ನಾಗರಹೊಳೆಯಲ್ಲಿ ಕಾಡುಕೋಣ ಬೇಟೆ, ಇಬ್ಬರ ಬಂಧನ
ಉಳಿದ ಆರೋಪಿಗಳ ಬಂಧನಕ್ಕೆ ತಂಡ ರಚನೆ
Team Udayavani, Oct 22, 2022, 9:15 AM IST
ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡುಕೋಣ ಬೇಟೆಯಾಡಿದ್ದ ಇಬ್ಬರು ಬೇಟೆಗಾರರನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದು, ಉಳಿದ ಏಳು ಮಂದಿ ತಲೆ ಮರೆಸಿಕೊಂಡಿದ್ದಾರೆ ಎಮದು ತಿಳಿದು ಬಂದಿದೆ.
ಪಿರಿಯಾಪಟ್ಟಣ ತಾಲೂಕಿನ ಉದ್ಯಾನವನದಂಚಿನ ಲಕ್ಷ್ಮೀಪುರ ನಿವಾಸಿಗಳಾದ ಅಶೋಕ, ಕಾಟಿಚಂದ್ರ ಬಂಧಿತರು.
ಘಟನೆ ವಿವರ:
ಅ.15ರ ರಾತ್ರಿ ಉದ್ಯಾನದ ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ಆನೆ ಚೌಕೂರು ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಕೋಣ ಬೇಟೆಯಾಡಿ ನಾಲ್ಕು ತೊಡೆಗಳು ಹಾಗೂ ಮಾಂಸವನ್ನು ಹೊತ್ತೊಯ್ದಿದ್ದರು. ಈ ಸಂಬಂಧ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತಲಾಷ್ ನಡೆಸುತ್ತಿದ್ದರು.
ಆರೋಪಿಗಳ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಹುಲಿ ಯೋಜನೆ ನಿರ್ದೇಶಕ ಹರ್ಷ ಕುಮಾರ್ ನರಗುಂದ, ಎಸಿಎಫ್ ದಯಾನಂದ್ ಮಾರ್ಗದರ್ಶನದಲ್ಲಿ ಆರ್.ಎಫ್.ಓ.ಗಳಾದ ರತನ್ ಕುಮಾರ್. ಗಣರಾಜ ಪಟಗಾರ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ ವೇಳೆ ಆನೆ ಚೌಕೂರು ವಲಯದಂಚಿನ ಲಕ್ಷ್ಮೀಪುರ ಗ್ರಾಮದಲ್ಲಿ ಇಬ್ಬರು ಆರೋಪಿಗಳು ಸಿಕ್ಕಿ ಬಿದ್ದಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಡಿಸಿಎಫ್ ಹರ್ಷಕುಮಾರ್ ನರಗುಂದ ಉದಯವಾಣಿಗೆ ತಿಳಿಸಿದ್ದಾರೆ.
ತಲೆಮರೆಸಿಕೊಂಡಿರುವ ಮನು, ಬೊಮ್ಮ, ಭರತ್, ಆನಂದ್, ಶೇಷಮ್ಮನ ಜಯ, ರಾಮಕೃಷ್ಣೇಗೌಡ, ಮಂಜು ಪತ್ತೆಗೆ ತಂಡ ರಚಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹುಣಸೂರು ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿಗಳಾದ ರತನ್ಕುಮಾರ್. ಗಣರಾಜಪಟಗಾರ, ಡಿ.ಆರ್.ಎಫ್.ಓ ಗಳಾದ ಪ್ರಸನ್ನಕುಮಾರ್, ಎನ್.ಕೆ.ವೀರಭದ್ರ, ರಾಮು, ಮನೋಹರ್. ಅರಣ್ಯ ರಕ್ಷಕರಾಗಳಾದ ಲಾಲ್ ಮಹಮದ್, ಕೃಷ್ಣ, ಕುಶಲ್, ವಾಹನ ಚಾಲಕ ಶಿವು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್ಗೆ 77ನೇ ರ್ಯಾಂಕ್
Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್ ನಾಂದಿ
Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ
Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು
MUST WATCH
ಹೊಸ ಸೇರ್ಪಡೆ
Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