ಗಡಿ ವಿಚಾರವಾಗಿ ನಮ್ಮ ನಿಲುವನ್ನು ಕೇಂದ್ರದ ಮುಂದೆ ತಿಳಿಸುತ್ತೇವೆ: ಸಿಎಂ ಬೊಮ್ಮಾಯಿ
Team Udayavani, Dec 13, 2022, 11:58 AM IST
ಮೈಸೂರು: ಕರ್ನಾಟಕ- ಮಹಾರಾಷ್ಟ್ರ ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕಾನೂನು ನಿಯಮಗಳನ್ನು ಗೃಹ ಸಚಿವರ ಮುಂದಿಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಗಡಿ ವಿವಾದ ವಿಚಾರವಾಗಿ ಎರಡು ರಾಜ್ಯಗಳ ಸಿಎಂಗಳ ಕೇಂದ್ರ ಗೃಹ ಸಚಿವರ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ನಾನು ಎಲ್ಲಾ ಸಿದ್ಧತೆ ನಡೆಸಿಯೇ ತೆರಳುತ್ತೇನೆ. ಗೃಹ ಸಚಿವರು ಈ ಬಗ್ಗೆ ಪ್ರಸ್ತಾಪ ಮಾಡಿದರೆ ನಾನು ಚರ್ಚಿಸುತ್ತೇನೆ. ಮೊದಲು ಗಡಿ ವಿಚಾರವಾಗಿ ಚರ್ಚೆ ಮಾಡಲು ಆಹ್ವಾನ ನೀಡಿದ್ದಾರೆ ಎಂದರು.
ಇದನ್ನೂ ಓದಿ:26 ವರ್ಷದ ಬಳಿಕ ಜಪಾನ್ನಲ್ಲಿದ್ದ ರಜಿನಿಕಾಂತ್ ʼಮುತ್ತುʼ ದಾಖಲೆ ಮುರಿದ ರಾಜಮೌಳಿಯ ʼRRRʼ
ಚಾಮರಾಜನಗರ ಭೇಟಿಯ ಕುರಿತು ಮಾತನಾಡಿದ ಅವರು, ಚಾಮರಾಜನಗರಕ್ಕೆ ಇದು ನನ್ನ ಮೂರನೇ ಭೇಟಿ, ಹೊಸದೇನಲ್ಲ. ಚಾಮರಾಜನಗರ ಒಂದು ಐತಿಹಾಸಿಕ ನಗರ, ಭೂಮಿ ಎಲ್ಲಾ ಒಂದೆ, ವಿಶೇಷ ಏನೂ ಇಲ್ಲ. ರಾಜ್ಯದ 31 ಜಿಲ್ಲೆಗಳಲ್ಲಿ ಚಾಮರಾಜನಗರ ಕೂಡ ಒಂದು ಮಹತ್ವದ ಜಿಲ್ಲೆ. ಅಲ್ಲಿಗೆ ಹೋಗಿತ್ತಿದ್ದೇನಷ್ಟೇ, ಬೇರೇನು ನನ್ನ ತಲೆಯಲ್ಲಿಲ್ಲ ಎಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