ಪರಿಸರ ನಾಶವಿಲ್ಲದ ಪವಿತ್ರ ಆರ್ಥಿಕತೆಯತ್ತ ಸಾಗಬೇಕಿದೆ


Team Udayavani, Sep 17, 2019, 3:00 AM IST

parisara

ಮೈಸೂರು: ಹೆಚ್ಚು ಪರಿಸರ ನಾಶವಿಲ್ಲದೇ ಯುವಕ, ಯುವತಿಯರಿಗೆ ಉದ್ಯೋಗ ಕೊಡುವ ಪವಿತ್ರ ಆರ್ಥಿಕತೆಯತ್ತ ನಾವು ಸಾಗಬೇಕಿದೆ ಎಂದು ಚಿಂತಕ ಹೆಗ್ಗೊಡು ಪ್ರಸನ್ನ ಹೇಳಿದರು.

ಮೈಸೂರು ವಿವಿ ಹಿರಿಯ ವಿದ್ಯಾರ್ಥಿಗಳ ಸಂಘ, ರಾಸೇಯೋ, ಎಚ್‌.ಸಿ.ದಾಸಪ್ಪ ಸಾರ್ವಜನಿಕ ಸಂಸ್ಥೆ, ಬೆಂಗಳೂರಿನ ಕರ್ನಾಟಕ ಗಾಂಧೀ ಸ್ಮಾರಕ ನಿಧಿ, ಗಾಂಧಿ ವಿಚಾರ ಪರಿಷತ್‌ ಸಹಯೋಗದಲ್ಲಿ ಮಹಾರಾಜ ಕಾಲೇಜು ಶತಮಾನೋತ್ಸವದಲ್ಲಿ ಏರ್ಪಡಿಸಿದ್ದ ಬಾ-ಬಾಪು 150ನೇ ಜನ್ಮ ವರ್ಷಾಚರಣೆ ಗಾಂಧಿ ವ್ಯಕ್ತಿ ವಿಚಾರಗಳ ಪ್ರಸ್ತುತತೆ ವಿಚಾರ ಸಂಕಿರಣದಲ್ಲಿ “ಗಾಂಧೀ ಇಂದು ಎಷ್ಟು ಪ್ರಸ್ತುತ ವಿಚಾರ ಕುರಿತು ಮಾತನಾಡಿದರು.

ರಾಕ್ಷಸ ಆರ್ಥಿಕತೆ: ಪವಿತ್ರ ಆರ್ಥಿಕತೆ ಅಂದರೆ ಸರಳವಾದದ್ದು. ಹೆಚ್ಚು ಪರಿಸರ ನಾಶವಿಲ್ಲದೇ ಯುವಕ, ಯುವತಿಯರಿಗೆ ಉದ್ಯೋಗ ಕೊಡುವುದು. ಉದ್ಯೋಗ ಕಡಿತ ಮಾಡುವ, ಪರಿಸರ ನಾಶ ಮಾಡುವ ಆರ್ಥಿಕತೆಯನ್ನು ರಾಕ್ಷಸ ಆರ್ಥಿಕತೆ ಅಂತ ಕರೆಯುತ್ತಾರೆ. ಇದರಿಂದ ಹೊರ ಬರಬೇಕಿದೆ ಎಂದು ತಿಳಿಸಿದರು.

ಪವಿತ್ರ ಆರ್ಥಿಕತೆ ಅಂದರೆ ಗುದ್ದಲಿ-ಪಿಕಾಸಿ ಹಿಡಿದು ದುಡಿಯುವಂತೆ ನಾನು ಹೇಳುತ್ತಿಲ್ಲ. ರೈತರು, ಕುಶಲಕರ್ಮಿಗಳು, ನೇಕಾರರಿಗೆ ಸಹಾಯ ಮಾಡುವ ಉದ್ಯೋಗ ಸೃಷ್ಟಿ ಮಾಡಿಕೊಳ್ಳುವಂತೆ ಸಲಹೆ ನೀಡುತ್ತಿದ್ದೇನೆ. ಆಟೋಮೊಬೈಲ್‌, ಸಾಫ್ಟ್ವೇರ್‌ ಉದ್ದಿಮೆಗಳಿಗೆ ತಮ್ಮನ್ನು ಮಾರಿಕೊಳ್ಳದೇ ಸಣ್ಣ ಉದ್ದಿಮೆ ಸ್ಥಾಪಿಸಿ ನಾಯಕರಾಗಬಹುದು. ಇದರಿಂದ ಒಳ್ಳೆಯ ಬದುಕು ನಡೆಸಲು ಸಾಧ್ಯವಿದೆ ಎಂದರು.

ಆರ್ಥಿಕ ಹಿಂಜರಿತ: ಆರ್ಥಿಕ ಹಿಂಜರಿತದ ಬಗ್ಗೆ ಪತ್ರಿಕಾ ವರದಿಗಳು ಹೆದರಿಕೆ ತರುತ್ತಿವೆ. ಮಾಹಿತಿ ತಂತ್ರಜ್ಞಾನ, ವಾಣಿಜ್ಯ, ಎಂಜಿನಿಯರ್ ಕ್ಷೇತ್ರಗಳಲ್ಲಿ 3 ದಶಕಗಳಲ್ಲಿ ಉತ್ತಮ ಉದ್ಯೋಗಾವಕಾಶಗಳು ದೊರತವು. ಆರ್ಥಿಕ ಪರಿಸ್ಥಿತಿ ಚೆನ್ನಾಗಿತ್ತು. ಆಕರ್ಷಕ ಕೆಲಸ ಕೊಟ್ಟದ್ದು ನಿಜ. 10 ವರ್ಷಗಳಿಂದ ಈ ಕ್ಷೇತ್ರಗಳಲ್ಲಿ ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆಯಾಗಿದೆ. ಕೆಲಸ ಸಿಗುತ್ತಿಲ್ಲ. ಪರಿಸ್ಥಿತಿ ದಿನೇ ದಿನೆ ಹಾಳಾಗುತ್ತಿದೆ ಎಂದು ತಿಳಿಸಿದರು.

