ಕಾಡು, ವನ್ಯಜೀವಿ ರಕ್ಷಣೆ ಸಿಬ್ಬಂದಿ ಕರ್ತವ್ಯ


Team Udayavani, May 20, 2018, 2:06 PM IST

m6-kaadu.jpg

ಹುಣಸೂರು: ಅರಣ್ಯ ಇಲಾಖೆ ಸಿಬ್ಬಂದಿ ಕಾಡು ರಕ್ಷಣೆ ಜತೆಗೆ ಕಾಡಂಚಿನ ಪ್ರದೇಶಗಳಲ್ಲಿ ವನ್ಯಜೀವಿ ಹಾಗೂ ಮಾನವ ಸಂಘರ್ಷ ತಡೆಗಟ್ಟುವ ಮಹತ್ತರ  ಜವಾಬ್ದಾರಿ ಹೊರಬೇಕಿದೆ ಎಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕುಮಾರ್‌ ತಿಳಿಸಿದರು.  

ನಾಗರಹೊಳೆ ರಾಷ್ಟ್ರೀಯ ಉದ್ಯಾನ ವನದ ಆನೆ ಚೌಕೂರು ವಲಯದಲ್ಲಿ ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕಾಗಿ ಆಗಮಿಸಿದ್ದ ಪೊನ್ನಂ ಪೇಟೆ  ಅರಣ್ಯ ಮಹಾವಿದ್ಯಾಲಯದ ತರಬೇತಿನಿತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವನ್ಯಜೀವಿ ವಲಯದ ಬಗ್ಗೆ ಮಾಹಿತಿ ನೀಡಿದ ಅವರು, ನಾಗರಹೊಳೆ ಉದ್ಯಾನವನ 643 ಚದರ ಕಿಲೋ ಮೀಟರ್‌ ವಿಸ್ತಾರ ಹೊಂದಿದೆ. ಒಂದೆಡೆ ಪಶ್ಚಿಮ ಘಟ್ಟಗಳ ಸಾಲು, ಮತ್ತೂಂದೆಡೆ ವೈನಾಡು ಹಾಗೂ  ಮಧುಮಲೈ ಅರಣ್ಯಕ್ಕೂ ಸಂಪರ್ಕವಿದೆ ಎಂದರು. 

ಮಾನವನ ದುರಾಸೆ: ವನ್ಯಜೀವಿ ವಲಯವನ್ನಾಗಿ ಘೋಷಣೆ ಮಾಡಿದ್ದರಿಂದಾಗಿ ಉದ್ಯಾನವನದಲ್ಲಿ ಸಾಕಷ್ಟು ಔಷಧ ಸಸ್ಯ ಪ್ರಬೇಧ, ವಿವಿಧ ಜಾತಿ  ಮರಗಳು ಇದರ ಜೊತೆಗೆ ಅರಣ್ಯಕ್ಕನುಗುಣವಾಗಿ ಪ್ರಾಣಿ ಸಂಕುಲಗಳು ಸ್ವತ್ಛಂದ ವಾಗಿ ಜೀವಿಸಲು ಸಾಧ್ಯವಾಗಿದೆ. ಒಂದೆಡೆ ಜನ ಸಂಖ್ಯಾ ಸ್ಫೋಟ,  ಮತ್ತೂಂದೆಡೆ ಮಾನವನ ದುರಾಸೆ, ಸ್ವಾರ್ಥಕ್ಕಾಗಿ ಕಾಡು ನಾಶಪಡಿಸುವ ಜತೆಗೆ ವನ್ಯಜೀವಿಗಳು ಸಹಜ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ.  ಇದರಿಂದ ಮಾನವ ಮತ್ತು ವನ್ಯಪ್ರಾಣಿಗಳ ಸಂಘರ್ಷ ನಡೆಯುತ್ತಲೇ ಇದೆ ಎಂದರು. 

