ನನ್ನ ಕ್ಷೇತ್ರದ ಬಗ್ಗೆ ಎಚ್ಡಿಕೆಗೇನು ಗೊತ್ತು?
Team Udayavani, Mar 30, 2018, 6:45 AM IST
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಿಂದಲೇ ರಾಜಕೀಯ ಆರಂಭಿಸಿದ್ದೇನೆ. ಈಗ ಮತ್ತೆ ಅಲ್ಲಿಂದಲೇ ನಿಂತು ಗೆದ್ದು ಬರುತ್ತೇನೆಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಎಚ್.ಡಿ.ಕುಮಾರಸ್ವಾಮಿಗೆ ಏನು ಗೊತ್ತು ಎಂದು ಕಿಡಿಕಾರಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, “ಕುಮಾರಸ್ವಾಮಿಯನ್ನು ಕೇಳಿಕೊಂಡು ನಾನು ರಾಜಕಾರಣ ಮಾಡಬೇಕಾ?, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಷ್ಟು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂಬುದಾದರೂ ಕುಮಾರಸ್ವಾಮಿಗೆ ಗೊತ್ತಾ? ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವುದೇ ಅನುಮಾನ ಎಂದು ಸುಮ್ಮನೆ ಹೇಳುತ್ತಾರೆ. 1983ರಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏಳು ಬಾರಿ ಚುನಾವಣೆಗೆ ನಿಂತಿದ್ದೇನೆ. ಐದು ಬಾರಿ ಗೆದ್ದು, ಎರಡು ಬಾರಿ ಸೋತಿದ್ದೇನೆ. ಈಗಲೂ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಹೇಳಿದರು.
2 ಸಾವಿರ ರೂ.ನೋಟು ನೀಡಿದ ಸಿಎಂ: ರೋಡ್ ಶೋ ನಡೆಸಿದ ಮೊದಲ ದಿನವೇ ಸಿಎಂ ಸಿದ್ದರಾಮಯ್ಯ, ತಮ್ಮನ್ನು ಸ್ವಾಗತಿಸಿದ ಇಬ್ಬರು ಮಹಿಳೆಯರಿಗೆ ಹಣ ನೀಡುವ ಮೂಲಕ ನೀತಿಸಂಹಿತೆ ಉಲ್ಲಂ ಸಿದರು. ರಮ್ಮನಹಳ್ಳಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಅವರ ಕಾರಿನ ಬಳಿ ಬಂದು ಸ್ವಾಗತಿಸಿದ ಇಬ್ಬರು ಮಹಿಳೆಯರಿಗೆ ಸಿದ್ದರಾಮಯ್ಯ ತಲಾ 2 ಸಾವಿರ ರೂ. ತೆಗೆದುಕೊಟ್ಟರು. ಸ್ವಲ್ಪ ದೂರದಲ್ಲಿ ಮತ್ತೂಂದು ಗುಂಪಿನವರು ವಾಹನ ನಿಲ್ಲಿಸಿ ಆರತಿ ಮಾಡಿದಾಗ ನೂರು ರೂಪಾಯಿ ನೋಟನ್ನಷ್ಟೇ ಹಾಕಿ ಮುನ್ನಡೆದರು.
ಚಾಮುಂಡೇಶ್ವರಿ ಕ್ಷೇತ್ರದ ಜನತೆಯ ನಾಡಿಮಿಡಿತ ಸಿದ್ದರಾಮಯ್ಯ ಅವರಿಗಿಂತ ನನಗೆ ಚೆನ್ನಾಗಿ ಗೊತ್ತಿದೆ. 2006ರ ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ಕುತಂತ್ರದಿಂದ ಗೆದ್ದರು. ಅದು ಕಾಂಗ್ರೆಸ್ ಎದುರಿಸಿದ ಉಪ ಚುನಾವಣೆ, ಸಿದ್ದರಾಮಯ್ಯ ಎದುರಿಸಿದ್ದಲ್ಲ.
– ಕುಮಾರಸ್ವಾಮಿ,
ಜೆಡಿಎಸ್ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