ಗೋಹತ್ಯೆಗೂ ಪ್ರವಾಹಕ್ಕೂ ಎಲ್ಲಿಯ ಸಂಬಂಧ?
Team Udayavani, Aug 27, 2018, 11:51 AM IST
ಮೈಸೂರು: ಗೋಹತ್ಯೆಗೂ ಕೇರಳದಲ್ಲಿ ಪ್ರವಾಹ ಉಂಟಾಗಿರುವುದಕ್ಕೂ ಎಲ್ಲಿಂದೆಲ್ಲಿಯ ಸಂಬಂಧ, ಬಿಜೆಪಿ ನಾಯಕರ ಇಂತಹ ಹೇಳಿಕೆಗಳಿಗೆಲ್ಲಾ ನಾವು ಪ್ರತಿಕ್ರಿಯೆ ನೀಡಬೇಕಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಭಾನುವಾರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಾದಪಡೆದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕೇರಳದಲ್ಲಿ ಬಹಿರಂಗವಾಗಿ ಗೋವುಗಳನ್ನು ಕಡಿದು ಗೋಮಾಂಸ ಸೇವಿಸಿದ್ದರಿಂದಲೇ ಪ್ರವಾಹ ಬಂದಿದೆ ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಕಿಡಿಕಾರಿದ ಅವರು, ಕೇರಳದಲ್ಲಿ ಹಿಂದಿನಿಂದಲೂ ಗೋಮಾಂಸ ಸೇವಿಸುತ್ತಾ ಬಂದಿದ್ದಾರೆ. ಆಗೆಲ್ಲಾ ಏಕೆ ಪ್ರವಾಹ ಬಂದಿರಲಿಲ್ಲ ಎಂದು ಪ್ರಶ್ನಿಸಿದರು.
ಗೋಮಾಂಸದ ವಿಚಾರದಲ್ಲಿ ಬಿಜೆಪಿಯವರದು ಇಬ್ಬಂದಿತನ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೇಕೆ ಗೋಮಾಂಸ ಸೇವನೆ ತಡೆಯುತ್ತಿಲ್ಲ. ಬಿಜೆಪಿ ಅಧಿಕಾರವಿರುವ ರಾಜ್ಯಗಳಿಂದಲೇ ಹೆಚ್ಚಿನ ಗೋಮಾಂಸ ರಫ್ತು ನಡೆಯುತ್ತಿದೆ ಅದನ್ನೇಕೆ ತಡೆಯುತ್ತಿಲ್ಲ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