ಯಡಿಯೂರಪ್ಪ ಒಬ್ಬ ಅಸಮರ್ಥ ಮುಖ್ಯಮಂತ್ರಿ; ಈ ಹಿಂದೆಯೂ ಸಮರ್ಥವಾಗಿರಲಿಲ್ಲ: ಸಿದ್ದು ಆಕ್ರೋಶ


Team Udayavani, Dec 3, 2020, 7:01 PM IST

siddu

ಮೈಸೂರು: ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಶುಭವಾಗಲಿ, ಅವರ ಭವಿಷ್ಯ ಉಜ್ವಲವಾಗಲಿ. ರಜನಿಕಾಂತ್ ಮಾತ್ರವಲ್ಲ, ಎಲ್ಲರಿಗೂ ನಾನು ಶುಭ ಕೋರುತ್ತೇನೆ. ಭ್ರಷ್ಟಮುಕ್ತ ಮಾಡುತ್ತೇನೆ ಎಂದು ಎಲ್ಲರೂ ಹೊಸ ಪಕ್ಷ ಕಟ್ಟುತ್ತಾರೆ. ಆದರೆ ಅದು ಆಗಿದೆಯಾ ಎಂಬುದೇ ಪ್ರಶ್ನೆ ಎಂದು ಮೈಸೂರಿನಲ್ಲಿ‌ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

ನಂತರ ಬಿಜೆಪಿಯು ವಿರುದ್ಧ ಕಿಡಿಕಾರಿದ ಅವರು, ಬಿಜೆಪಿಗೆ ನಾನೇನು ಹೈಕಮಾಂಡಾ ? ಎಂದು ಪ್ರಶ್ನಿಸಿದರು.   ಮಾಹಿತಿ ಕಲೆ ಹಾಕಲು ಹೈಕಮಾಂಡ್ ಜೊತೆ ಸಂಪರ್ಕದಲ್ಲಿ ಇರಬೇಕೆಂದಿಲ್ಲ. ಆ ಬಗ್ಗೆ ಬೇಕಾದಷ್ಟು ಸುದ್ದಿ ಮೂಲ‌ಗಳು ಇವೆ. ಆ‌ ಮೂಲಗಳಿಂದ ನನಗೆ ಮಾಹಿತಿ ಲಭ್ಯವಾಗಿದೆ. ನನಗೆ ಬಂದಿರುವ ಮಾಹಿತಿಯ ಪ್ರಕಾರ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಆಗುತ್ತಾರೆ. ಬಿಜೆಪಿ ಹೈಕಮಾಂಡ್ ಯಡಿಯೂರಪ್ಪನವರನ್ನು ಬದಲಾವಣೆ ಮಾಡಲಿದೆ.

ಸದ್ಯ ಈಗ ರಾಜ್ಯದಲ್ಲಿ ಸರ್ಕಾರ ಇದೆ ಎಂದು ನನಗಂತೂ ಅನಿಸುತ್ತಿಲ್ಲ. ಯಡಿಯೂರಪ್ಪ ಒಬ್ಬ ಅಸಮರ್ಥ ಮುಖ್ಯಮಂತ್ರಿ. ಈ ಹಿಂದೆಯೂ ಸಮರ್ಥವಾಗಿ ಇರಲಿಲ್ಲ, ಈಗಲೂ ಇಲ್ಲ ಎಂದು ಯಡಿಯೂರಪ್ಪ ವಿರುದ್ಧ ಮೈಸೂರಿನಲ್ಲಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಕಳೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಯೋಗೇಶ್ವರ್ ದೊಡ್ಡ ಹಣ ತೆಗೆದುಕೊಂಡು ಕೊಡದೇ ಹೋದರು ಎಂದು ಎಚ್. ವಿಶ್ವನಾಥ್ ಹೇಳಿಕೆ‌ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಅದು ವೈಟ್ ಮನಿನಾ ಅಥವಾ ಬ್ಲ್ಯಾಕ್ ಮನಿನಾ ಎಂಬುದರ ಬಗ್ಗೆ ತನಿಖೆಯಾಗಬೇಕು . ಅಷ್ಟೊಂದು ದೊಡ್ಡ ಮೊತ್ತದ  ಹಣವನ್ನು  ಯಾರು‌ ಕೊಟ್ಟಿರುವುದು ? ಯಡಿಯೂರಪ್ಪ  ಅವರೇ ನೀಡಿರುವುದಾ ? 16 ಕ್ಷೇತ್ರಗಳಿಗೂ ಈ ಹಣ  ಹಂಚಿರಬೇಕು ಅಲ್ಲವೇ  ?ಈ ಬಗ್ಗೆ ಲೋಕಾಯುಕ್ತ ತನಿಖೆ ಆಗಬೇಕು ಎಂದರು.

