ಸಾಮಾಜಿಕ ನ್ಯಾಯಕ್ಕಾಗಿ ಮೀಸಲಾತಿ ವ್ಯವಸ್ಥೆ ಕಲ್ಪಿಸಿದ್ದ ಒಡೆಯರ್‌


Team Udayavani, Jun 4, 2018, 2:31 PM IST

m6-samajika.jpg

ಮೈಸೂರು: ರಾಜ ಪ್ರಭುತ್ವದಲ್ಲೇ ಪ್ರಜಾಪ್ರಭುತ್ವದ ಕನಸು ಕಂಡು ಜನಸಾಮಾನ್ಯರಿಗೆ ಮತದಾನದ ಹಕ್ಕು ನೀಡಿ ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಸಲ್ಲುತ್ತದೆ ಎಂದು ಲೇಖಕ ಬನ್ನೂರು ಕೆ.ರಾಜು ಹೇಳಿದರು.

ನಗರದ ಅರಮನೆ ದ್ವಾರದಲ್ಲಿ ಕರ್ನಾಟಕ ಸೇನಾ ಪಡೆ ವತಿಯಿಂದ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ 134ನೇ ಜಯಂತಿ ಕಾರ್ಯಕ್ರಮದಲ್ಲಿ ನಾಲ್ವಡಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಮೈಸೂರು ಸಂಸ್ಥಾನದ ಮಹಾರಾಜರಲ್ಲಿ ಅಭಿವೃದ್ಧಿಯ ಹರಿಕಾರರು. ನಾಲ್ವಡಿ ಕೃಷ್ಣರಾಜ ಒಡೆಯರ್‌, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಶಿಕ್ಷಣವನ್ನು ನೀಡಿದವರು. ಸಾಮಾಜಿಕ ನ್ಯಾಯಕ್ಕಾಗಿ ಮೀಸಲು ವ್ಯವಸ್ಥೆಯನ್ನು ಅಂದೇ ಕಲ್ಪಿಸಿದ್ದರು ಎಂದು ಸ್ಮರಿಸಿದರು. 

ಕೈಗಾರಿಕೆಗಳ ಸ್ಥಾಪನೆ: ಕನ್ನಂಬಾಡಿ ಕಟ್ಟೆ ನಿರ್ಮಾಣ, ಶಿವನ ಸಮುದ್ರ ಜಲ ವಿದ್ಯುತ್‌ ಯೋಜನೆ, ರೇಷ್ಮೆ ನೇಯ್ಗೆ ಕಾರ್ಖಾನೆ, ಶ್ರೀಗಂಧದ ಎಣ್ಣೆ ಕಾರ್ಖಾನೆ ಸೇರಿದಂತೆ ಅನೇಕ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದವರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮೊದಲಿಗರು ಎಂದು ಬಣ್ಣಿಸಿದರು. 

ಮಾದರಿ ಆಡಳಿತ: ದಲಿತರು, ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡಿದ ನಾಲ್ವಡಿ ಒಡೆಯರ್‌, ಮೀಸಲಾತಿಯನ್ನು ಜಾರಿಗೆ ತಂದು ಹಿಂದುಳಿದವರ ಅಭಿವೃದ್ಧಿಗೆ ಶ್ರಮಿಸಿದರು. ವೇಶ್ಯಾವಾಟಿಕೆ, ಬಾಲ್ಯವಿವಾಹದಂತಹ ಸಾಮಾಜಿಕ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಿ ಉತ್ತಮ ಆಡಳಿತ ವ್ಯವಸ್ಥೆ ಜಾರಿಗೆ ತಂದರು.

ದೇಶದ ಇತರೆ ಸಂಸ್ಥಾನಗಳ ರಾಜರಿಗೆ ಮಾದರಿಯಾಗಿ ಆಡಳಿತ ವ್ಯವಸ್ಥೆ ರೂಪಿಸಿದ್ದರು. ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿಯನ್ನು ಸರ್ಕಾರವೇ ಆಚರಿಸುವಂತಾಗಬೇಕು. ಅವರ ಉನ್ನತ ವ್ಯಕ್ತಿತ್ವ, ಆಡಳಿತ ಹಾಗೂ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವಾಗಬೇಕಿದೆ ಎಂದರು.

ದೂರದೃಷ್ಟಿ ಫ‌ಲ: ಸಮಾಜ ಸೇವಕ ಡಾ.ರಘುರಾಂ ವಾಜಪೇಯಿ ಮಾತನಾಡಿ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ದೂರದೃಷ್ಟಿತ್ವ ಚಿಂತನೆ ಇಂದಿನ ಜನರಲ್ಲಿ ಕಂಡು ಬರುವುದಿಲ್ಲ. ನೂರು ವರ್ಷಗಳ ಹಿಂದೆ ಮಾಡಿದ ದೂರದೃಷ್ಟಿ ಫ‌ಲವಾಗಿ ಮೈಸೂರು ಇಂದು ಜಗದ್ವಿಖ್ಯಾತಿ ಗಳಿಸಿದೆ. ಅದನ್ನು ಉಳಿಸಿ-ಬೆಳೆಸಿಕೊಂಡು ಹೋಗುವ ಕೆಲಸ ಆಗಬೇಕಿದೆ ಎಂದರು.

ಕಾರ್ಯಕ್ರಮದ ಬಳಿಕ ಮೈಸೂರು ಅರಮನೆಗೆ ಭೇಟಿ ನೀಡಿದ ಪ್ರವಾಸಿಗರಿಗೆ ಸಿಹಿ ವಿತರಿಸಲಾಯಿತು. ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್‌ ಲೋಕೇಶ್‌ಗೌಡ, ಶಾಂತಮೂರ್ತಿ, ಎಂ.ಎನ್‌.ದೊರೆಸ್ವಾಮಿ, ಆರ್‌.ಪ್ರಜೀಶ್‌, ಮನುನಾಯಕ್‌, ಸುನೀಲ್‌ ಕುಮಾರ್‌, ಹರೀಶ್‌ ಅಂಕಿತ್‌, ಶಾಂತರಾಜೇ ಅರಸ್‌, ಅಕ್ಷಯ್‌, ಜಯೇಂದ್ರ, ರಾಜಶೇಖರ್‌, ಬಸವಣ್ಣ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.