ಅರಣ್ಯ ಅಧ್ಯಯನಕ್ಕೆ ಮುಂದಾಗಿ: ನಾಗರಿಕರಲ್ಲಿ ಕಾಡು ನಮ್ಮದೆನ್ನುವ ಭಾವನೆ ಬಾರದ ಹೊರತು ಇಲಾಖೆಯನ್ನು ದೂಷಿಸುವುದು ನಿಲ್ಲುವುದಿಲ್ಲ, ಮರ-ಗಿಡ  ಹನನವಾದಲ್ಲಿ, ವನ್ಯಜೀವಿಗಳು ಅರಣ್ಯದಿಂದ ಹೊರಬಂದಾಗ ಮಾತ್ರ ಅರಣ್ಯ ಇಲಾಖೆಯನ್ನು ದೂಷಿಸುವುದು ಮಾಮೂಲಾ ಗಿದೆ. ಆದರೆ ಇಲಾಖೆಗೆ  ನಿಯೋಜನೆಗೊಳ್ಳುವ ಸಿಬ್ಬಂದಿ ಮಾತ್ರ ಕಾಡು ನಮ್ಮದೆಂಬ ಭಾವನೆಯಿಂದ ಕಾಡೊಳಗಿನ ಎಲ್ಲ ಜೀವ ವೈವಿಧ್ಯತೆಯನ್ನು ಕಾಪಾಡುವ ಜೊತೆಗೆ ಅರಣ್ಯ ಅಧ್ಯಯನ ವಿಷಯದಲ್ಲಿ ಪದವಿಗಳಿಸಲು ಕೀಳರಿಮೆ ತೊರೆಯಬೇಕೆಂದು ಸೂಚಿಸಿದರು. 

ಸಂವಾದ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕೊಡಗು ಮತ್ತು ಮೈಸೂರು ಜಿಲ್ಲೆಯ ವಿವಿಧ ಹಾಡಿ ಗಳಿಂದ ಹೊರಬಂದು ಹುಣಸೂರು ತಾಲೂಕಿನ  ಹನ ಗೋಡು ಹೋಬಳಿಯ ಶೆಟ್ಟಳ್ಳಿ-ಲಕ್ಕಪಟ್ಟಣ ಪುನರ್ವಸತಿ ಕೇಂದ್ರದಲ್ಲಿ ಬದುಕು ಕಟ್ಟಿಕೊಂಡಿರುವ ಆದಿವಾಸಿ ಹಾಡಿ ಮತ್ತು ನಾಡಿನ ಬದುಕಿನ ಬಗ್ಗೆ  ಹಾಗೂ ಕೇಂದ್ರದಲ್ಲಿ ಶಿಕ್ಷಣ ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 

ಸಾಕ್ಷಚಿತ್ರ ವೀಕ್ಷಣೆ: ಅರಣ್ಯ ಮತ್ತು ವನ್ಯಜೀವಿಗಳ ಬದುಕು-ಆಹಾರ ಕ್ರಮದ ಬಗ್ಗೆ ವೀರನಹೊಸಹಳ್ಳಿ ಗೇಟ್‌ ನಲ್ಲಿರುವ ಮಾಹಿತಿ ಕೇಂದ್ರದಲ್ಲಿ ಪಿಪಿಟಿ  ಮೂಲಕ ಸಾಕ್ಷಚಿತ್ರ ವೀಕ್ಷಿಸಿದರು. ಆರ್‌ಎಫ್ಒಗಳಾದ ಮಧುಸೂದನ್‌, ಸುರೇಂದ್ರ, ಕಂಠಾಪುರ ಡಿಆರ್‌ಎಫ್ಒ ಶಾರದಾ ನೇತೃತ್ವ ದಲ್ಲಿ ಮಹಾ  ವಿದ್ಯಾಲಯದ 55 ವಿದ್ಯಾರ್ಥಿಗಳು ಇದ್ದರು.  

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.