ಸಾಮೂಹಿಕ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ: ಶಾಸಕ ರಾಜುಗೌಡ

ವೈವಾಹಿಕ ಜೀವನಕ್ಕೆ ಕಾಲಿಟ್ಟ 76 ನವ ಜೋಡಿ

Team Udayavani, May 29, 2019, 5:15 PM IST

29-May-30

ನಾರಾಯಣಪುರ: ಜೋಗುಂಢಬಾವಿ ಗ್ರಾಮ ದೇವತೆ ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಮಾತನಾಡಿದರು.

ನಾರಾಯಣಪುರ: ಸಾಮೂಹಿಕ ವಿವಾಹಗಳು ದುಂದು ವೆಚ್ಚಗಳಿಗೆ ಕಡಿವಾಣ ಹಾಕುತ್ತವೆ. ಪೂರ್ವ ಜನ್ಮದ ಪುಣ್ಯದ ಫಲದಿಂದ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಸಾಧ್ಯವೆಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಹೇಳಿದರು.

ಸಮೀಪದ ಜೋಗುಂಡಭಾವಿ ಗ್ರಾಮದಲ್ಲಿ ಮಂಗಳವಾರ ಜರುಗಿದ ಗ್ರಾಮ ದೇವತೆ ಶ್ರೀ ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಳ್ಳಲಾದ ಸಾಮೂಹಿಕ ವಿವಾಹ, ಧರ್ಮಸಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಒಂದೇ ವೇದಿಕೆಯಲ್ಲಿ ಜರಗುವ ಇಂತಹ ವಿವಾಹ ಕಾರ್ಯಕ್ರಮದಲ್ಲಿ ಜಾತಿ, ಮತ, ಪಂಥ ಭೇದವಿಲ್ಲದೆ ಸರ್ವರೂ ಸಮಾನರೆಂಬ ತತ್ವ ಪ್ರತಿಪಾದಿಸುತ್ತದೆ, ಗ್ರಾಮ ದೇವತೆ ನೆಲನಿಂತ್ತಿರುವ ಸುಕ್ಷೇತ್ರದಲ್ಲಿ ವಿವಿಧ ಮಠಾಧಿಧೀಶರ, ಗಣ್ಯರ ಸಾಮೂಹಿಕ ಆಶೀರ್ವಾದಗಳ ಮಧ್ಯೆ ವಿವಾಹವಾಗುವದೆ ಒಂದು ಸೌಭಾಗ್ಯ ಎಂದು ಹೇಳಿದ ಅವರು, ಗ್ರಾಮದೇವಿ ಸದ್ಬಕ್ತರು ಕಳೆದ ಹತ್ತು ಹಲವು ವರ್ಷಗಳಿಂದ ಸಾಮೂಹಿಕ ವಿವಾಹದಂತ ಸಾಮಾಜಿಕ ಕಾರ್ಯ ಅಚ್ಚುಕಟ್ಟಾಗಿ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಆದ್ದರಿಂದ ನೂತನ ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಿದ ನವದಂಪತಿಗಳು ಮಾದರಿ ಜೀವನ ನಡೆಸಬೇಕು ಎಂದು ಕಿವಿ ಮಾತು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಸುರಪಾಲಿ ಶ್ರೀಗಳಾದ ಗೀರಿಶಾನಂದ ಮಹಾರಾಜರು ಆಶೀರ್ವದಿಸಿ, ವೈವಾಹಿಕ ಜೀವನಕ್ಕೆ ಕಾಲಿಟ್ಟ ಸತಿ ಪತಿಗಳು ಭವಿಷ್ಯದ ವೈವಾಹಿಕ ಜೀವನ ಸುಖಕರವಾಗಿರಲಿ ಎಂದು ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ ಸ್ನೇಹ ಚಿರಾಯು ಬಳಗದ ವತಿಯಿಂದ ವಿವಾಹವಾದ ನವಜೋಡಿಗಳಿಗೆ ಹಣ್ಣಿನ ಸಸಿಗಳನ್ನು ನೀಡುವ ಮೂಲಕ ಪರಿಸರ ಕುರಿತು ಜನಜಾಗೃತಿ ಮೂಡಿಸಲಾಯಿತು.