ಇದನ್ನೂ ಓದಿ: ಅರೆನಗ್ನ ದಿರಿಸಿನಲ್ಲಿ ಈಜಿಪ್ಟ್ ಪಿರಮಿಡ್ ಮುಂಭಾಗ ರೂಪದರ್ಶಿ ಫೋಟೋ ಶೂಟ್, ಇಬ್ಬರ ಬಂಧನ!

ಜಿ.ಟಿ ದೇವೇಗೌಡ ಹಣ ಪಡೆದು ಬಿಜೆಪಿ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆ‌ ನೀಡಿದ್ದಾರೆಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ನಾನು ಹಾಗೆ ಹೇಳಿಯೇ ಇಲ್ಲ. ಅದು ಕ್ಲೋಸ್ ಡೋರ್ ಮೀಟಿಂಗ್ ಅಲ್ಲಿ ಆಗಿರುವ ಚರ್ಚೆ. ನಾನು ಹೀಗೆ ಹೇಳಿದೆ ಅಂತ ನಿಮಗೆ ಹೇಳಿದವರು ಯಾರು ? ನಾನು ಕೆಲ ವಿಚಾರಗಳನ್ನು ಹೇಳಿದ್ದು ಸತ್ಯ. ಆದ್ರೆ ಜಿಟಿಡಿ ಹಣ ಪಡೆದು ಬಿಜೆಪಿಗೆ ಕೆಲಸ ಮಾಡಿದ್ದಾರೆ ಅಂತ ಹೇಳಿಲ್ಲ.

ನಾವು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಬಾರದಿತ್ತು ಅಂತ ಹೇಳಿದ್ದೆ.  ಅಂದು ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ನಾವು ಮೈಸೂರು, ಮಂಡ್ಯ, ತುಮಕೂರು ಎಲ್ಲಾ ಕಡೆ ಗೆಲ್ಲುತ್ತಿದ್ದೆವು. ಜೆಡಿಎಸ್ ಕಾರ್ಯಕರ್ತರಿಗೂ, ನಮಗೂ ಹೊಂದಾಣಿಕೆ ಆಗಲಿಲ್ಲ. ಆದರೆ ಅದನ್ನು ಜಿಟಿಡಿ ಹಣ ಪಡೆದು ಕೆಲಸ ಮಾಡಿಲ್ಲ ಅಂತ ವದಂತಿ ಹಬ್ಬಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ರಾಜ್ಯ ಸರ್ಕಾರ ಇದುವರೆಗೂ ಟೇಕ್ ಆಫ್ ಆಗಿಯೇ ಇಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬ ಪರಿಸ್ಥಿತಿ ಇದೆ. ಕುರುಬ ಹೋರಾಟದಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ಮಾತ್ರವಲ್ಲದೆ ನನ್ನನ್ನು ಪ್ರತ್ಯೇಕಿಸುವ ಹುನ್ನಾರ ಇದರಲ್ಲಿ‌ ಅಡಗಿದೆ. ಎಸ್. ಟಿ. ಹೋರಾಟಕ್ಕೆ ನೂರಕ್ಕೆ ನೂರರಷ್ಟು ಕರೆದಿಲ್ಲ. ಒಂದೇ ಒಂದು ಬಾರಿ ಈಶ್ವರಪ್ಪ ಪೋನ್ ಮಾಡಿದ್ದರು.

