ಕೆಆರ್‌ಎಸ್‌, ಕಬಿನಿ ನಾಲೆಗಳಿಗೆ ನೀರು ಹರಿಸಿ


Team Udayavani, Feb 6, 2020, 3:00 AM IST

krs-kabini

ಮೈಸೂರು: ಕೆಆರ್‌ಎಸ್‌ ಮತ್ತು ಕಬಿನಿ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಕಾಡಾ ಮುಖ್ಯ ಎಂಜಿನಿಯರ್‌ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.

ಕಾವೇರಿ ಅಚ್ಚುಕಟ್ಟು ಪ್ರದೇಶದ ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸುವ ಮೂಲಕ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆ, ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಕೆರೆ-ಕಟ್ಟೆಗಳನ್ನು ತುಂಬಿಸಲು ತಕ್ಷಣವೇ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಮಾತನಾಡಿ, ಕೆಆರ್‌ಎಸ್‌ ಜಲಾಶಯದಲ್ಲಿ 20ಟಿಎಂಸಿಗೂ ಹೆಚ್ಚು, ಕಬಿನಿ ಜಲಾಶಯದಲ್ಲಿ 79 ಅಡಿ ನೀರಿನ ಸಂಗ್ರಹವಿದೆ. ಕಾವೇರಿ ನ್ಯಾಯಮಂಡಳಿ ತೀರ್ಪಿನ ಅನುಸಾರ ಈಗಾಗಲೇ ತಮಿಳುನಾಡಿಗೆ ನೀರು ಹರಿಸಲಾಗಿದೆ. ಆದ್ದರಿಂದ ಈ ಎರಡೂ ಜಲಾಶಯಗಳಲ್ಲಿ ಸಂಗ್ರಹವಿರುವ ನೀರನ್ನು ರೈತರ ಜಮೀನಿನಲ್ಲಿ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನಾಲೆಗಳಲ್ಲಿ ಹರಿಸಬೇಕು.

ಒಂದು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದು ನಿಂತಿರುವ ಬೆಳೆಗಳನ್ನು ಉಳಿಸಲು ಹಾಗೂ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಕೂಡಲೇ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ರೈತರೇ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಭರವಸೆ: ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದ ಉಪ ಮುಖ್ಯ ಎಂಜಿನಿಯರ್‌ ಮಲ್ಲಿಕಾರ್ಜುನಯ್ಯ, ಕಬಿನಿ ಜಲಾಶಯದ ಅಧೀಕ್ಷಕ ಇಂಜಿನಿಯರ್‌ ಚಂದ್ರಶೇಖರ್‌, ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಂಘದ ರಾಜ್ಯಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್‌, ಜಿಲ್ಲಾ ಉಪಾಧ್ಯಕ್ಷ ಕೆರೆಹುಂಡಿ ರಾಜಣ್ಣ, ಕಾರ್ಯದರ್ಶಿ ಪರಶಿವಮೂರ್ತಿ, ತಾಲೂಕು ಅಧ್ಯಕ್ಷ ಕುರುಬೂರು ಸಿದ್ಧೇಶ್‌, ಕೃಷ್ಣೇಗೌಡ ವರಕೋಡು, ಹೆಗ್ಗೂರು ರಂಗರಾಜ್‌,

ಅಂಬಳೆ ಮಂಜುನಾಥ್‌, ಮಹದೇವಸ್ವಾಮಿ, ಅತ್ತಹಳ್ಳಿ ಅರುಣ್‌ಕುಮಾರ್‌, ಬಿ.ಎಸ್‌.ಕೃಷ್ಣೇಗೌಎ, ಲಕ್ಷ್ಮೀಪುರ ವೆಂಕಟೇಶ, ಕುರುಬೂರು ಕುಮಾರ್‌, ಕೃಷ್ಣಪ್ಪ, ಬಸವಣ್ಣ, ವೆಂಕಟರಾಮು, ಜಯರಾಮು, ಬೋರೇಗೌಡ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.