ಮಾಲ್‌ ವ್ಯವಸ್ಥೆ: ಎಲ್ಲಾ ಸೌಲಭ್ಯ ಕೊಟ್ಟು ಬೃಹತ್‌ ಮಾಲ್‌ ವ್ಯವಸ್ಥೆ ತಂದು ಬೀದಿಬದಿ ವ್ಯಾಪಾರಗಾರರು, ಕಾರ್ಮಿಕರನ್ನು ಕೊಲ್ಲಲಾಗುತ್ತಿದೆ. ತಳ್ಳುಗಾಡಿ ವ್ಯಾಪಾರಿಗಳ‌ನ್ನು ಬಂಧಿಸಲಾಗುತ್ತಿದೆ. ಗಿರಣಿ ಅಂಗಡಿ ಬಂದ್‌ ಮಾಡಿಸಲಾಗುತ್ತಿದೆ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಲಕ್ಷಾಂತರ ಹೆಣ್ಣು ಮಕ್ಕಳು ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಮುಂದಿನ ಬದುಕು ಏನಾಗಬಹುದು? ಊಹಿಸಲು ಅಸಾಧ್ಯ ಎಂದರು.

ಗಾಂಧೀಜಿ ಬಗ್ಗೆ ಹೆಚ್ಚು ಮಾತನಾಡಿ ಗೂಡ್ಸೆ ಜನಪ್ರಿಯವಾಗುವಂತೆ ಮಾಡಿದ್ದೇವೆ. ಈಗ ಗಾಂಧೀಜಿ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಕೆಲಸ ಮಾಡಬೇಕಿದೆ. ವಿಶ್ವವಿದ್ಯಾನಿಲಯಗಳು ಸಿಮೆಂಟಿನಲ್ಲಿ ಗಾಂಧಿ ಪ್ರತಿಮೆ, ಭವನ ಕಟ್ಟುವುದೇ ನಮ್ಮ ಕೆಲಸ ಅಂದುಕೊಂಡಿವೆ. ಪವಿತ್ರ ಆರ್ಥಿಕತೆಗೆ ವಿಶ್ವವಿದ್ಯಾನಿಲಯಗಳು ಒಂದು ವ್ಯವಸ್ಥೆ ರೂಪಿಸಬೇಕು ಎಂದು ಹೇಳಿದರು.

ರೈತರಿಗೆ ನೆರವಾಗಿ: ರಾಸೇಯೋ ಶಿಬಿರಾರ್ಥಿಗಳು ಹಳ್ಳಿಗಳಿಗೆ ಹೋದಾಗ ಅಲ್ಲಿ ಪಾರ್ಥೇನಿಯಂ ಗಿಡ ಕೀಳುವ ನಾಟ ಮಾಡದೇ ರೈತಾಪಿ ಜನರ ಬದುಕನ್ನು ಅರ್ಥ ಮಾಡಿಕೊಂಡು ಸಹಾಯ ಮಾಡಲು ಸಾಧ್ಯವೇ ಚಿಂತಿಸಬೇಕು. ಕುವೆಂಪು ಅವರ ನಿರಂಕುಶಮತಿಗಳಾಗಿ ಎಂಬ ಮಾತನ್ನು ಅಳವಡಿಸಿಕೊಳ್ಳಬೇಕು. ಸರಿ ಅನ್ನಿಸಿದ್ದನ್ನು ಕಾರ್ಯ ರೂಪಕ್ಕೆ ತರುವ ಛಾತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಮಾಜ ಪರಿತರ್ವನ ಸಮುದಾಯದ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌, ಮಹಾತ್ಮ ಗಾಂಧೀ ನ್ಯಾಷನಲ್‌ ಮ್ಯೂಜಿಯಂ ನಿರ್ದೇಶಕ ಎ.ಅಣ್ಣಾಮಲೈ, ಸಮಾಜವಾದಿ ಪ.ಮಲ್ಲೇಶ್‌, ಮೈಸೂರು ವಿವಿ ಸಂದರ್ಶಕ ಪ್ರಾಧ್ಯಾಪಕ ಪ್ರೊ.ಸಿ.ನಾಗಣ್ಣ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ.ವಸಂತಕುಮಾರ್‌ ತಿಮಕಾಪುರ, ಎಚ್‌.ಸಿ.ದಾಸಪ್ಪ ಸಾರ್ವಜನಿಕ ಸಂಸ್ಥೆ ಅಧ್ಯಕ್ಷ ಡಾ.ಕೆ.ಮಹಾದೇವ್‌, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಸಂಯೋಜನಾಧಿಕಾರಿ ಡಾ.ಬಿ.ಚಂದ್ರಶೇಖರ್‌ ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.