ಜೆಡಿಎಸ್ ಬಿಟ್ಟು ಹೋಗುವುದಿಲ್ಲ; ಎಚ್ ಡಿಡಿ ಸಮ್ಮುಖದಲ್ಲಿ ಜಿ.ಟಿ.ದೇವೇಗೌಡ ಘೋಷಣೆ


Team Udayavani, Oct 20, 2022, 4:34 PM IST

ಜೆಡಿಎಸ್ ಬಿಟ್ಟು ಹೋಗುವುದಿಲ್ಲ; ಎಚ್ ಡಿಡಿ ಸಮ್ಮುಖದಲ್ಲಿ ಜಿ.ಟಿ.ದೇವೇಗೌಡ ಘೋಷಣೆ

ಮೈಸೂರು: ಮಾಜಿ ಪ್ರಧಾನ ಮಂತ್ರಿಗಳಾದ ಎಚ್.ಡಿ.ದೇವೇಗೌಡರು ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮನೆಗೆ ಭೇಟಿ ನೀಡಿದರು. ಈ ವೇಳೆ ಭಾವುಕ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ತೊರೆದು ಹೋಗುವುದಿಲ್ಲ ಎಂದು ಜಿಟಿ ದೇವೇಗೌಡರು ಘೋಷಿಸಿದರು.

ಇಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡರ ಮಾಜಿ ಪ್ರಧಾನಿ ಎಚ್ ಡಿಡಿ, ಜಿಟಿ ದೇವೇಗೌಡರು, ಮತ್ತವರ ಕುಟುಂಬ ಸದಸ್ಯರ ಜತೆ ಕುಶಲೋಪರಿ ನಡೆಸಿದರು.

ಈ ಸಂದರ್ಭದಲ್ಲಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ಜಿಟಿ ದೇವೇಗೌಡರು, ಕಣ್ಣೀರಿಟ್ಟರು. ಜಿಟಿ ದೇವೇಗೌಡರನ್ನು ಪಕ್ಕದಲ್ಲೇ ಕೂರಿಸಿಕೊಂಡು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಎಚ್ ಡಿಡಿ, ಜಿ.ಟಿ.ದೇವೇಗೌಡರನ್ನು ಮರಿ ದೇವೇಗೌಡ ಎಂದು ಕರೆಯುತ್ತೇನೆ. ನಾನು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದೇನೆ. ಸಾ.ರಾ.ಮಹೇಶ್ ಬರುವ ಮೊದಲು ಜಿ.ಟಿ‌.ದೇವೇಗೌಡರ ನಮ್ಮ ಜತೆಯಲ್ಲಿ ಇದ್ದರು. ಜಿಟಿಡಿ ಬೆಳೆಯಲು ಬಿಡಬಾರದು ಎಂದು ಎಂಪಿ ಚುನಾವಣೆಯಲ್ಲಿ ಸೋಲಿಸಿದರು. ಹಾಗೆ ಸೋಲಿಗೆ ಕಾರಣರಾದವರು ಈಗ ನಮ್ಮ ಜತೆಯಲ್ಲಿ ಇಲ್ಲ ಎಂದು ಮಾಜಿ ಪ್ರಧಾನಿಗಳು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಚಾಟಿ ಬೀಸಿದರು.

ಜಿಟಿಡಿ ಬೆಳೆಯಲು ಬಿಟ್ಟರೆ ಆಕ್ರಮಣ ಮಾಡಿಕೊಳ್ಳುತ್ತಾರೆ ಎಂದು ಭಾವಿಸಿ ಅವರ ಬೆಳವಣಿಗೆಯನ್ನು ತಡೆಯಲು ಪ್ರಯತ್ನ ಮಾಡಿದರು. ಎಲ್ಲವನ್ನೂ ತಿಳಿದುಕೊಂಡೆ ಜಿಟಿಡಿ ಮನೆಗೆ ಬಂದಿದ್ದೇನೆ. ಇವತ್ತು ನನಗೆ ಸಂತೋಷವಾಗಿದೆ. ಒಗ್ಗಟ್ಟಾಗಿ ಇರಬೇಕು. ಸಮಯ ಬಂದಿದೆ, ಎಲ್ಲಾ ಒಗ್ಗಟ್ಟಾಗಿ ಸೇರಿದ್ದೇವೆ, ತುಂಬಾ ಸಂತೋಷದ ವಿಷಯ ಇದು ಎಂದರು.

ಪಾರ್ಲಿಮೆಂಟ್ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎದುರಾಳಿಯನ್ನು ಎದುರಿಸುವ ಶಕ್ತಿ ಇದೆ. ಆ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಅವರು ಮಾರ್ಮಿಕವಾಗಿ ಹೇಳಿದರು.

