ಕಲಾಸಂಸ್ಕೃತಿ ಉಳಿವಿಗೆ ಯುವಜನತೆ ಪಣ ತೊಡಿ


Team Udayavani, Nov 2, 2018, 12:07 PM IST

m5-kala.jpg

ಮೈಸೂರು: ನಮ್ಮ ಕಲೆ, ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಯುವ ಸಮೂಹ ಶ್ರಮಿಸಬೇಕಿದೆ. ನಮ್ಮ ಸಂಸ್ಕೃತಿ ಬೆಳೆದಂತೆ ಸಮಾಜ ಮತ್ತು ದೇಶ ಆರೋಗ್ಯವಾಗಿರಲಿದೆ ಎಂದು ಚಿತ್ರ ನಿರ್ದೇಶಕ ಟಿ.ಎಸ್‌.ನಾಗಾಭರಣ ಹೇಳಿದರು. 

ನಗರದ ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಆಶ್ರಮದ ನಾದಮಂಟಪದಲ್ಲಿ ಸಂಸ್ಕಾರ ಭಾರತೀ ಮೈಸೂರು ಘಟಕ ಮತ್ತು ಗಣಪತಿ ಸಚ್ಚಿದಾನಂದ ಆಶ್ರಮ ಆಯೋಜಿಸಿರುವ ರಾಷ್ಟ್ರೀಯ ಯುವ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾದ ಮತ್ತು ಪ್ರಕೃತಿ ನಡುವೆ ಅವಿನಾಭಾವ ನಂಟಿದ್ದು, ಪ್ರಕೃತಿಯೊಂದಿಗೆ ನಮ್ಮನ್ನು ಸಮೀಕರಿಸಿಕೊಳ್ಳಬೇಕಾದರೆ ನಾದ ಅಗತ್ಯವಿದೆ. ನಾದಕ್ಕೆ ತನ್ನದೆಯಾದ ಶೈಲಿ, ಸ್ವಭಾವ ಮತ್ತು ಒಳಮನಸ್ಸಿದ್ದು, ನಮ್ಮ ಮನಸ್ಸನ್ನು ನಿರ್ಮಲವಾಗಿ ಇಡುವುದರಿಂದ ಇವೆರಡನ್ನು ಉಳಿಸಿ ಬೆಳೆಸಬೇಕಿದೆ ಎಂದು ಹೇಳಿದರು. 

ಮಾನವೀಯ ಮನೋಭಾವ: ಪ್ರಸ್ತುತ ನಾವು ಬದುಕುವ ಮಾರ್ಗದ ಎಡ-ಬಲದ ಸಿದ್ಧಾಂತಗಳು ಮನುಷ್ಯನನ್ನು ನೋಡುವ ಬಗೆಯನ್ನು ಬದಲಾಯಿಸಿವೆ. ಇದರಿಂದ ನಾವು ಮನುಷ್ಯರಾಗಿ ಬದುಕುತ್ತಿದ್ದೇವೆಯೇ ಎಂಬ ಅನುಮಾನ ಮೂಡುತ್ತಿದ್ದು, ಎಡ-ಬಲದ ಮನೋಭಾವದ ಬದಲು ನಾವೆಲ್ಲರೂ  ಮಾನವರೆಂಬ ಮನೋಭಾವದಿಂದ ಬದುಕಬೇಕಿದೆ.

ಇದರ ಮೂಲಕ ಒಬ್ಬರೂ ಮತ್ತೂಬ್ಬರನ್ನು ಮನುಷ್ಯರನ್ನಾಗಿ ನೋಡುವುದನ್ನು ಕಲಿಯಬೇಕಿದೆ. ಮನುಷ್ಯ ಜಾತಿ-ಧರ್ಮಗಳ ಹೊರತಾಗಿ ಮಾನವೀಯತೆ ನೆಲೆಗಟ್ಟಿನಲ್ಲಿ ಬದುಕುವ ಅಗತ್ಯವಿದೆ.  ಕಲಾ ಪ್ರಕಾರಗಳು ಮಾತ್ರ ಯಾವುದೇ ಲಿಂಗ, ಜಾತಿ, ಧರ್ಮಗಳನ್ನು ನೋಡದೆ ತನ್ನತ್ತ ಎಳೆದುಕೊಳ್ಳುತ್ತವೆ ಎಂದು ಹೇಳಿದರು. 

ಸಂಸ್ಕೃತಿ ಪರಂಪರೆ ಉಳಿಸಿ: ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾತನಾಡಿ, ಬ್ರಿಟಿಷರಿಗೆ ಕರ್ನಾಟಕದ ಶಕ್ತಿ ಬಗ್ಗೆ ಭಯವಿತ್ತು. ಹೀಗಾಗಿ ಮದ್ರಾಸ್‌ ಕರ್ನಾಟಕ, ಹೈದ್ರಾಬಾದ್‌ ಕರ್ನಾಟಕ, ಬಾಂಬೆ ಕರ್ನಾಟಕವೆಂದು ಪ್ರಾದೇಶಿಕವಾಗಿ ವಿಂಗಡಿಸಿದ್ದರು. ಇಂತಹ ಸಮಯದಲ್ಲಿ ಅಖಂಡ ಕರ್ನಾಟಕ ರೂಪುಗೊಳ್ಳಬೇಕೆಂದು ಆಲೂರು ವೆಂಕಟರಾಯರು ಕರೆ ನೀಡಿದ್ದರು.