ಇದನ್ನೂ ಓದಿ: ರೈತರನ್ನು ಹೇಡಿ ಅಂದಿಲ್ಲ, ಆತ್ಮಹತ್ಯೆಯಂತ ಕೆಲಸ ಹೇಡಿತನದ್ದು ಎಂದಿದ್ದೆ: B.C.ಪಾಟೀಲ್

ಆ ಹೋರಾಟ ರಾಜಕಿಯೇತರ ಹೋರಾಟ ಆಗಿದ್ದರೆ ನಾನು ಹೋಗುತ್ತಿದ್ದೆ. ಆರ್ ಎಸ್ ಎಸ್ ಮಾಡಿಸುತ್ತಿರುವ  ಹೋರಾಟ ಅದು. ಕುರುಬರನ್ನು ಒಡೆಯವ ಹುನ್ನಾರ ಅದು. ಅದಕ್ಕೆ ಈಶ್ವರಪ್ಪನವರು ಕೈ ಗೊಂಬೆಯಾಗಿದ್ದಾರೆ. ಈಶ್ವರಪ್ಪ ಕುರುಬರ ಪರವಾಗಿ ಹೋರಾಟ ಮಾಡಿಯೇ ಇಲ್ಲ. ಸ್ವಾರ್ಥಕ್ಕಾಗಿ ರಾಯಣ್ಣ ಬ್ರಿಗೇಡ್ ಮಾಡಿದ್ದರು. ಕುರುಬರ ಮಠ ಕಟ್ಟುವಾಗ ಎಲ್ಲಿದ್ದರು ? ಕನಕನ ಕಿಂಡಿ ಬದಲಾಯಿಸಲು ಹೋದಾಗ ಮಠದ ಪರವಾಗಿದ್ದ ಈ ಈಶ್ವರಪ್ಪ. ಮಿಸಲಾತಿ ಪರವಾಗಿ ಹೋರಾಟ ಮಾಡಿಲ್ಲವೇಕೆ ?  ಸಂವಿಧಾನ ಸುಟ್ಟಹಾಕಬೇಕು ಅಂದಾಗ ವಿರೋಧ ಮಾಡಿದ್ದರಾ ಈಶ್ವರಪ್ಪ ಎಂದು ಹರಿಹಾಯ್ದರು.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಬೃಹತ್ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ನಮ್ಮ ಪಕ್ಷದ ಕಾರ್ಯಕರ್ತರೂ ರೈತರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ನಮ್ಮ‌ ಪಕ್ಷವೂ ರೈತರ ಹೋರಾಟಕ್ಕೆ ಬೆಂಬಲ ನೀಡಿದೆ. ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಬೇಕು‌. ಸಮಿತಿಯೊಂದನ್ನು ಮಾಡಿ ಅದರಿಂದ ಸಮಸ್ಯೆಗೆ ಉತ್ತರ ಹುಡುಕುತ್ತೀವಿ ಅಂತ ಹೇಳಿದರೆ ಅರ್ಥವಿಲ್ಲ ಎಂದು ತಿಳಿಸಿದರು.

ಸಾಲ ಮಾಡಿ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು ಎಂಬ ಸಚಿವ ಬಿ ಸಿ ಪಾಟೀಲ್ ಹೇಳಿಕೆ ವಿಚಾರವಾಗಿ ಮಾತನಾಡಿ, ಬಿ.ಸಿ ಪಾಟೀಲ್ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ. ಅವರು ಆ ರೀತಿ ಹೇಳಿಕೆ ನೀಡಿದ್ದರೇ ಅದು ತಪ್ಪು. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಆ ರೀತಿಯ ಹೇಳಿಕೆ‌ ನೀಡಬಾರದು ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಮತ್ತು ಐಸಿಸ್ ಉಗ್ರಗಾಮಿ ಸಂಘಟನೆಯ‌ ಮನಸ್ಥಿತಿ, ಎರಡೂ ಒಂದೇ: ಬಿಜೆಪಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.