ಗೋದಾಮಿನಲ್ಲೇ ಗ್ರಂಥಾಲಯ!

ಪ್ರಭುಲಿಂಗ ಲೀಲೆ ಕೃತಿ ರಚಿಸಿದ ಕೋಟುಮಚಗಿಯಲ್ಲಿ ಗ್ರಂಥಾಲಯಕ್ಕಿಲ್ಲ ಸುವ್ಯವಸ್ಥಿತ ಕಟ್ಟದ

Team Udayavani, Oct 17, 2019, 4:00 PM IST

17-October-17

„ಸಿಕಂದರ ಎಂ. ಆರಿ
ನರೇಗಲ್ಲ: “ದೇವಸ್ಥಾನ ಕಟ್ಟುವುದಕ್ಕಿಂತ ಒಂದು ಗ್ರಂಥಾಲಯ ಕಟ್ಟುವುದೇ ಲೇಸು’ ಎನ್ನುತ್ತಾರೆ ಹಿರಿಯರು. ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು. ಇಲ್ಲಿ ದೊರೆಯುವ ಪುಸ್ತಕ ಗಳಿಂದ ದೊರೆಯುವ ಜ್ಞಾನ ದೊಡ್ಡದು. ಇದಕ್ಕೆ ಉತ್ತಮ ವಾತಾವರಣವೂ ಬೇಕು. ಸ್ವತ್ಛ-ಸುಂದರ ಪರಿಸರದಲ್ಲಿ ಕುಳಿತು ಓದಿದರೆ ಜ್ಞಾನ ಸಂಪಾದನೆ ಸಾಧ್ಯ.

ಕೋಟುಮಚಗಿಯಲ್ಲಿರುವ ಗ್ರಂಥಾಲಯ ಇದಕ್ಕೆ ಅಪವಾದ ಎನ್ನುವಂತಿದೆ. ಗ್ರಾಮದ ದುರ್ಗಾದೇವಿ ದೇವಸ್ಥಾನ ಹತ್ತಿರವಿರುವ ಇಲ್ಲಿರುವ ಗ್ರಂಥಾಲಯ ಕಳೆದ 27 ವರ್ಷಗಳಿಂದ ಗೋದಾಮಿನಲ್ಲೇ ಕಾರ್ಯ ನಿರ್ವಹಿಸುತ್ತಿದೆ.

ಇಲ್ಲಿಯವರೆಗೂ ಸ್ವಂತ ಕಟ್ಟಡ ಹೊಂದದೇ ಇರುವುದು ಓದುಗರ ದೌರ್ಭಾಗ್ಯ. ಮಧ್ಯಾಹ್ನ ಹಾಗೂ ಸಂಜೆ ವೇಳೆ ಇಲ್ಲಿ ಜನ ಸಂಚಾರ ಕಡಿಮೆ ಇರುವುದರಿಂದ ಇಲ್ಲಿ ಅನೈತಿಕ ಚಟುಚಟಿಕೆಗಳು ನಡೆಯುವುದಕ್ಕೆ ಕಾರಣವಾಗಿರುವುದು ಪ್ರಜ್ಞಾವಂತರ ನೋವಾಗಿದೆ.

ಸುಮಾರು 10 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಕೋಟುಮಚಗಿ ಗ್ರಾಮದಲ್ಲಿ ಎರಡು ಪ್ರೌಢಶಾಲೆಗಳು, 5 ಪ್ರಾಥಮಿಕ ಶಾಲೆಗಳು, ಗ್ರಾಮ ಪಂಚಾಯಿತಿ,1 ಆಯುರ್ವೇದಿಕ್‌ ಆಸ್ಪತ್ರೆ, ಪಶು ಚಿಕಿತ್ಸಾಲಯ, ಆರೋಗ್ಯ ಕೇಂದ್ರ, 2 ಹಾಲಿನ ಡೇರಿ ಸೇರಿದಂತೆ ವಿವಿಧ ಇಲಾಖೆಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಲಿವೆ.