ಇದಾದ ನಂತರ ವಿವಿಧ ರೀತಿಯ ಹೋರಾಟಗಳಿಂದ ಕರ್ನಾಟಕ ರಚನೆಗೊಂಡಿದೆ. ಇದನ್ನು ನಾವೆಲ್ಲರೂ ಉಳಿಸಿಕೊಂಡು ಹೋಗಬೇಕು. ಇದರೊಂದಿಗೆ ನಮ್ಮ ಕಲೆ, ಸಾಹಿತ್ಯ, ಸಂಸ್ಕೃತಿ ಪರಂಪರೆಯನ್ನು ಆಚರಿಸುತ್ತಾ, ಉಳಿಸಿ-ಬೆಳಸಬೇಕಿದೆ ಎಂದರು. ಇದೇ ಸಂದರ್ಭದಲ್ಲಿ ಮೈಸೂರು ಸಂಸ್ಕಾರ ಭಾರತೀ ವೆಬ್‌ಸೈಟ್‌ ಅನ್ನು ಸಚಿವ ಜಿ.ಟಿ.ದೇವೇಗೌಡ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಸಂಗೀತದ ಕುರಿತು ಕನ್ನಡ, ಇಂಗ್ಲಿಷ್‌, ಸಂಸ್ಕೃತ ಭಾಷೆಯ 24 ಲೇಖನಗಳನ್ನು ಒಳಗೊಂಡ ಸ್ಮರಣ ಸಂಚಿಕೆಯನ್ನು ಗಣ್ಯರು ಬಿಡುಗಡೆ ಮಾಡಿದರು. 

ಕಾರ್ಯಕ್ರಮದಲ್ಲಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ, ಆಗ್ರಾದ ಸಂಸ್ಥಾಪಕ್‌ ಸಂಘಟನಾ ಮಂತ್ರಿ ಪದ್ಮಶ್ರೀ ಬಾಬಾ ಯೋಗೇಂದ್ರಜೀ, ಕರ್ನಾಟಕ ಉತ್ತರದ ಸಂಸ್ಕಾರ ಭಾರತೀ ಅಧ್ಯಕ್ಷ ಕೃಷ್ಣದೇವರಾಯ, ಸಂಸ್ಕಾರ ಭಾರತೀಯ ಮುಖ್ಯ ಕಾರ್ಯದರ್ಶಿ ಅಮೀರ್‌ಚಂದ್‌, ಭಾರತ ಸರ್ಕಾರದ ಸಾಂಸ್ಕೃತಿಕ ಕೇಂದ್ರ ದಕ್ಷಿಣ ವಲಯದ ನಿರ್ದೇಶಕ ಡಾ.ದೀಪಕ್‌ ಶಾಂತರಾಮ್‌ ಕಿರವಾಡ್ಕರ್‌, ಸಂಸದ ಪ್ರತಾಪ್‌ ಸಿಂಹ ಹಾಜರಿದ್ದರು. 

ನಾಲ್ಕು ದಿನಗಳ ಕಾರ್ಯಕ್ರಮ: ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಆಶ್ರಮದ ನಾದ ಮಂಟಪದಲ್ಲಿ ನ.4ರವರೆಗೆ ರಾಷ್ಟ್ರೀಯ ಯುವ ಸಂಗೀತೋತ್ಸವ ನಡೆಯಲಿದೆ. ಯುವ ಸಂಗೀತೋತ್ಸವದಲ್ಲಿ ಒಟ್ಟು 32 ಗೋಷ್ಠಿಗಳು ನಡೆಯಲಿದ್ದು, ಈ ಗೋಷ್ಠಿಗಳಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಯುವ ಸಂಗೀತ ಕಲಾವಿದರು ಭಾಗವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಮೈಸೂರು ಸಂಸ್ಥಾನದ ಕೊನೆಯ ಅರಸರಾಗಿದ್ದ ಶ್ರೀ ಜಯಚಾಮರಾಜ ಒಡೆಯರ್‌ ಅವರ ಜನ್ಮ ಶತಮಾನೋತ್ಸವದವಾದ ಹಿನ್ನೆಲೆಯಲ್ಲಿ ಅವರ ಸ್ಮರಣೆಯ ಗೀತೆಗಳ ಗಾಯನ ನಡೆಯಲಿದೆ. 

ನಾವಿಂದು ಪರಿಸರದಿಂದ ದೂರವಾದಷ್ಟು ಪ್ರಕೃತಿ ತನ್ನ ಒಡಲಿಗೆ ನಮ್ಮನ್ನು ಎಳೆದುಕೊಳ್ಳುತ್ತಿದೆ. ಇದಕ್ಕೆ ಇತ್ತೀಚೆಗೆ ಕೊಡಗು ಮತ್ತು ಕೇರಳದಲ್ಲಿ ಸಂಭವಿಸಿದ ಪ್ರವಾಹದಿಂದ ತಿಳಿಯಬಹುದು. ಇದು ಪ್ರಕೃತಿ ನಮಗೆ ನೀಡುತ್ತಿರುವ ಎಚ್ಚರಿಕೆಯೂ ಆಗಿದೆ. ಹೀಗಾಗಿ ಪ್ರಕೃತಿಯ  ಸಂರಕ್ಷಣೆ ಮಾಡುವುದರ ಮೂಲಕ ಪರಿಸರ ಸಂರಕ್ಷಣೆಯತ್ತ ನಮ್ಮನ್ನು ದೂಡಬೇಕಿದೆ. 
-ಟಿ.ಎಸ್‌. ನಾಗಾಭರಣ, ಚಿತ್ರ ನಿರ್ದೇಶಕ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.