಳೆದ ಎರಡು ವರ್ಷಗಳಿಂದ ಕೇವಲ ಒಂದು ಬೆಳೆಯನ್ನೂ ಬೆಳೆಯಲಾಗಲಿಲ್ಲ. ಹೀಗಾಗಿ 55600 ಎಕರೆ ಪ್ರದೇಶವೂ ಒಣಗಿ ನಿಂತಿತ್ತು.

ಈ ಬಾರಿ ಜಲಾಶಯ ತುಂಬಿರುವುದರಿಂದ ಕೆಲವು ದಿನಗಳಿಂದ ನಾಲೆಗೆ ನೀರು ಬಿಡಲಾಗಿದೆ. ಮುಂಗಾರು ಮುಗಿದ ಬಳಿಕ ಮುಂದೇನಾಗುವುದೋ ಹೇಳಲಾಗುವುದಿಲ್ಲ. ಕಬಿನಿ ನಾಲೆ ಅಚ್ಚುಕಟ್ಟು ಪ್ರದೇಶದ ಜಮೀನುಗಳಲ್ಲಿ ರೈತರು ಭತ್ತವನ್ನಷ್ಟೇ ಬೆಳೆಯುತ್ತಿದ್ದಾರೆ. ನೀರು ಬಿಡದ ವೇಳೆ ಯಾವ ಬೆಳೆಯನ್ನೂ ಬೆಳೆಯಲಾಗದ ಅಸಹಾಯಕ ಸ್ಥಿತಿಯಿಲ್ಲಿದ್ದಾರೆ. ಕಾವೇರಿ ಅಚ್ಚುಕಟ್ಟು ಪ್ರಾಧಿಕಾರ ಈಗ ಅಸ್ತಿತ್ವಕ್ಕೆ ಬಂದಿರುವುದರಿಂದ ನಾಲೆಗೆ ನೀರು ಬಿಡಲು ಇನ್ನೂ ಹೆಚ್ಚಿನ ಸಂಕಷ್ಟ ಪರಿಸ್ಥಿತಿ ಬರುವ ಆತಂಕದಲ್ಲಿ ರೈತರಿದ್ದಾರೆ.

ಕಾವೇರಿ ನ್ಯಾಯಾಧಿಕರಣ, ಸುಪ್ರೀಂ ಕೋರ್ಟ್‌ ಆದೇಶ, ಕಾವೇರಿ ಪ್ರಾಧಿಕಾರ ಆದೇಶ ತಮಿಳುನಾಡಿಗೇ ಹೆಚ್ಚಿನ ಅನುಕೂಲವೊದಗಿಸಿದೆ. ತಮಿಳುನಾಡಿಗೆ ಕಬಿನಿ ನೀರು ಬಿಡುವುದರಿಂದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಕಬಿನಿ ನಾಲಾ ವ್ಯಾಪ್ತಿಯ ಅಚ್ಚುಕಟ್ಟಿಗೆ ನೀರಿನ ಅಭಾವ ಉಂಟಾಗುತ್ತಿದೆ. ರೈತರು ತೊಂದರೆಯಲ್ಲಿ ಸಿಲುಕಿದ್ದೇವೆ.
 ಹೊನ್ನೂರು ಪ್ರಕಾಶ್‌,  ಅಧ್ಯಕ್ಷ, ಜಿಲ್ಲಾ ರೈತ ಸಂಘ.

ಕಬಿನಿ ಜಲಾಶಯದಲ್ಲಿ ನೀರಿನ ಕೊರತೆ ಉಂಟಾಗಿದ್ದರಿಂದ ಕಳೆದ ಎರಡು ವರ್ಷ ಕಬಿನಿ ಬಲದಂಡೆ ಹಾಗೂ ಎಡದಂಡೆ ನಾಲಾ ವ್ಯಾಪ್ತಿಯ ಪ್ರದೇಶಕ್ಕೆ ನೀರು ಬಿಡುಗಡೆ ಮಾಡಿರಲಿಲ್ಲ.
 ಪುಟ್ಟಶೇಷಗಿರಿ, ಎಇಇ, ನೀರಾವರಿ ಇಲಾಖೆ.

ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.