ಹಸಿ, ಒಣ ಕಸ ವಿಂಗಡಿಸದಿದ್ದರೆ ದಂಡ


Team Udayavani, Aug 8, 2019, 3:00 AM IST

hasi-ona

ಕೆ.ಆರ್‌.ನಗರ: ಪಟ್ಟಣದ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಸ್ತುಗಳ ನಿಯಮ 2016ರ ಸಂಪೂರ್ಣ ಅನುಷ್ಠಾನಕ್ಕಾಗಿ ಹಸಿರು ಪೀಠದ ಆದೇಶದಂತೆ ಮನೆಗಳಲ್ಲಿ ಹಸಿಕಸ, ಒಣಕಸ ಹಾಗೂ ಸ್ಯಾನಿಟರಿ ತ್ಯಾಜ್ಯಗಳನ್ನು ಪ್ರತ್ಯೇಕಿಸಿ ಮತ್ತು ಅಪಾಯಕಾರಿ ಕಸಗಳಾಗಿ ಕಡ್ಡಾಯವಾಗಿ ಬೇರ್ಪಡಿಸಿ ಪುರಸಭೆ ವಾಹನಗಳಿಗೆ ನೀಡಬೇಕು. ತಪ್ಪಿದಲ್ಲಿ ದಂಡ ವಿಧಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಶಿವಣ್ಣ ಎಚ್ಚರಿಕೆ ನೀಡಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಅಡುಗೆ ಮನೆಯ ತ್ಯಾಜ್ಯ, ತರಕಾರಿ, ಪೂಜಾ ಮನೆಯ ಒಣಗಿದ ಹೂವು ಇತರೆ ಕರಗುವ ಪದಾರ್ಥಗಳನ್ನು ಹಸಿ ಕಸವಾಗಿ, ರಟ್ಟು, ಟಿನ್‌, ಪ್ಲಾಸ್ಟಿಕ್‌, ಕಬ್ಬಿಣ, ತೆಂಗಿನ ಕರಟ, ನೀರಿನ ಬಾಟಲಿ, ಒಡೆದ ಆಟಿಕೆಗಳು ಇನ್ನಿತರ ಪ್ಯಾಕೇಜಿಂಗ್‌ ವಸ್ತುಗಳನ್ನು ಒಣ ಕಸವನ್ನಾಗಿ ಹಾಗೂ ಹೆಂಗಸರು ಬಳಸುವ ಸ್ಯಾನಿಟರಿ ಪ್ಯಾಡ್‌, ಮಕ್ಕಳ ಅಥವಾ ವಯಸ್ಕ ರೋಗಿಗಳ ಡೈಫ‌ರ್‌ಗಳನ್ನು ಸ್ಯಾನಿಟರಿ ತ್ಯಾಜ್ಯವಾಗಿ ಪ್ರತ್ಯೇಕಿಸಿ ಕಾಗದದಿಂದ ಸುತ್ತಿ ಪುರಸಭೆ ವಾಹನಗಳಿಗೆ ನೀಡಬೇಕು. ಹಾಗೂ ಬಳಸಿದ ಬ್ಯಾಟರಿ, ಒಡೆದ ಗಾಜು, ವಿದ್ಯುತ್‌ ಬಲ್ಬು, ಅವಧಿ ಮೀರಿದ ಔಷಧ ಇನ್ನಿತರ ಎಲೆಕ್ಟ್ರಾನಿಕ್‌ ಅಪಾಯಕಾರಿ ತ್ಯಾಜ್ಯಗಳಾಗಿದ್ದು, ಇವುಗಳನ್ನು ಪ್ರತ್ಯೇಕಿಸಿ ನೀಡಬೇಕು ಎಂದು ಮನವಿ ಮಾಡಿದರು.

ಅಂಗಡಿಯವರೇ ತ್ಯಾಜ್ಯ ಸಂಸ್ಕರಿಸಿ: ಕಲ್ಯಾಣ ಮಂಟಪ, ಮೀನು, ಕೋಳಿ, ಮಾಂಸ ಮಾರಾಟಗಾರರು ಕಡ್ಡಾಯವಾಗಿ ಪ್ರತ್ಯೇಕವಾಗಿ ತ್ಯಾಜ್ಯವನ್ನು ಅವರೇ ಸಂಸ್ಕರಿಸಿಕೊಳ್ಳಬೇಕು ಅಥವಾ ಪುರಸಭೆ ನಿಗದಿತ ವಾಹನಕ್ಕೆ ಪ್ರತ್ಯೇಕಿಸಿ ನೀಡಬೇಕು. ಯಾವುದೇ ಸಾರ್ವಜನಿಕ, ವೈಯುಕ್ತಿಕ, ರಾಜಕೀಯ, ಧಾರ್ಮಿಕ, ಸಮಾರಂಭಗಳನ್ನು ಪಟ್ಟಣದಲ್ಲಿ ಮನೆಗಳ ಬಳಿ ಆಯೋಜಿಸುವ ಮೊದಲು ಪುರಸಭೆಗೆ ಮಾಹಿತಿ ನೀಡಿ ಸ್ವಚ್ಚತಾ ಮುಂಗಡ ಪಾವತಿಸಿ ಅನುಮತಿ ಪಡೆಯಬೇಕು. ತಪ್ಪಿದಲ್ಲಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.