ಬಳಿಕ ಮಾತನಾಡಿದ ಜಿಟಿ ದೇವೇಗೌಡ ಅವರು, ಎಚ್‌.ಡಿ.ದೇವೇಗೌಡರಿಗೆ ನನ್ನ ಬಗ್ಗೆ ಪ್ರೀತಿ ಇದೆ, ಮರಿ ದೇವೇಗೌಡ ಎಂದು ನನ್ನನ್ನು ಕರೆಯುತ್ತಿದ್ದರು. ಜಿಟಿಡಿ ಬಿಟ್ಟು ಹೋಗಲ್ಲ ಜೆಡಿಎಸ್ ಪಕ್ಷದಲ್ಲೆ ಇರುತ್ತಾನೆ ಎಂದು ಹೆಚ್.ಡಿ.ದೇವೇಗೌಡರು ಹೇಳಿದರು. ಅವರಿಗೆ ನನ್ನ ಮೇಲೆ ಇರುವ ವಿಶ್ವಾಸಕ್ಕೆ ಮನಸ್ಸು ತುಂಬಿ ಬಂದಿದೆ. ಹಿಂದೆ ಹಲವು ಸ್ಥಾನಮಾನವನ್ನು ಮಾಜಿ ಪ್ರಧಾನಿಗಳು ನನಗೆ ನೀಡಿದ್ದರು. ಮೂರು ವರ್ಷ ದೂರ ಇದ್ದರೂ ನನ್ನ ಬಗ್ಗೆ ಅವರಲ್ಲಿನ ಪ್ರೀತಿ ಕಡಿಮೆ ಆಗಿರಲಿಲ್ಲ. ಎಂದೂ ನನ್ನ ಬಗ್ಗೆ ಲಘುವಾಗಿ ಒಂದು ಮಾತನ್ನೂ ಆಡಲಿಲ್ಲ. ಅವರು, ಪ್ರಾದೇಶಿಕ ಪಕ್ಷ ಕಟ್ಟಿ ಉಳಿಸಿ ಬೆಳೆಸಿದರು. ಎಚ್.ಡಿ.ದೇವೇಗೌಡರು ಕಂಡ ಕನಸನ್ನು ನನಸು ಮಾಡುತ್ತೇನೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು ಮಾತನಾಡುತ್ತಲೇ ಭಾವುಕರಾದ ಜಿಟಿ ದೇವೇಗೌಡರು ಬಿಕ್ಕಿಬಿಕ್ಕಿ ಕಣ್ಣೀರಿಟ್ಟರು.

ಇದನ್ನೂ ಓದಿ:ದೆಹಲಿ ಪಟಾಕಿ ನಿಷೇಧ ಆದೇಶ ರದ್ದುಗೊಳಿಸಲು ಸುಪ್ರೀಂ ನಕಾರ; ಹಣ ಸಿಹಿ ತಿಂಡಿಗೆ ಉಪಯೋಗಿಸಿ…

ದೊಡ್ಡವರು ನನ್ನನ್ನು ಪ್ರೀತಿಯ ಹಗ್ಗದಿಂದ ಕಟ್ಟಿ ಹಾಕಿದ್ದಾರೆ. ನಾನು ಜೆಡಿಎಸ್ ನಲ್ಲಿ ಉಳಿಯುತ್ತೇನೆ. ಯಾವುದೇ ತ್ಯಾಗ ಮಾಡಲು ಸಿದ್ದ ಇದ್ದೇನೆ, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇನೆ. ಅದಕ್ಕಾಗಿ ದುಡಿಯುತ್ತೇನೆ. ಈಗ ನಮ್ಮಲ್ಲಿ ಯಾವುದೇ ಮುನಿಸು ಇಲ್ಲ, ಒಂದೇ ಒಂದು ದಿನ ಪಕ್ಷಕ್ಕೆ ಕಳಂಕ ಅಥವಾ ಧಕ್ಕೆ ತರುವ ಕೆಲಸ ಮಾಡಿಲ್ಲ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸೇರುವಂತೆ ಕರೆದಿದ್ದರು. ಬಿಜೆಪಿಯವರೂ ಕರೆದಿದ್ದಾರೆ. ಆದರೆ ನಾನು ಜೆಡಿಎಸ್ ಬಿಟ್ಟು ಹೋಗಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಸಾ.ರಾ.ಮಹೇಶ್, ಸಿ ಎಸ್ ಪುಟ್ಟರಾಜು  ಸೇರಿದಂತೆ ಪಕ್ಷದ ಶಾಸಕರು, ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.