ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
Team Udayavani, Dec 23, 2019, 3:24 PM IST
ನಾರಾಯಣಪುರ: ಸಮೀಪದ ಜುಮಾಲಪುರ ದೊಡ್ಡ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಜೂರಾಗಿರುವ ನೂತನ ನಾಲ್ಕು ಕೊಠಡಿ ನಿರ್ಮಾಣ ಕಾಮಗಾರಿಗೆ ಯುವ ಮುಖಂಡ ಹಣಮಂತ ನಾಯಕ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಹಣಮಂತ ನಾಯಕ, ಜುಮಾಲಪುರ ದೊಡ್ಡ ತಾಂಡಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡಲು ಕೆಕೆಆರ್ಡಿಬಿ ಯೋಜನೆಯಡಿ ನೂತನ ನಾಲ್ಕು ಕೊಠಡಿ ಮಂಜೂರಾಗಿದ್ದು, ಕಾಮಗಾರಿ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಗುತ್ತಿಗೆದಾರರು ಯಾವುದೇ ಕಾರಣಕ್ಕೂ ಕಳಪೆ ಆಗದಂತೆ ನೋಡಿಕೊಳ್ಳಬೇಕು. ನಿಗದಿ ಪಡಿಸಿದ ಅವಧಿಯಲ್ಲೇ ಪುರ್ಣಗೊಳಿಸಬೇಕು ಎಂದು ತಿಳಿಸಿದರು.
ತಾಲೂಕಿನ ಅಭಿವೃದ್ಧಿಗೆ ಶಾಸಕ ರಾಜುಗೌಡ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಮುಂಬರುವ ದಿನಗಳಲ್ಲಿ ಮತಕ್ಷೇತ್ರದಲ್ಲಿ ಬರುವ ಶಾಲಾ-ಕಾಲೇಜು ಕಟ್ಟಡ ನಿರ್ಮಾಣ ಅಲ್ಲದೇ ಹಲವು ಹಳ್ಳಿಗಳಿಗೆ ಪ್ರಮುಖವಾಗಿ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿ ಹಾಗೂ ಡಾಂಬರೀಕರಣ ಕಾಮಗಾರಿಗಳು ಕೈಗೊಳ್ಳಲಿದ್ದಾರೆ ಎಂದರು.
ಡಾ| ಬಿ.ಎಂ. ಹಳ್ಳಿಕೋಟೆ, ಬಿಜೆಪಿ ತಾಲೂಕು ಅಧ್ಯಕ್ಷ ಅಮರಣ್ಣ ಹುಡೇದ, ವೆಂಕಟೇಶ ಸಾಹುಕಾರ, ಮಲ್ಲು ನವಲಗುಡ್ಡ, ಸಂಗಣ್ಣ ಹುಬ್ಬಳ್ಳಿ, ಎಸ್ಡಿಎಂಸಿ ಅಧ್ಯಕ್ಷ ರಾಘವೇಂದ್ರ ಸಾಹುಕಾರ, ಮುಖ್ಯ ಶಿಕ್ಷಕ ಅಚ್ಚಪ್ಪಗೌಡ ಗೌಡರ್, ಪಾಪಣ್ಣ ರಾಠೊಡ, ಭರತ್, ಮೌನೇಶ ಹೂಗಾರ, ಮಲ್ಲು ಹೊಳಿ, ರಾಜಕುಮಾರ, ಮಲ್ಲು ಇಟಗಿ, ಶಕುಂತಲಾ ಸೇರಿದಂತೆ ತಾಂಡಾದ ಪ್ರಮುಖರು, ಕೆಕೆಆರ್ಡಿಬಿ ಅಧಿಕಾರಿಗಳು, ಗುತ್ತಿಗೆದಾರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