ಸೇತುವೆಯಿಂದ ನದಿಗೆ ಹಾರಿದ ಯುವತಿಯ ರಕ್ಷಣೆ: ವಿಡಿಯೋ ವೈರಲ್
Team Udayavani, Nov 7, 2021, 10:33 AM IST
ಮೈಸೂರು: ಸೇತುವೆಯಿಂದ ನದಿಗೆ ಹಾರಿದ ಯುವತಿಯೊಬ್ಬರನ್ನು ರಕ್ಷಣೆ ಮಾಡಿದ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಹೆಮ್ಮಿಗೆ ಸೇತುವೆ ಬಳಿ ನಡೆದಿದೆ.
ಯುವತಿಯು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವತಿ ನದಿಗೆ ಹಾರಿದ್ದನ್ನು ಕಂಡ ಸ್ಥಳೀಯ ದೋಣಿ ಸವಾರರು ಕೂಡಲೇ ಧಾವಿಸಿ ರಕ್ಷಿಸಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಇದನ್ನೂ ಓದಿ:ಕಡೂರು ಮೂಲದ ಯೋಧ ಜಮ್ಮುವಿನಲ್ಲಿ ನಿಧನ
ಯುವತಿಯನ್ನು ತೆಪ್ಪದಲ್ಲಿ ಹಾಕಿಕೊಂಡು ದಡ ಸೇರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೋಣಿ ಸವಾರರ ಸಮಯಪ್ರಜ್ಞೆಗೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.