ಯದುವೀರ್ ಒಡೆಯರ್ ಪ್ರವಾಸೋದ್ಯಮ ರಾಯಭಾರಿ
Team Udayavani, Sep 25, 2018, 6:55 AM IST
ಮೈಸೂರು: ಜಿಲ್ಲೆಯ ಪ್ರವಾಸೋದ್ಯಮ ರಾಯಭಾರಿಯಾಗಲು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒಪ್ಪಿಗೆ ಸೂಚಿಸಿದ್ದಾರೆ.
ಇತ್ತೀಚೆಗೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಅರಮನೆಗೆ ಭೇಟಿ ನೀಡಿ ಪ್ರವಾಸೋದ್ಯಮದ ಉತ್ತೇಜನ ದೃಷ್ಟಿಯಿಂದ ಮೈಸೂರು ಭಾಗದಲ್ಲಿ ಪ್ರವಾಸೋದ್ಯಮ ರಾಯಭಾರಿಯಾಗುವಂತೆ ಯದುವೀರ್ ಅವರಿಗೆ ಮನವಿ ಮಾಡಿದ್ದರು. ಈ ಸಂಬಂಧ ಸೋಮವಾರ ಸಚಿವ ಸಾ.ರಾ. ಮಹೇಶ್ ಅವರಿಗೆ ಪತ್ರ ಬರೆದಿರುವ ಯದುವೀರ್ ಅವರು, ಮೈಸೂರು ಜಿಲ್ಲೆಯ ಪ್ರವಾಸೋದ್ಯಮ ರಾಯಭಾರಿಯಾಗುವಂತೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಕೃತಜ್ಞತೆ. ನನ್ನ ನಗರಕ್ಕೆ ಸೇವೆ ಸಲ್ಲಿಸುವ ಹಾಗೂ ಮೈಸೂರು ನಗರವನ್ನು ದಕ್ಷಿಣ ಭಾರತದ ಪ್ರವಾಸೋದ್ಯಮ ಕೇಂದ್ರವಾಗಿ ಮಾಡುವ ಕಾರ್ಯದಲ್ಲಿ ಪಾಲ್ಗೊಳ್ಳುವ ಅವಕಾಶ ನನಗೆ ದೊರೆತಿರುವುದು ಸಂತೋಷದ ವಿಷಯ ಎಂದಿದ್ದಾರೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ಭಾಗದ ಮೈಸೂರು, ಚಾಮರಾಜ ನಗರ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗೆ ಪ್ರವಾಸೋದ್ಯಮ ರಾಯಭಾರಿಯಾಗಲು ಹಾಗೂ ಈ ಮೂಲಕ ಮೈಸೂರು ಭಾಗವನ್ನು ದಕ್ಷಿಣ ಭಾರತದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವ ಕಾರ್ಯದಲ್ಲಿ ಪಾಲ್ಗೊಳ್ಳುವ ನಿರ್ಧಾರಕ್ಕೆ ಸಚಿವ ಸಾ.ರಾ.ಮಹೇಶ್ ಅವರು ಅಭಿನಂದನೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…