ಎಂ.ಟಿ.ಬಿ.ನಾಗರಾಜ್‌ ಕ್ಷಮೆಗೆ ಮಹಿಳಾ ಕಾಂಗ್ರೆಸ್‌ ಆಗ್ರಹ


Team Udayavani, Nov 24, 2019, 3:00 AM IST

mtb-naga

ಮೈಸೂರು: ಹೊಸಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪದ್ಮಾವತಿ ಸುರೇಶ್‌ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿರುವ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್‌ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಹೆಣ್ಣು ಮಕ್ಕಳು ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಂ.ಟಿ.ಬಿ.ನಾಗರಾಜ್‌ಗೆ ಹೆಣ್ಣು ಮಗಳು ಎದುರಾಳಿಯಾಗಿರುವುದು ಭಯ ಮೂಡಿಸಿರಬಹುದು. ಅದಕ್ಕಾಗಿ ಪದ್ಮಾವತಿ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ಮಹಿಳಾ ಅಭ್ಯರ್ಥಿ ನನಗ್ಯಾವ ಲೆಕ್ಕ ಎಂಬ ಎಂಟಿಬಿ ಹೇಳಿಕೆ ಖಂಡನೀಯ. ಹೆಣ್ಣು ಮಕ್ಕಳು ಅಡುಗೆ ಮನೆ, ಮಕ್ಕಳನ್ನು ನೋಡಿಕೊಂಡು, ಮನೆಯ ಕಸ ಮುಸುರೆ ಎತ್ತಲು ಸೀಮಿತ ಎನಿಸಿರಬಹುದು ಎಂದರು.

ಸಮಾಜದಲ್ಲಿ ಶೇ.50 ಮಹಿಳೆಯರಿದ್ದು, ನಾವೂ ದೇಶವನ್ನು ಮುನ್ನಡೆಸುತ್ತಾ ಬಂದಿದ್ದೇವೆ. ತೊಟ್ಟಿಲು ತೂಗುವ ಕೈ ದೇಶವನ್ನೂ ಆಳಬಲ್ಲದು ಎಂಬುದನ್ನು ಇಂದಿರಾಗಾಂಧಿ ತೋರಿಸಿದ್ದಾರೆ. ಜಯಲಲಿತಾ, ಶೀಲಾ ದೀಕ್ಷಿತ್‌, ಮಾಯಾವತಿ ಅವರು ರಾಜ್ಯ ಆಳಲಿಲ್ವಾ. ಬಿಜೆಪಿಯ ನಿರ್ಮಲಾ ಸೀತಾರಾಮನ್‌ ಹೆಣ್ಣು ಮಗಳಲ್ವಾ. ಮೋದಿ ಸರ್ಕಾರದಲ್ಲಿ ಹಿಂದಿನ ಅವಧಿಯಲ್ಲಿ ರಕ್ಷಣಾ ಇಲಾಖೆ, ಈಗ ಹಣಕಾಸು ಖಾತೆಯ ಜವಾಬ್ದಾರಿ ಕೊಟ್ಟಿಲ್ಲವೇ.

ನಿಮ್ಮದೇ ಪಕ್ಷದಲ್ಲಿ ಹೆಣ್ಣು ಮಗಳಿಗೆ ಅಧಿಕಾರ ಕೊಟ್ಟು ಆಕೆಯನ್ನು ಅಪಮಾನಿಸುತ್ತಿದ್ದೀರಾ. ಬಿಜೆಪಿಯಲ್ಲಿ ಹೆಣ್ಣು ಮಕ್ಕಳು ಶಾಸಕರು, ಮಂತ್ರಿ ಆಗಿರಲಿಲ್ಲವೇ? ಮಂಡ್ಯದ ಸ್ವಾಭಿಮಾನಿ ಜನ ಹೆಣ್ಣು ಮಗಳು ಸುಮಲತಾ ಅವರ ಕೈ ಹಿಡಿಯಲಿಲ್ಲವೇ ಎಂದ ಅವರು, ಮೋದಿ ಅವರ ಬೇಟಿ ಬಚಾವೋ-ಬೇಟಿ ಪಡಾವೋ ಘೋಷಣೆಗೆ ನಿಮ್ಮ ಹೇಳಿಕೆ ಅಪಮಾನ ಮಾಡಿದಂತಲ್ಲವೇ ಎಂದು ಪ್ರಶ್ನಿಸಿದರು. ಸಂವಿಧಾನ, ಮಹಿಳಾ ವಿರೋಧಿ ಬೇಜವಾಬ್ದಾರಿ ಹೇಳಿಕೆಯನ್ನು ಎಂಟಿಬಿ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಜನ ತೀರ್ಪು ಕೊಡ್ತಾರೆ: ಉಪ ಚುನಾವಣೆಯಲ್ಲಿ ಅನರ್ಹರು ಬೇಕಾ. ಸ್ವಾಭಿಮಾನಿಗಳು ಬೇಕಾ ಎಂಬುದನ್ನು ಕ್ಷೇತ್ರದ ಜನ ತೀರ್ಮಾನ ಮಾಡುತ್ತಾರೆ. ಅನರ್ಹತೆ, ಜನತಾ ನ್ಯಾಯಾಲಯ ಎತ್ತಿಹಿಡಿಯುತ್ತೆ ಎಂಬ ವಿಶ್ವಾಸವಿದೆ ಎಂದರು. ಆಡಳಿತ ಪಕ್ಷದವರು ಅಧಿಕಾರಿ ವರ್ಗವನ್ನು ಕೈಗೊಂಬೆ ಮಾಡಿಕೊಂಡು ಉಪ ಚುನಾವಣೆ ನಡೆಸುತ್ತಿದ್ದಾರೆ. ಇಷ್ಟು ವರ್ಷದಿಂದ ರಾಜಕೀಯದಲ್ಲಿರುವ ಎಚ್‌.ವಿಶ್ವನಾಥ್‌, ಉಪ ಚುನಾವಣೆ ವೇಳೆ ಹುಣಸೂರನ್ನು ಹೊಸ ಜಿಲ್ಲೆ ಮಾಡುವ ಬಗ್ಗೆ ಮಾತನಾಡುತ್ತಾರೆ.

ಒಂದೂವರೆ ವರ್ಷ ಶಾಸಕರಾಗಿ ಕ್ಷೇತ್ರದತ್ತ ತಿರುಗಿ ನೋಡದವರ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಅವರ ಹೇಳಿಕೆಗಳಿಗೆ ಹೆಚ್ಚಿನ ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು. ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ಲತಾ, ನಗರ ಉಪಾಧ್ಯಕ್ಷೆ ಸುಜಾತಾರಾವ್‌, ರಾಣಿ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.