ಚಾಮರಸ ಕವಿ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರುವ ಸೊಮೇಶ್ವರ ದೇವಸ್ಥಾನದಲ್ಲಿ “ಪ್ರಭುಲಿಂಗ ಲೀಲೆ’ ಕೃತಿ ರಚಿಸಿರುವದರಿಂದ ಈ ಗ್ರಾಮ ಸಾಕಷ್ಟು ಖ್ಯಾತಿ ಹೊಂದಿದೆ. ಇಲ್ಲಿ ಸಾಕಷ್ಟು ಸಂಖ್ಯೆಯ ವಿದ್ಯಾರ್ಥಿಗಳು, ಇತಿಹಾಸಕಾರರು ಆಗಮಿಸುತ್ತಾರೆ. ಇಂತಹ ಊರಲ್ಲಿ ಒಂದು ಸುಸಜ್ಜಿತ ಗ್ರಂಥಾಲಯ ಇಲ್ಲವೆಂದರೆ ಹೇಗೆ ಎನ್ನುವಂತಾಗಿದೆ. 4 ಸಾವಿರಕ್ಕೂ ಹೆಚ್ಚು ಪುಸ್ತಕಗಳಿವೆ: 1992ರಲ್ಲಿ ಪ್ರಾರಂಭವಾದ ಈ ಗ್ರಂಥಾಲಯದಲ್ಲಿ ಮೊದಲು ಸುಮಾರು 1000 ಪುಸ್ತಕಗಳಿದ್ದವು.

ನಂತರದಲ್ಲಿ ರಾಮಕ್ಕ ಪದ್ಮಕ್ಕ ಗ್ರಂಥಾಲಯದಿಂದ ಸುಮಾರು 1000 ಕ್ಕೂ ಹೆಚ್ಚು ಪುಸ್ತಕಗಳು ಬಂದವು. ಇಲಾಖೆಯಿಂದ ಆಗೊಮ್ಮೆ ಈಗೊಮ್ಮೆ ಬಂದಿರುವುದು ಸೇರಿ ಇಂದು ಸುಮಾರು 4000ಕ್ಕೂ ಹೆಚ್ಚು ಪುಸ್ತಕಗಳು ಇವೆ. ಸಾಮಾಜಿಕ, ರಾಜಕೀಯ, ಆರ್ಥಿಕ ಸೇರಿದಂತೆ ವಿವಿಧ ವಿಷಯಗಳ ಕುರಿತಾದ, ವಿದ್ಯಾರ್ಥಿಗಳಿಗೆ ಅನುಕುಲವಾಗುವಂಥ ಹಲವಾರು ಪುಸ್ತಕಗಳಿವೆ.

ಎರಡೇ ದಿನಪತ್ರಕೆ ಬರುತ್ತವೆ: ಇಲ್ಲಿ ದಿನನಿತ್ಯ ರಾಜ್ಯಮಟ್ಟದ ಎರಡು ದಿನಪತ್ರಿಕೆಗಳು ಮಾತ್ರ ಬರುತ್ತವೆ. ಇದಕ್ಕೆ ಸರ್ಕಾರದಿಂದ ಕೇವಲ ತಿಂಗಳಿಗೆ 400 ರೂ. ಮಾತ್ರ ಅನುದಾನ ಬರುತ್ತಿದ್ದು, ಉಳಿದಂತೆ ಯಾವುದೇ ವಾರಪತ್ರಿಕೆ, ಮಾಸಪತ್ರಿಕೆಗಳು ಲಭ್ಯವಿರುವುದಿಲ್ಲ. ಸದ್ಯ ಗ್ರಂಥಾಲಯಕ್ಕೆ ಸಿಬ್ಬಂದಿ ಕೊರತೆಯಿಲ್ಲ. ಓದುಗರಿಗೆಂದು ನಿಗದಿ ಮಾಡಿರುವ ಸ್ಥಳ ಇಕ್ಕಟ್ಟಾಗಿರುವುದರಿಂದ ತೀವ್ರ ತೊಂದರೆಯಾಗುತ್ತಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.