ವಸ್ತು ಪ್ರದರ್ಶನದಲ್ಲಿ ವನ್ಯಲೋಕ ದರ್ಶನ; ಗಮನ ಸೆಳೆಯುತ್ತಿದೆ ಪ್ರಾಣಿಪಕ್ಷಿಗಳ ಪ್ರತಿಕೃತಿ

ದೇಶದಲ್ಲಿ ಅಭಿವೃದ್ಧಿ ಮತ್ತು ಕಾಡು ಸಂರಕ್ಷಣೆ ಎರಡೂ ಒಟ್ಟಿಗೆ ನಡೆಯಬೇಕು

Team Udayavani, Oct 14, 2022, 6:36 PM IST

ವಸ್ತು ಪ್ರದರ್ಶನದಲ್ಲಿ ವನ್ಯಲೋಕ ದರ್ಶನ; ಗಮನ ಸೆಳೆಯುತ್ತಿದೆ ಪ್ರಾಣಿಪಕ್ಷಿಗಳ ಪ್ರತಿಕೃತಿ

ಮೈಸೂರು: ಘರ್ಜಿಸುತ್ತಿರುವ ಹುಲಿ, ಹಕ್ಕಿಗಳ ಕಲರವ, ಸಫಾರಿ ವಾಹನದತ್ತ ಘೀಳಿಡುತ್ತಾ ಓಡು ತ್ತಿರುವ ಒಂಟಿ ಸಲಗವನ್ನು ನೀವೂ ನೋಡಬೇಕೆ. ಹಾಗಿದ್ದರೆ ಒಮ್ಮೆ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿ, ದಟ್ಟ ಕಾಡಿನಲ್ಲಿ ಸಂಚರಿಸಿದ ಅನುಭವ ಪಡೆಯಿರಿ. ನಗರದ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಅರಣ್ಯ ಇಲಾಖೆಯಿಂದ ಎರಡು ಎಕರೆ ವಿಶಾಲ ಪ್ರದೇಶದಲ್ಲಿ ತೆರೆದಿರುವ ಮಳಿಗೆಯಲ್ಲಿ ಜೀವ ವೈವಿಧ್ಯತೆಯ ಸೊಬಗು ಅನಾವರಣಗೊಂಡಿದ್ದು,ನೂರಕ್ಕೂ ಹೆಚ್ಚು ಪ್ರಾಣಿ, ಪಕ್ಷಿಗಳ ಪ್ರತಿಕೃತಿಗಳು ಅವುಗಳ ಘರ್ಜನೆ, ಚಿಲಿಪಿಲಿ ಸದ್ದುಗಳು ನೋಡುಗರ ಗಮನ ಸೆಳೆಯುತ್ತಿದೆ.

ದಟ್ಟ ಕಾಡಿಗೆ ಹೋದ ಅನುಭವ: ಅರಣ್ಯ ಇಲಾಖೆ ತೆರೆದಿರುವ ಮಳಿಗೆಯ ಒಳಗೆ ಕಾಲಿಟ್ಟೊಡನೆ ವನ್ಯಜೀವಿಗಳ ಸಂರಕ್ಷಣೆಯಿಂದಾಗುವ ಉಪಯೋಗ, ಅರಣ್ಯ ಇಲಾಖೆ ಕಾರ್ಯ, ಜೀವವೈಧ್ಯತೆ ಉಳಿಸಿಕೊಳ್ಳ ಬೇಕಾದ ಅಗತ್ಯತೆ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಹಾಗೆ ಮುಂದೆ ಸಾಗಿದರೆ ಯಾವುದೋ ದಟ್ಟ ಕಾಡಿಗೆ ಹೋದ ಅನುಭವ ಸಿಗಲಿದೆ.

ಪ್ರತಿಕೃತಿಗಳು ಪ್ರಮುಖ ಆಕರ್ಷಣೆ: ಮದವೇರಿದ ಒಂಟಿ ಸಲಗ ಘೀಳಿಟ್ಟು ಸಫಾರಿ ವಾಹನದತ್ತ ಮುನ್ನುಗ್ಗುತ್ತಿರುವುದು ಆತಂಕ ಹುಟ್ಟಿಸಿದರೆ, ಘರ್ಜಿಸುತ್ತಿರುವ ಹುಲಿ ನೋಡುಗರನ್ನು ನಿಬ್ಬೆರೆರಗು ಗೊಳಿಸುತ್ತದೆ. ಇದರ ಜೊತೆಗೆ ಸೌಮ್ಯ ಸ್ವಭಾವದ ಜಿಂಕೆಗಳು, ಕಾಡು ಹಂದಿ, ಕಾಡೆಮ್ಮೆಗಳ ಪ್ರತಿಕೃತಿಗಳು ಪ್ರಮುಖ ಆಕರ್ಷಣೆಯಾಗಿದೆ.

