ಚುನಾವಣೆಗೆ 2 ದಿನ ಇದ್ದಂತೆ ಬಿಜೆಪಿ ಆಭ್ಯರ್ಥಿ ತಟಸ್ಥವಾಗಿದ್ದೇಕೆ?


Team Udayavani, May 20, 2018, 2:06 PM IST

m5-chunavane.jpg

ತಿ.ನರಸೀಪುರ: ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬಿಜೆಪಿ ಅಭ್ಯರ್ಥಿ ಎಸ್‌.ಶಂಕರ್‌ ಚುನಾವಣೆಗೆ 2 ದಿನ ಬಾಕಿ ಇರುವಂತೆ ತಟಸ್ಥವಾಗಿದ್ದು ಏಕೆ ಎಂಬ ವಿಷಯ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಫ‌ಲಿತಾಂಶ ಪ್ರಕಟಗೊಂಡು ಜೆಡಿಎಸ್‌ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿ, ಪ್ರತಿಸ್ಪರ್ಧಿಯಾಗಿದ್ದ ಮಹದೇವಪ್ಪಗೆ ಬಾರಿ ಮುಖಭಂಗವೂ ಆಗಿದೆ. ಆದರೆ, ಬಿಜೆಪಿ ಅಭ್ಯರ್ಥಿ ಎಸ್‌.ಶಂಕರ್‌ ಚುನಾವಣೆ ಎರಡು ದಿನ ಎಂಬಂತೆ ತಟಸ್ಥರಾಗಿ ಉಳಿದುಕೊಂಡಿದ್ದೇಕೆ ಎಂಬ ಪ್ರಶ್ನೆ ಆ ಪಕ್ಷದ ಕಾರ್ಯಕರ್ತರು, ಮತದಾರರನ್ನು ಕಾಡುತ್ತಿದೆ.

ಮೂಲತಃ ಕಾಂಗ್ರೆಸ್‌ ನಾಯಕರಾಗಿದ್ದ ಎಸ್‌.ಶಂಕರ್‌, ಪಕ್ಷದಲ್ಲಿ ಸೂಕ್ತ ಸ್ಥಾನ ಸಿಗದೇ ಜೆಡಿಎಸ್‌ ಸೇರಿದ್ದರು. ಅಲ್ಲಿಯೂ ಎಚ್‌.ಡಿ.ಕುಮಾರಸ್ವಾಮಿ ಮನ್ನಣೆ ನೀಡದ ಕಾರಣ, ಬೇಸತ್ತು ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ಟಿಕೆಟ್‌ ಪಡೆದರು.

ನಂತರದಲ್ಲಿ ಮಾಜಿ ಶಾಸಕಿ ಸುನೀತಾವೀರಪ್ಪಗೌಡ, ಚಿಕ್ಕಮಾದನಾಯ್ಕ ಅವರನ್ನು ಪಕ್ಷಕ್ಕೆ ಕರೆತಂದು ಭರ್ಜರಿ ಪ್ರಚಾರ ನಡೆಸಿದ್ದರು. ಇವರ ವೇಗ ಗಮನಿಸಿದ ವೀರಶೈವ ಲಿಂಗಾಯತರು ಮಹದೇವಪ್ಪಸೋಲಿಸಲು ಈತನೇ ಸರಿಯಾದ ವ್ಯಕ್ತಿ ಎಂಬ ತೀರ್ಮಾನಕ್ಕೆ ಬಂದಿದ್ದರು.

ವರುಣಾದಲ್ಲಿ ವಿಜಯೇಂದ್ರಗೆ ಟಿಕೆಟ್‌ ತಪ್ಪುತ್ತಿದಂತೆ ಆಕ್ರೋಶಗೊಂಡ ವೀರಶೈವ ಲಿಂಗಾಯತರು ಜೆಡಿಎಸ್‌ ಅಭ್ಯರ್ಥಿ ಎಂ.ಅಶ್ವಿ‌ನ್‌ಕುಮಾರ್‌ ಬೆಂಬಲಕ್ಕೆ ನಿಂತರು. ಲಿಂಗಾಯತ ಸಮುದಾಯದ ನಿರ್ಧಾರದಿಂದ ಗೆದ್ದೇ ಗೆಲ್ಲುತ್ತೇನೆಂಬ ಹಂಬಲ ಹೊಂದಿದ್ದ ಬಿಜೆಪಿ ಅಭ್ಯರ್ಥಿಗೆ ನಿರಾಶೆಯುಂಟಾಯಿತು.

ಚುನಾವಣೆ ಮೂರು ದಿನ ಬಾಕಿ ಎಂಬಂತೆ ಪ್ರಚಾರ ಕೈಗೊಳ್ಳುತ್ತಿದ್ದ ಎಸ್‌.ಶಂಕರ್‌, ಕೊನೆಯ ಎರಡು ದಿನ ಕಾರ್ಯಕರ್ತರ ಕೈಗೂ ಸಿಗದೇ ನಾಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಶಂಕರ್‌ ಈ ನಡೆ ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಟೀಕೆಗೂ ಗುರಿಯಾಗಿದೆ.

ಈ ನಡುವೆ ಅಮಿಷಕ್ಕೆ ಒಳಗಾಗಿ ಎಸ್‌.ಶಂಕರ್‌ ಪರೋಕ್ಷವಾಗಿ ಮಹದೇವಪ್ಪಗೆ ಅನುಕೂಲ ಮಾಡಿಕೊಡಲು ಚುನಾವಣಾ ಕಣದಿಂದ ಸರಿದರೆಂಬ ಆರೋಪ ಕೂಡ ಕೇಳಿಬಂದಿದೆ. ಇದಕ್ಕೆ ಉತ್ತರ ನೀಡಲು ಎಸ್‌.ಶಂಕರ್‌ ಮುಂದಾಗಲಿಲ್ಲ. ಪರಿಣಾಮ ಇದನ್ನೇ ನಂಬಿದ ಕಾರ್ಯಕರ್ತರು ಶಂಕರ್‌ ಅವರನ್ನು ಶಪಿಸುತ್ತಿದ್ದು, ಈಗಲೂ ಶಂಕರ್‌ ನಡೆಗೆ ಕಾರಣ ಸಿಕ್ಕಿಲ್ಲ. ಇವರ ಈ ನಡೆ ಜೆಡಿಎಸ್‌ ಅಭ್ಯರ್ಥಿಗೆ ವರದಾನವಾಗಿರುವುದಂತೂ ಸತ್ಯ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.