ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ತೊಂದರೆ: ಆರೋಪ

ಭೂಮಿ ಕುಸಿದು ಬೃಹತ್‌ ಗಾತ್ರದ ಮರಗಳು ಧರೆಗುರುಳುವ ಸ್ಥಿತಿ ವಾಹನ ಓಡಾಟಕ್ಕೆ ಸಂಚಕಾರ

Team Udayavani, Oct 30, 2019, 5:53 PM IST

30-October-24

ಎನ್‌.ಆರ್‌.ಪುರ: ತಾಲೂಕು ಕೇಂದ್ರದಿಂದ ಶಿವಮೊಗ್ಗಕ್ಕೆ ಹೋಗುವ ಮುಖ್ಯರಸ್ತೆಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವುದರಿಂದ ಪ್ರಸ್ತುತ ಧರೆ ಕುಸಿದು ಬೃಹತ್‌ ಗಾತ್ರದ ಮರಗಳು ಧರೆಗುರುಳುವ ಸ್ಥಿತಿಗೆ ತಲುಪಿವೆ ಎಂದು ವಾಹನ ಸವಾರರು ಹಾಗೂ ಸಾರ್ವಜನಿಕರು ಆರೋಪಿಸಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಶಿವಮೊಗ್ಗದ ಮುಖ್ಯರಸ್ತೆ ಮಡಬೂರು ಗ್ರಾಮದ ಸಮೀಪ ಉಬ್ಬುತಗ್ಗಿನಿಂದ ಕೂಡಿದೆ ಎಂಬ ಕಾರಣಕ್ಕೆ ಉಬ್ಬುಗಳಿದ್ದ ರಸ್ತೆಯನ್ನು ಸಮತಟ್ಟಾಗಿ ನಿರ್ಮಿಸಲಾಯಿತು. ಹೀಗೆ ರಸ್ತೆಗಳನ್ನು ಸಮತಟ್ಟಾಗಿ ನಿರ್ಮಿಸುವಾಗ ಅ ಧಿಕ ಉಬ್ಬುಗಳಿದ್ದ ಸ್ಥಳದಲ್ಲಿ ರಸ್ತೆಯ ಎರಡೂ ಕಡೆ ರಸ್ತೆಯನ್ನು ವಿಸ್ತರಿಸುವಾಗ ಭಾರೀ ಪ್ರಮಾಣದಲ್ಲಿ ಮಣ್ಣನ್ನು ಅಗೆದಿದ್ದರಿಂದ ಎರಡೂ ಭಾಗದಲ್ಲೂ ಎತ್ತರದ ದಿಣ್ಣೆ ನಿರ್ಮಾಣವಾಗಿತ್ತು.

ಹೀಗೆ ದಿಣ್ಣೆಯ ಮಣ್ಣನ್ನು ಅಗೆಯುವಾಗ ಭಾರೀ ಮರಗಳು ಇರುವ ಜಾಗದಲ್ಲಿ ಮರದ ಬುಡದವರೆಗೂ ಸುಮಾರು ಅರ್ಧ ಕಿ.ಮೀ. ನಷ್ಟು ದೂರ ಮಣ್ಣನ್ನು ಅಗೆಯಲಾಗಿದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಸುರಿದ ಭಾರೀ ಮಳೆಗೆ ಮಣ್ಣು ಕುಸಿಯುತ್ತ ಸಾಗಿದೆ. ಪ್ರಸ್ತುತ ವರ್ಷ ಭಾರೀ ಮಳೆ ಸುರಿಯುತ್ತಿರುವುದರಿಂದ ಧರೆ ಕುಸಿದು ಮರದ ಬುಡದಲ್ಲಿದ್ದ ಮಣ್ಣು ಕುಸಿಯಲು ಪ್ರಾರಂಭಿಸಿದೆ ಎಂದು ದೂರಿದ್ದಾರೆ.

ಮಳೆ ಮುಂದುವರೆದರೆ ಭಾರೀ ಗಾತ್ರದ ಮರಗಳು ರಸ್ತೆ ಮೇಲೆ ಯಾವುದೇ ಸಂದರ್ಭದಲ್ಲಿ ಬಿಳುವ ಸಾಧ್ಯತೆಯಿದೆ. ರಸ್ತೆ ನಿರ್ಮಾಣ ಮಾಡುವಾಗ ಇಲಾಖೆ ಮಾಡಿರುವ ಮತ್ತೂಂದು ಪ್ರಮಾದವೆಂದರೆ ಇನ್ನೊಂದು ಭಾಗದಲ್ಲಿ 33/11 ಕೆ.ವಿ. ವಿದ್ಯುತ್‌ ಮಾರ್ಗ ಹಾದು ಹೋಗಿದೆ. ಇದಕ್ಕಾಗಿ ದೊಡ್ಡ ವಿದ್ಯುತ್‌ ತಂತಿಯ ಟವರ್‌ ಅಳವಡಿಸಲಾಗಿದ್ದು, ಇದರ ಬುಡದ ಮಣ್ಣು ಸಹ ಅಗೆದಿರುವುದರಿಂದ ಈ ಭಾಗದಲ್ಲೂ ಮಣ್ಣು ಕುಸಿಯಲು ಪ್ರಾರಂಭವಾಗಿದೆ.

ಇವು ಸಹ ಯಾವುದೇ ಸಂದರ್ಭದಲ್ಲಿ ಧರೆಗುರುಳುವ ಸಾಧ್ಯತೆಯಿದೆ. ಅಲ್ಲದೇ, ಬಸ್‌ ತಂಗುದಾಣದ ಬುಡದವರೆಗೂ ಮಣ್ಣು ಅಗೆದಿರುವುದರಿಂದ ಇದು ಸಹ ಧರೆಗುರುಳುವ ಸಾಧ್ಯತೆಯಿದೆ ಎಂದಿದ್ದಾರೆ.

ಪ್ರಮುಖ ರಸ್ತೆಯಾಗಿರುವುದರಿಂದ ವಾಹನ ಸಂಚಾರ ನಿರಂತರವಾಗಿರುತ್ತದೆ. ವಾಹನ ಸಂಚರಿಸುವ ಸಂದರ್ಭದಲ್ಲಿ ಭಾರಿ ಗಾತ್ರದ ಮರಗಳು ಬಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದ್ದು, ಪ್ರಾಣ ಹಾನಿ ಸಂಭವಿಸುವ ಸಾಧ್ಯತೆಯಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಶೆಟ್ಟಿಕೊಪ್ಪ ಮುಖ್ಯರಸ್ತೆಯ ಬದಿಯಲ್ಲಿರುವ ಒಣಗಿದ ಮರ ತೆರವುಗೊಳಿಸುವ ಬಗ್ಗೆ ಪತ್ರ ಬಂದಿದೆ. ಮಡಬೂರು ಗ್ರಾಮದ ರಸ್ತೆ ಬದಿಯಲ್ಲಿ ಬೀಳುವ ಹಂತದಲ್ಲಿರುವ ಮರಗಳನ್ನು ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆಯ ಪತ್ರ ಬಂದ ನಂತರ ಪರಿಶೀಲಿಸಲಾಗುವುದು ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಮಣ್ಣು ಕುಸಿತದಿಂದ ಮರ ಅಥವಾ ವಿದ್ಯುತ್‌ ಮಾರ್ಗ ರಸ್ತೆಗೆ ಬಿದ್ದು ಅನಾಹುತ ಸಂಭವಿಸುವ ಮೊದಲೇ ಇಲಾಖೆ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.