ಕಪ್ಪುಚಿರತೆ ಆಕರ್ಷಣೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಬಿನಿ ವ್ಯಾಪ್ತಿಯಲ್ಲಿ ಆಗಾಗ ದರ್ಶನ ನೀಡುವ ಕಪ್ಪು ಚಿರತೆಯ ಪ್ರತಿಕೃತಿ ನಿರ್ಮಿಸಿದ್ದು, ಇದು ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದೆ. ಮಳಿಗೆಗೆ ಭೇಟಿ ನೀಡುವ ಪ್ರವಾಸಿಗರು ಕಪ್ಪುಚಿರತೆ ಕಂಡು ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿರುವುದು ವಿಶೇಷವಾಗಿದೆ. ಜೊತೆಗೆ ಮಳಿಗೆಯಲ್ಲಿ ಕಾಡು ಪ್ರಾಣಿಗಳು, ಪಕ್ಷಿಗಳು, ನಾನಾ ಬಗೆಯ ಸಸ್ಯಗಳ ಕುರಿತು ಮಾಹಿತಿ ನೀಡಲಾಗಿದೆ.

ಅಲ್ಲಿ ಜಿಂಕೆ, ಆನೆ, ಹಾವು, ಕಾಳಿಂಗಸರ್ಪ, ಹುಲಿ, ಚಿರತೆ, ನರಿ, ಕೋತಿ, ಬಿದುರು ಮೇಲಿನ ಚದುರೆ, ಮುಳ್ಳುಹಂದಿ ಸೇರಿ ಅನೇಕ ಕಾಡುಪ್ರಾಣಿಗಳ ಪ್ರತಿಕೃತಿಗಳನ್ನು ಮರಗಳ ಮಧ್ಯೆ ನಿರ್ಮಿಸಲಾಗಿದೆ. ಇವುಗಳ ಜತೆಗೆ ಕಾಡಿನಲ್ಲಿ ಜರಿ-ತೊರೆ, ಗುಹೆಗಳನ್ನು ನಿರ್ಮಿಸಿರುವುದು ನೋಡುಗರಿಗೆ ಮುದ ನೀಡಲಿದೆ.

ಪ್ರಾಣಿ ಪಕ್ಷಿಗಳ ಕಲರವ: ವಸ್ತು ಪ್ರದರ್ಶನ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಾಗಿ ಸಂಜೆ ವೇಳೆ ಭೇಟಿ ನೀಡುತ್ತಾರೆ. ಆದ್ದರಿಂದ ಅರಣ್ಯ ಇಲಾಖೆ ಮಳಿಗೆಯ ಒಳಗೆ ವಿದ್ಯುತ್‌ ಬೆಳಕಿನ ವ್ಯವಸ್ಥೆ ಮಾಡಿದೆ. ಪ್ರತಿ ಪ್ರಾಣಿಗಳ ಬಳಿಯೂ ಬಣ್ಣ ಬಣ್ಣ ಲೈಟ್‌ ಅಳವಡಿಸಲಾಗಿದೆ. ಎಲ್ಲಾ ಪ್ರಾಣಿಗಳ ಪ್ರತಿಕೃತಿಗಳ ಬಳಿಯೂ ಆಯಾಯಾ ಪ್ರಾಣಿಗಳ ಘರ್ಜನೆಯ ಶಬ್ಧ ಹೊರ ಬರುವ ರೀತಿ ಮಾಡಲಾಗಿದೆ. ಹುಲಿಯ ಘರ್ಜನೆ, ಆನೆಯ ಘೀಳು, ಕೂತಿಗಳ ಕೂಗಾಟ, ಹಕ್ಕಿಗಳ ಚಿಲಿಪಿಲಿ ಸದ್ದು ವಿಶೇಷ ಅನುಭವ ನೀಡಲಿದೆ.

