ಯುವ ಜನತೆ ಮಾದಕ ವಸ್ತುಗಳಿಂದ ದೂರವಿರಿ
Team Udayavani, Jul 23, 2019, 3:00 AM IST
ಮೈಸೂರು: ವಿಶ್ವ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕಲ್ಯಾಣ ಇಲಾಖೆ, ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ವಿಭಾಗದ ಸಹಯೋಗದಲ್ಲಿ ಸೋಮವಾರ ಜಾಥಾ ನಡೆಸಲಾಯಿತು.
ಮಾದಕ ವಸ್ತುಗಳನ್ನು ತ್ಯಜಿಸಿ ಮುಕ್ತ ಸಮಾಜಕ್ಕೆ ಕೈ ಜೋಡಿಸಿ ಎಂಬ ವಿವಿಧ ನಾಮಫಲಕಗಳನ್ನು ಹಿಡಿದ ವಿದ್ಯಾರ್ಥಿಗಳು ಮಾದಕ ವಸ್ತುಗಳನ್ನು ವಿರೋಧಿಸುವಂತೆ ಜಾಗೃತಿ ಜಾಥಾದ ಮೂಲಕ ಅರಿವು ಮೂಡಿಸಿದರು.
ಜಿಲ್ಲಾ ಸಶŒ ಚಿಕಿತ್ಸಾಧಿಕಾರಿ ಡಾ.ಬಸವರಾಜು ಜಾಥಾಗೆ ಚಾಲನೆ ನೀಡಿ, ಯುವ ಸಮೂಹ ಮಾದಕ ವಸ್ತುಗಳಿಂದ ದೂರವಿರಬೇಕು. 20 ವರ್ಷದ ಯುವಕ ಮಾದಕ ವಸ್ತುವಿನಿಂದ ಪ್ರಚೋದನೆಗೊಂಡು 70 ವರ್ಷದವರನ್ನು ಅತ್ಯಾಚಾರ ನಡೆಸುವ ಪ್ರಕರಣವೂ ನಡೆಯುತ್ತಿದೆ. ಹೀಗಾಗಿ ಯುವಜನತೆ ಎಚ್ಚೆತ್ತುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು.
ಬನ್ನಿಮಂಟಪದ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜು ಆವರಣದಿಂದ ಆರಂಭಗೊಂಡ ಜಾಥಾವು ವೀರನಗೆರೆ, ಫೌಂಟೇನ್ ಸರ್ಕಲ್ ವೃತ್ತ, ಆಶೋಕ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಯಿತು. ಆರೋಗ್ಯ ಇಲಾಖೆಯ ಡಾ.ಸಂತೋಷ್, ಡಾ.ಶಿವರಾಮ್, ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಎಚ್.ಪಿ.ಶಿವಸ್ವಾಮಿ, ಅತಿಥಿ ಉಪನ್ಯಾಸಕ ಎಂ. ಬಸವರಾಜು, ಎನ್ಎಸ್ಎಸ್ ಅಧಿಕಾರಿಗಳಾದ ಎಸ್.ಎಂ.ಮಧುಸೂದನ, ನವೀನ್ಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್