ಯೋಗ ನಗರಿ ಮೈಸೂರಲ್ಲಿ ಯೋಗಾ ಯೋಗಾ


Team Udayavani, Jun 22, 2019, 3:00 AM IST

yoga-nagar

ಮೈಸೂರು ವಿಶಾಲವಾದ ಪ್ರದೇದಲ್ಲಿ ಅಹ್ಲಾದಕರ ಗಾಳಿ, ಮೆತ್ತನೆಯ ಹುಲ್ಲು ಹಾಸಿನ ಮೇಲೆ ಸಾಮೂಹಿಕವಾಗಿ ಯೋಗ ಪ್ರದರ್ಶಿಸುವ ಮೂಲಕ ಸಾವಿರಾರು ಮಂದಿ ಯೋಗಪಟುಗಳು 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಕ್ಷಿಯಾದರು. ಮೈಸೂರು ಜಿಲ್ಲಾಡಳಿತದ ವತಿಯಿಂದ ರೇಸ್‌ಕೋರ್ಸ್‌ ಆವರಣದಲ್ಲಿ ಆಯೋಜನೆ ಮಾಡಿದ್ದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮಂದಿ ಯೋಗಪಟುಗಳು ಭಾಗವಹಿಸಿ, ಮತ್ತೂಮ್ಮೆ ಮೈಸೂರು ನಗರವನ್ನು, ಮೈಸೂರು ಯೋಗನಗರಿ ಎಂದು ಸಾಬೀತುಪಡಿಸಿದರು.

ಸೂರ್ಯ ಉದಯಿಸುವುದಕ್ಕೂ ಮುನ್ನವೇ ಮುಂಜಾನೆ 5ಕ್ಕೆ ರಸ್ತೆಯಲ್ಲಿ ಯೋಗಪಟುಗಳು ತಂಡೋಪ ತಂಡವಾಗಿ ರೇಸ್‌ಕೋರ್ಸ್‌ನತ್ತ ಹೆಜ್ಜೆ ಹಾಕಿದುದು ಜನಸಾಮಾನ್ಯರ ಉಬ್ಬೇರುವಂತೆ ಮಾಡಿತು. ರೇಸ್‌ಕೋರ್ಸ್‌ನತ್ತ ಹೆಜ್ಜೆ ಹಾಕಿದುದು ಜನಸಾಮಾನ್ಯರ ಉಬ್ಬೇರುವಂತೆ ಮಾಡಿತು. ಜನಸಾಮಾನ್ಯರ ಉಬ್ಬೇರುವಂತೆ ಮಾಡಿತು.

ಮೈಸೂರು: ವಿಶಾಲವಾದ ಪ್ರದೇಶಲ್ಲಿ ಅಹ್ಲಾದಕರ ಗಾಳಿ, ಮೆತ್ತನೆಯ ಹುಲ್ಲು ಹಾಸಿನ ಮೇಲೆ ಸಾಮೂಹಿಕವಾಗಿ ಯೋಗ ಪ್ರದರ್ಶಿಸುವ ಮೂಲಕ ಸಾವಿರಾರು ಮಂದಿ ಯೋಗಪಟುಗಳು 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಕ್ಷಿಯಾದರು.

ಜಿಲ್ಲಾಡಳಿತದ ವತಿಯಿಂದ ರೇಸ್‌ಕೋರ್ಸ್‌ ಆವರಣದಲ್ಲಿ ಆಯೋಜಿಸಿದ್ದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮಂದಿ ಯೋಗಪಟುಗಳು ಭಾಗವಹಿಸಿ, ಮತ್ತೂಮ್ಮೆ ಮೈಸೂರು ನಗರವನ್ನು, ಮೈಸೂರು ಯೋಗನಗರಿ ಎಂದು ಸಾಬೀತುಪಡಿಸಿದರು.

ಸೂರ್ಯ ಉದಯಿಸುವುದಕ್ಕೂ ಮುನ್ನವೇ ಮುಂಜಾನೆ 5ಕ್ಕೆ ರಸ್ತೆಯಲ್ಲಿ ಯೋಗಪಟುಗಳು ತಂಡೋಪ ತಂಡವಾಗಿ ರೇಸ್‌ಕೋರ್ಸ್‌ನತ್ತ ಹೆಜ್ಜೆ ಹಾಕಿದುದು ಜನಸಾಮಾನ್ಯರ ಉಬ್ಬೇರುವಂತೆ ಮಾಡಿತು. ಬೆಳಗ್ಗೆ 6 ಗಂಟೆಯ ಹೊತ್ತಿಗೆ ಜಮಾಯಿಸಿದ ಸಾವಿರಾರು ಯೋಗಪಟುಗಳು ತಮಗೆ ಸೂಕ್ತವೆನಿಸಿದ ಸ್ಥಳದಲ್ಲಿ, ತಾವು ತಂದಿದ್ದ ಮ್ಯಾಟನ್ನು ಹಾಸಿ, ಯೋಗ ಪ್ರದರ್ಶನಕ್ಕೆ ಅಣಿಯಾದರು. ವಿಶೇಷ ಎಂದರೆ ಪುಟಾಣಿಗಳಿಂದ ಹಿಡಿದು 80 ಪ್ರಾಯದ ಹಿರಿ ಜೀವಗಳು ಅನೇಕ ಸಂಖ್ಯೆಯಲ್ಲಿ ಭಾಗವಹಸಿದ್ದರು.

ಗಣ್ಯರು ಭಾಗಿ: ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ನಿರ್ಮಲನಂದನಾಥ ಸ್ವಾಮೀಜಿ, ಅವದೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಮೈಸೂರು ಶಾಖೆಯ ಸೋಮೇಶ್ವರನಾಥ ಸ್ವಾಮೀಜಿ, ಸರ್‌ ಖಾಜಿ ಜನಾಬ್‌ ಮೊಹಮ್ಮದ್‌ ಉಸ್ಮಾನ್‌ ಷರೀಫ್ ಸಾಬ್‌ ಅವರ ಸಾನ್ನಿಧ್ಯದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಅವರು ಡೋಲು ಬಾರಿಸುವ ಮೂಲಕ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಯೋಗ ಗೀತೆ: ಓಂಕಾರ ಮತ್ತು ಯೋಗ ಗೀತೆಯ ಮೂಲಕ ಆರಂಭವಾದ ಯೋಗ ಪ್ರದರ್ಶನ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ಈ ಸಂದರ್ಭ ನಗರಪಾಲಿಕೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ, ಜಿಲ್ಲಾಡಳಿ ಸಿಬ್ಬಂದಿ, ಪೊಲಿಸ್‌ ಸಿಬ್ಬಂದಿಯೂ ಭಾಗಿಯಾಗಿ ಯೋಗ ಪ್ರದರ್ಶಿಸಿದರು.

ಶಂಕನಾದದೊಂದಿಗೆ ಆರಂಭವಾದ ಯೋಗ ಪ್ರದರ್ಶನ ತಾಡಾಸನ, ವೃಕ್ಷಾಸನ, ಅರ್ಧ ಚಕ್ರಾಸನ, ವೀರಭದ್ರಾಸನ, ತ್ರಿಕೋನಾಸನ ವಕ್ರಾಸನ ಸೇರಿದಂತೆ ಧ್ಯಾನದೊಂದಿಗೆ ಮುಕ್ತಾಯಗೊಂಡಿತು.

ಪ್ರತಿಜ್ಞಾವಿಧಿ ಬೋಧನೆ: ಯೋಗ ಪ್ರದರ್ಶನ ಮುಗಿದ ಮುಗಿದ ನಂತರ ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ಸ್ವತ್ಛ ಮೈಸೂರಿಗಾಗಿ ಮನೆಯಲ್ಲಿಯೇ ಕಸವನ್ನು, ಹೊಣ ಕಸ ಮತ್ತು ಹಸಿ ಕಸ ಎಂದು ಬೇರ್ಪಡಿಸಿ, ಪಾಲಿಕೆಗೆ ನೀಡಬೇಕು. ಇದು ನಮ್ಮೆಲ್ಲರ ಕರ್ತವ್ಯ ಎಂಬ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಅಚ್ಚುಕಟ್ಟಾದ ವ್ಯವಸ್ಥೆ: 30 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿತ್ತು. ರೇಸ್‌ಕೋರ್ಸ್‌ ಆವರಣದಲ್ಲಿ ಎರಡು ಮೊಬೈಲ್‌ ಶೌಚಾಲಯ ವಾಹನ, ತಾತ್ಕಾಲಿಕ ಶೌಚಾಗೃಹ, ಕುಡಿಯುವ ನೀರಿನ ಘಟಕ ತೆರೆಯಲಾಗಿತ್ತು.

ಜೊತೆಗೆ ಮಾರ್ಗದರ್ಶನ ನೀಡಲು ಸ್ವಯಂಸೇವಕರನ್ನೂ ನಿಯೋಜಿಸಲಾಗಿತ್ತು. ಸೂಕ್ತ ಬಂದೋಬಸ್ತ್ ಮತ್ತು ಸಂಚಾರ ದಟ್ಟಣೆ ನಿವಾರಿಸಲು ಪೊಲೀಸರು ಹಲವು ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದರು. ಕಾರ್ಯಕ್ರಮದಲ್ಲಿ ಶಾಸಕ ಎಸ್‌.ಎ. ರಾಮದಾಸ್‌, ಎಲ್‌. ನಾಗೇಂದ್ರ, ಯತೀಂದ್ರ, ಮೇಯರ್‌ ಪುಷ್ಪಲತಾ, ಜಿಪಂ ಅಧ್ಯಕ್ಷೆ ಪರಿಮಳ, ತಾಪಂ ಅಧ್ಯಕ್ಷೆ ಕಾಳಮ್ಮ ಇತರರಿದ್ದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.