ಗಮನ ಸೆಳೆಯುತ್ತಿದೆ ಹಾಡಿ: ಮಳಿಗೆಯಲ್ಲಿ ಕಾಡು ಪ್ರಾಣಿ ಪಕ್ಷಿಗಳ ಪ್ರತಿಕೃತಿ ಜತೆಗೆ ಆದಿವಾಸಿಗಳ ಹಾಡಿಯ ಪ್ರತಿಕೃತಿ ವಿಶೇಷ ಆಕರ್ಷಣೆಯಾಗಿದೆ. ಹತ್ತಾರು ಆದಿವಾಸಿಗಳ ಗುಡಿಸಲು, ಗುಡಿಸಲು ಮುಂದೆ ಮತ್ತು ಒಳಗೆ ಬುಡಕಟ್ಟು ಜನರ ಪ್ರತಿಕೃತಿ, ಅವರು ಬಳಸುವ ವಸ್ತುಗಳು ಸೇರಿ ಜೀವನ ಕ್ರಮವನ್ನು ಚಿತ್ರಿಸಲಾಗಿದೆ.

ಫಾರೆಸ್ಟ್‌ ಗಾರ್ಡ್‌, ವಾಚರ್‌ ಕಣ್ಗಾವಲು: ಮಳಿಗೆಯಲ್ಲಿ ಅರಣ್ಯ ಇಲಾಖೆಯನ್ನು ಹಗಲಿರುಳು ಕಣ್ಣಲ್ಲಿ ಕಣ್ಣಿಟ್ಟು ಕಾಯುವ ಕಾಡಿನ ವಾಚರ್‌, ಗಾರ್ಡ್ ಗಳ ಪ್ರತಿಕೃತಿಗಳನ್ನು ನಿರ್ಮಿಸಲಾಗಿದ್ದು, ಮರಗಳವು, ಪ್ರಾಣಿಗಳ ಬೇಟೆಯನ್ನು ತಡೆಯುತ್ತಿರುವ ದೃಶ್ಯವನ್ನು ಚಿತ್ರಿಸಲಾಗಿದೆ. ಈ ಮೂಲಕ ಕಾಡು ಮತ್ತು ಪ್ರಾಣಿಗಳ ರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಶ್ರಮವನ್ನು ಮಳಿಗೆಯಲ್ಲಿ ತಿಳಿಸಿಕೊಡಲಾಗುತ್ತಿದೆ.

ಅರಣ್ಯ ಸಂರಕ್ಷಣೆ ಬಗೆಗೆ ಅರಿವು: ಮಾನವ ಮತ್ತು ವನ್ಯಜೀವಿ ಸಂಘರ್ಷ ತಗ್ಗಿಸಲು ಅರಣ್ಯ ಇಲಾಖೆ ಕೈಗೊಂಡಿರುವ ಕ್ರಮಗಳು, ಕಾಡಿನೊಳಗಿನ ರಸ್ತೆಯಲ್ಲಿ ಸಂಚಾರ ನಿಯಮಗಳು, ಕಾಡನ್ನು ಬೆಂಕಿಯಿಂದ ರಕ್ಷಿಸುವ ಪರಿ ಏನು, ಕಾಡು ಪ್ರಾಣಿಗಳ ರಕ್ಷಣೆ ಬಗ್ಗೆ, ವನ್ಯಜೀವಿ ಸಂರಕ್ಷಣಾ ಕಾಯೆ-1972ರ ನಿಯಮ ಸೇರಿ ಅನೇಕ ಮಾಹಿತಿಯನ್ನು ಫ‌ಲಕಗಳ ಮೂಲಕ ಪ್ರದರ್ಶಿಸಲಾಗಿದೆ. ದೇಶದಲ್ಲಿ ಅಭಿವೃದ್ಧಿ ಮತ್ತು ಕಾಡು ಸಂರಕ್ಷಣೆ ಎರಡೂ ಒಟ್ಟಿಗೆ ನಡೆಯಬೇಕು ಎಂದು ಸಂದೇಶವನ್ನು ಅರಣ್ಯ ಇಲಾಖೆ ಮಳಿಗೆಯಲ್ಲಿ ಸಾರಲಾಗುತ್ತಿದೆ.

