ಯೋಗ ದಿನಾಚರಣೆ: ಧರ್ಮ ಗುರುಗಳು ಭಾಗಿ
Team Udayavani, Jun 19, 2019, 3:00 AM IST
ಮೈಸೂರು: ಮೈಸೂರಿನ ರೇಸ್ಕೋರ್ಸ್ ಆವರಣದಲ್ಲಿ ಜೂನ್ 21 ರಂದು ನಡೆಯಲಿರುವ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಈ ಬಾರಿ ಗಿನ್ನಿಸ್ ದಾಖಲೆಗಿಂತ ಮುಖ್ಯವಾಗಿ ದಾಖಲೆಯ ಸಂಖ್ಯೆಯಲ್ಲಿ ಯೋಗ ಪಟುಗಳನ್ನು ಸೇರಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಸಂಘಟನೆ ಮಾಡಲಾಗುತ್ತಿದ್ದು, ಅನೇಕ ಧಾರ್ಮಿಕ ಗುರುಗಳು, ಮಠಾಧೀಶರು ಭಾಗವಹಿಸುತ್ತಿದ್ದಾರೆ.
ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮೀಜಿ, ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಕ್ರೆçಸ್ತ ಧರ್ಮಗುರು ಡಾ. ಕೆ.ಎ.ವಿಲಿಯಂ ಹಾಗೂ ಮುಸ್ಲಿಂ ಸಮುದಾಯದ ಸರ್ಕಾಜಿ ಮೊಹಮ್ಮದ್ ಉಸ್ಮಾನ್ ಷರೀಫ್ ಸೇರಿದಂತೆ ಅನೇಕ ಧರ್ಮಗುರುಗಳು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಸ್ವಾಮೀಜಿಗಳನ್ನು ಖುದ್ದು ಭೇಟಿ ಮಾಡಿ ಯೋಗ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಯೋಗ ಸಂಘಟನೆಗಳ ಪರವಾಗಿ ಮೈಸೂರು ಯೋಗ ಒಕ್ಕೂಟದ ವತಿಯಿಂದ ಸಹ ಹಲವಾರು ಧಾರ್ಮಿಕ ಮುಖಂಡರನ್ನು ಭೇಟಿ ಮಾಡಲಾಗಿದ್ದು, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದೇವೆ ಎಂದು ಯೋಗ ಫೆಡರೇಷನ್ ಆಫ್ ಮೈಸೂರಿನ ಉಪಾಧ್ಯಕ್ಷ ಶ್ರೀಹರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್ಗೆ 77ನೇ ರ್ಯಾಂಕ್
Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್ ನಾಂದಿ
Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ
Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು