ಕುಡಿಯಲು ಎಡದಂಡೆ ಕಾಲುವೆಗೆ ನೀರು

•ಆಲಮಟ್ಟಿಯಿಂದ ಬಸವಸಾಗರ ಜಲಾಶಯಕ್ಕೆ 6700 ಕ್ಯೂಸೆಕ್‌ ನೀರು ಬಿಡುಗಡೆ

Team Udayavani, Apr 26, 2019, 3:04 PM IST

26-April-24

ನಾರಾಯಣಪುರ: ಬಸವಸಾಗರ ಜಲಾಶಯದ ಹಿನ್ನೀರು (ಸಂಗ್ರಹ ಚಿತ್ರ).

ನಾರಾಯಣಪುರ: ನಾರಾಯಣಪುರ ಬಸವಸಾಗರ ಜಲಾಶಯದಿಂದ 1.50 ಟಿಎಂಸಿ ಅಡಿ ನೀರನ್ನು ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ (ಎನ್‌ಎಲ್ಬಿಸಿ) ಮೂಲಕ ಹರಿಸಲಾಗುತ್ತಿದೆ ಎಂದು ಅಣೆಕಟ್ಟು ಗೇಟ್ಸ್‌ ಉಪವಿಭಾಗದ ಎಇಇ ಆರ್‌.ಎಲ್. ಹಳ್ಳೂರ ತಿಳಿಸಿದ್ದಾರೆ.

ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಆಲಮಟ್ಟಿ ಮತ್ತು ನಾರಾಯಣಪುರ ವೃತ್ತಗಳ ಅಧೀಕ್ಷಕ ಅಭಿಯಂತರರೊಂದಿಗೆ ಸಭೆ ನಡೆಸಿ ತಾಂತ್ರಿಕ ಅಭಿಪ್ರಾಯ ಪಡೆದು ಆದೇಶ ಹೊರಡಿಸಲಾಗಿದೆ. ಆದೇಶದಲ್ಲಿ ಸೂಚಿಸಿದಂತೆ ಆಲಮಟ್ಟಿ ಜಲಾಶಯದಿಂದ ಜನ ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕೆ ನಾರಾಯಣಪುರ ಜಲಾಶಯಕ್ಕೆ ಹಾಗೂ ವಿವಿಧ ಏತ ನೀರಾವರಿ ಯೋಜನೆಗಳ ಕಾಲುವೆ ಜಾಲಗಳಡಿ ಬರುವ ಕೆರೆಗಳು, ಬಾಂದಾರುಗಳಿಗೆ ನೀರು ಹರಿಸಲಾಗುತ್ತಿದೆ. ಅದರಂತೆ ಏ.23ರಂದು ಬೆಳಗ್ಗೆ 11:00ರಿಂದ ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ 6700 ಕ್ಯೂಸೆಕ್‌ ನೀರು ಹರಿಬಿಡಲಾಗಿದೆ. ಬಸವಸಾಗರಕ್ಕೆ ಹಿನ್ನೀರು ಹರಿದು ಬಂದ ಹಿನ್ನೆಲೆಯಲ್ಲಿ ಆದೇಶದಲ್ಲಿನ ಸೂಚನೆಯಂತೆ ಏ.24ರಂದು ಬೆಳಗ್ಗೆ 8:00ರಿಂದ ನಾರಾಯಣಪುರದ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ಆರಂಭಿಸಲಾಗಿದೆ ಎಂದು ಹಳ್ಳೂರ ತಿಳಿಸಿದ್ದಾರೆ.

ಶಾಖಾ ಕಾಲುವೆಗಳ ಮೂಲಕ ನೀರು: ಜಲಾಶಯ ಅವಲಂಬಿತ ನಗರ-ಪಟ್ಟಣಗಳಿಗೆ ಮುಖ್ಯ ಕಾಲುವೆ ಮೂಲಕ 1.50 ಟಿಎಂಸಿ ಅಡಿ ನೀರು ಹರಿಸಲು ನಿಗದಿ ಮಾಡಲಾದ ಪ್ರಮಾಣದಲ್ಲಿ ಅರ್ಧ ಟಿಎಂಸಿ ಅಡಿ ನೀರನ್ನು ಶಹಾಪುರ ಶಾಖಾ ಕಾಲುವೆ ಮೂಲಕ ಹರಿಸಲಾಗುತ್ತದೆ. ನಂತರದಲ್ಲಿ ಕಲಬುರಗಿ ನಗರಕ್ಕೆ ಅರ್ಧ ಟಿಎಂಸಿ ಅಡಿ ನೀರು ನಿಗದಿ ಮಾಡಲಾಗಿದೆ. ಅದನ್ನು ಜೇವರ್ಗಿ ಶಾಖಾ ಕಾಲುವೆ ಮೂಲಕ ಹರಿಸಲಾಗುತ್ತಿದೆ. ಉಳಿದಂತ ಅರ್ಧ ಟಿಎಂಸಿ ಅಡಿ ಇಂಡಿ ಶಾಖಾ ಕಾಲುವೆ ಮೂಲಕ ಬಳಗಾನೂರು ಕೆರೆಗೆ ನೀರು ಹರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಕಾಲುವೆ ಜಾಲದ ಮೂಲಕ ಬಿಡುಗಡೆ ಮಾಡಲಾದ ನೀರನ್ನು ಕುಡಿಯುವ ನೀರಿನ ಉದ್ಧೇಶಕ್ಕೆ ಮಾತ್ರ ಬಳಸಬೇಕು. ಪೋಲಾಗದಂತೆ ಎಚ್ಚರವಹಿಸಬೇಕು ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ.

ಜಲಾಶಯದ ಮಟ್ಟ: ಜಲಾಶಯದಲ್ಲಿ ಪ್ರಸ್ತುತ 16.09 ಟಿಎಂಸಿ ಅಡಿ ನೀರು ಸಂಗ್ರಹ ಇದೆ. ಆಲಮಟ್ಟಿ ಜಲಾಶಯದಿಂದ ಒಳಹರಿವು 6700 ಕ್ಯೂಸೆಕ್‌ ಇದೆ. ಹೊರಹರಿವು 1335 ಕ್ಯೂಸೆಕ್‌ (ಎಡದಂಡೆ ಮುಖ್ಯ ಕಾಲುವೆ) ಇದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.