ಕಾಡಿನೊಳಗಿನ ರಸ್ತೆಯಲ್ಲಿ ವಾಹನ ಚಾಲನೆ ಮಾಡುವಾಗ ನಿಧಾನವಾಗಿ ಹಾಗೂ ಜಾಗರೂಕತೆ ಯಿಂದ ಚಾಲನೆ ಮಾಡುವಂತೆ ಅರಿವು ಮೂಡಿ ಸಲಾಗಿದೆ. ಕಾಡಿನಲ್ಲಿ ಹೇಗೆ ನಡೆದುಕೊಳ್ಳಬೇಕು, ಕಾಡಿನಲ್ಲಿ ಬೆಂಕಿ ನೋಡಿದ ತಕ್ಷಣ ಏನು ಮಾಡಬೇಕು ಎಂದು ತಿಳಿಸಲಾಗಿದೆ. ವನ್ಯ ಪ್ರಾಣಿ ಗಳನ್ನು ಬೇಟೆ ಯಾಡುವುದು, ಫೆನ್ಸಿಂಗ್‌ಗೆ ವಿದ್ಯುತ್‌ ಸಂಪರ್ಕ ನೀಡಿದರೆ ಏನೆಲ್ಲ ಶಿಕ್ಷೆ ಎದುರಿಸಬೇಕು  ಎಂದು ತಿಳಿಸಲಾಗಿದೆ. ರೈಲು ಕಂಬಿಗಳ ಬೇಲಿ, ಲಂಟಾನಾ, ಯುಪ ಟೋರಿಯಂ ಕಳೆಗಳ ನಿರ್ಮಲನೆಗೆ ಕ್ರಮ, ಸೋಲಾರ್‌ ಬೋರ್‌ವೆಲ್‌ಗ‌ಳು, ವಿಶೇಷವಾಗಿ ಭಾರತದಲ್ಲಿ ಕಂಡು ಬರುವ ಮಂಗಟ್ಟೆ ಹಕ್ಕಿ ಬಗ್ಗೆ ವಿವಿರವಾಗಿ ತಿಳಿಸಲಾಗಿದೆ.

ಹುಲಿ ಯೋಜನೆ ಬಗ್ಗೆ, ಹುಲಿಗಳನ್ನು ಏಕೆ ಸಂರಕ್ಷಿಸಬೇಕು ಎಂಬ ವಿಷಯಗಳನ್ನು ವಿವರವಾಗಿ ತಿಳಿಸಲಾಗಿದೆ. ಒಟ್ಟಾರೆ ವಸ್ತುಪ್ರದರ್ಶನಲ್ಲಿ ಅತಿಹೆಚ್ಚು ಜನರನ್ನು ಆಕರ್ಷಿಸುವ ಮಳಿಗೆ ಇದಾಗಿದ್ದು, ನಿತ್ಯ ಸಾವಿರಕ್ಕೂ ಹೆಚ್ಚು ಜನರು ಭೇಟಿ ನೀಡಿ ವನ್ಯಜೀವಿ ಮತ್ತು ಅರಣ್ಯ ಸಂರಕ್ಷಣೆ ಬಗ್ಗೆ ಮಾಹಿತಿ ಪಡೆಯುತ್ತಿರುವುದು ವಿಶೇಷ.

ಅರಣ್ಯ ಇಲಾಖೆಯಿಂದ ಈ ಬಾರಿ ವಸ್ತು ಪ್ರದರ್ಶನದಲ್ಲಿ ಕಾಡು ಪ್ರಾಣಿಗಳು, ಅರಣ್ಯ ಸಂಪತ್ತಿನ ರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿಶೇಷ ರೀತಿಯಲ್ಲಿ ಮಳಿಗೆ ಆರಂಭಿಸಲಾಗಿದೆ. ಮಳಿಗೆಯನ್ನು ಶೀಘ್ರದಲ್ಲೆ ಅಧಿಕೃತವಾಗಿ ಉದ್ಘಾಟಿಸಲಾಗುತ್ತದೆ. ಮಳಿಗೆಗೆ ಭೇಟಿ ನೀಡುವ ಸಾರ್ವಜನಿಕರಿಗೆ ಅರಣ್ಯ ಇಲಾಖೆ ಎಲ್ಲ ಯೋಜನೆಗಳನ್ನು ತಿಳಿಸುವ ಕೆಲಸ ಮಾಡಲಾಗುತ್ತದೆ.
● ಕಮಲಾ ಕರಿಕಾಳನ್‌, ಡಿಸಿಎಫ್.

ಸತೀಶ್‌ ದೇಪುರ

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.