ಈಗಾಗಲೇ ಪಟ್ಟಣದ ಹಲವೆಡೆ ಕಾನೂನು ಉಲ್ಲಂ ಸುವವರಿಗೆ ದಂಡ ವಿಧಿಸುವ ಬಗ್ಗೆ ಮಾಹಿತಿ ನೀಡಲಾಗಿದ್ದು, ತೆರೆದ ಚರಂಡಿ, ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಬಿಸಾಡಿದರೆ ಕಟ್ಟಡದ ಭಗ್ನಾವಶೇಷಗಳನ್ನು ಎಲ್ಲೆಂದರಲ್ಲಿ ಸುರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌, ಇನ್ನಿತರ ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದ್ದು ಮನೆಯಿಂದ ಮಾರುಕಟ್ಟೆಗೆ ಬಟ್ಟೆಯ ಬ್ಯಾಗ್‌ಗಳನ್ನು ತೆಗೆದುಕೊಂಡು ಹೋಗಿ ಕ್ಯಾನ್ಸರ್‌ ಕಾಯಿಲೆಗೆ ಕಾರಣವಾಗುವ ಪ್ಲಾಸ್ಟಿಕ್‌ ಬಳಕೆಯನ್ನು ನಿಲ್ಲಿಸಬೇಕು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪುರಸಭೆ ಪರಿಸರ ಎಂಜಿನಿಯರ್‌ ರವಿಕುಮಾರ್‌, ಕಂದಾಯ ಅಧಿಕಾರಿ ನೀಲಾ ಮತ್ತಿತರರು ಹಾಜರಿದ್ದರು.

ಪ್ಲಾಸ್ಟಿಕ್‌ ಬಳಸಿದರೆ ಲಕ್ಷ ರೂ.ವರೆಗೆ ದಂಡ: ಘನತ್ಯಾಜ್ಯ ವಸ್ತುಗಳ ನಿಯಮಗಳ ಪ್ರಕಾರ ಯಶಸ್ವಿ ಅನುಷ್ಠಾನಕ್ಕಾಗಿ ಉಪನಿಯಮಗಳನ್ನು ಅಳವಡಿಸಿಕೊಳ್ಳಲಾಗಿದ್ದು, ಉಲ್ಲಂಘನೆಗೆ ಆ.2019ರಿಂದ ಶಿಸ್ತು ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು. ಘಟನೆಗಳು ಪುನರಾವರ್ತನೆಯಾದರೆ ಸ್ಥಳೀಯ ನ್ಯಾಯಾಲಯಗಳಲ್ಲಿ ಮೊಕದ್ದಮೆ ದಾಖಲಿಸಲಾಗುವುದು. ಪ್ರಕಟಣೆಯ ನಂತರವೂ ಯಾವುದೇ ವ್ಯಕ್ತಿ ಉದ್ದಿಮೆದಾರರು ಸಾರ್ವಜನಿಕ ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳ ಬಳಕೆ ಮಾಡುವುದು ಕಂಡು ಬಂದಲ್ಲಿ ನಿಯಮಗಳ ಅನುಸಾರ 500 ರೂ. ನಿಂದ ಒಂದು ಲಕ್ಷದವರೆಗೆ ದಂಡ ವಿಧಿಸಲಾಗುವುದು. ಅಲ್ಲದೇ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಾಧಿಕಾರಿ ಶಿವಣ್ಣ ಎಚ್ಚರಿಕೆ ನೀಡಿದರು.

ಕಸದಿಂದ ಗೊಬ್ಬರ ಮಾಡಿ ಮಳೆ ನೀರು ಸಂಗ್ರಹಿಸಿ: ಹಸಿ ಕಸವನ್ನು ಮನೆಗಳಲ್ಲಿಯೇ ಪೈಪ್‌ ಕಾಂಪೋಸ್ಟಿಂಗ್‌ ಮಾದರಿ ಅಳವಡಿಸಿಕೊಂಡು ಗೊಬ್ಬರ ಮಾಡಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಸ್ವಚ್ಚತಾ ಸಿಬ್ಬಂದಿಯಿಂದ ತಿಳಿದು ಮನೆಗಳಲ್ಲಿ ಮಳೆ ನೀರು ಕೊಯ್ಲು ಮಾಡಿ ಪರಿಸರ ಸ್ನೇಹಿಯಾಗಿ ಕೆಲಸ ಮಾಡಬೇಕು. ಜತೆಗೆ ಈ ಎಲ್ಲಾ ಕಾರ್ಯಗಳಲ್ಲಿ ಪುರಸಭೆ ಸಿಬ್ಬಂದಿ ಜೊತೆ ಕೈಜೋಡಿಸಿ ಸುಂದರ ನಗರವಾಗಿಸಲು ಸಹಕಾರ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಶಿವಣ್ಣ ಮನವಿ ಮಾಡಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.