ಜಾತ್ರಾ ಮಹೋತ್ಸವ ಮುನ್ನಾ ದಿನವಾದ ಸೋಮವಾರ ಗ್ರಾಮ ದೇವತೆಯನ್ನು ಸಕಲ ಮಂಗಲವಾದ್ಯ ಮೇಳಗಳೊಟ್ಟಿಗೆ ಮೆರವಣಿಗೆ ಮೂಲಕ ಪವಿತ್ರ ಗಂಗಾಸ್ಥಳಕ್ಕೆ ಕರೆದ್ಯೋದು ಗಂಗಾ ಪೂಜೆ ನೆರವೇರಿಸಿ ಭವ್ಯ ಮೆರವಣಿಗೆಯೊಂದಿಗೆ ದೇವಿಯನ್ನು ಮರಳಿ ದೇಗುಲಕ್ಕೆ ಕರೆತರಲಾಯಿತು.

ಮಂಗಳವಾರ ಉತ್ಸವ ಸ್ಥಳದಲ್ಲಿ ಪ್ರತಿಷ್ಠಾಪಿಸಲಾದ ಗ್ರಾಮ ದೇವಿ ದ್ಯಾಮವ್ವ ಮಾತೆಗೆ ಸಕಲ ಸದ್ಬಕ್ತರ ಸಮ್ಮುಖದಲ್ಲಿ ಸಾಂಪ್ರದಾಯಕವಾಗಿ ಉಡಿ ತುಂಬುವ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು. ಜಾತ್ರೆಗೆ ಆಗಮಿಸಿದ ಭಕ್ತರು ದೇವಿ ದರ್ಶನ ಪಡೆದು ಹರಕೆ ಸಲ್ಲಿಸಿ ಅನ್ನಪ್ರಸಾದ ಸ್ವೀಕರಿಸಿದರು.

ಕೊಡೇಕಲ್ ಮಹಲಿ ಮಠದ ಶ್ರೀಗಳು, ಸುರಪಾಲಿ ಶ್ರೀಗಳಾದ ಗೀರಿಶಾನಂದ ಮಹಾರಾಜರು, ಅಂಕಲಿ ಮಠದ ಶ್ರೀಗಳು, ಪೂಜ್ಯ ಗಿರಿಯಪ್ಪ ಪೂಜಾರಿ, ಅರವಿಂದ ಮಹಾರಾಜರು, ನಿಂಗಯ್ಯ ಮುತ್ಯಾ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಗದ್ದೆಪ್ಪ ಪೂಜಾರಿ, ಅಮರಣ್ಣ ಹುಡೇದ, ವ್ಹಿ.ಎಂ. ಹಿರೇಮಠ, ಅಮರಣ್ಣ ಕುಂಬಾರ, ನಾಗಯ್ಯ ಹಿರೇಮಠ, ಸೋಮಣ್ಣ ಮಾಮನಿ, ನಾಗಪ್ಪ ಕುಂಬಾರ, ತಾಪಂ ಸದಸ್ಯ ಬಾಲಚಂದ್ರ, ಶೇಖರ ನಾಯಕ, ಅಚ್ಚಪ್ಪಗೌಡ, ಸಂಗಮ್ಮ ಹಾವೇರಿ, ಗುರುದೇವಿ ಹಿರೇಮಠ, ಶಿವಪ್ಪ ಬಿರಾದಾರ, ಬಾಲಚಂದ್ರ ಸೇರಿದಂತೆ ಗ್ರಾಮದ ಪ್ರಮುಖರು ವೇದಿಕೆ ಮೇಲಿದ್ದರು.

ಲಚ್ಚಪ್ಪ ಶಿವಪೂರ ಸ್ವಾಗತಿಸಿದರು. ಕ್ಷೇತ್ರ ಸಮನ್ವಾಧಿಕಾರಿ ಅಮರೇಶ ಕುಂಬಾರ ಪ್ರಾಸ್ಥಾವಿಕವಾಗಿ ಮಾತನಾಡಿದರು. ಮಲ್ಲಣ್ಣ ಗೂಳಿ ನಿರೂಪಿಸಿದರು. ಸಿಆರ್‌ಪಿ ಶರಣು ಬಿರಾದಾರ ವಂದಿಸಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.