ಕೆರೆ ಒಡಲು ಸೇರಿದ ಕಸ
3.22 ಎಕರೆ ವಿಸ್ತೀರ್ಣದ ಕೆರೆ ಸದ್ಯ ಕಸ ವಿಲೇವಾರಿ ತಾಣ
Team Udayavani, Aug 12, 2019, 12:56 PM IST
ನರೇಗಲ್ಲ: ಕೋಚಲಾಪುರ ಅಗಸರ ಕೆರೆಯಲ್ಲಿ ಕಸ ಹಾಕಲಾಗಿದೆ.
ನರೇಗಲ್ಲ: ಒಂದು ಕಾಲಕ್ಕೆ ಪಟ್ಟಣ ಸೇರಿದಂತೆ ಮಜರೆ ಗ್ರಾಮಗಳ ಮಡಿವಾಳ ಜನಾಂಗದವರಿಗೆ ಬಟ್ಟೆ ತೊಳೆಯಲು ಆಸರೆಯಾಗಿದ್ದ ಕೋಚಲಾಪುರದ ಅಗಸರ ಕೆರೆಗೆ ಈಗ ಕಸ ಸೇರುತ್ತಿದೆ.
ಸುಮಾರು 3.22 ಎಕರೆ ವಿಸ್ತೀರ್ಣದ ಕೆರೆ ಸದ್ಯ ಕಸ ವಿಲೇವಾರಿಯ ತಾಣವಾಗಿದೆ. ಪ್ರತಿನಿತ್ಯ ರಾಶಿ ರಾಶಿ ಕಸ ಕೆರೆಯೊಡಲು ಸೇರುತ್ತಿದ್ದು, ಕೆರೆಯಂಗಳ ವಿಷದ ಗರ್ಭವಾಗಿ ಪರಿವರ್ತನೆಯಾಗುತ್ತಿದೆ.
ಕೆರೆ ಅಂಗಳ ಮತ್ತು ನೀರಿನ ಮೂಲಗಳ ಬಳಿ ಕಸ ವಿಲೇವಾರಿ ಮಾಡಬಾರದು ಎಂಬ ನಿಯಮವಿದ್ದರೂ ಕೋಚಲಾಪುರ ಕೆರೆಯಲ್ಲಿ ಕಸ ವಿಲೇವಾರಿ ಎಗ್ಗಿಲ್ಲದೆ ಸಾಗಿದೆ. ಗ್ರಾಮದ ಪ್ರತಿಯೊಂದು ಮನೆ ಹಾಗೂ ಚರಂಡಿ ತ್ಯಾಜ್ಯವನ್ನು ಕೆರೆಯಲ್ಲಿ ಸುರಿಯಲಾಗುತ್ತಿದೆ. ಖಾಲಿ ಬಾಟಲಿ, ಪ್ಲಾಸ್ಟಿಕ್ ಚೀಲ ಸೇರಿದಂತೆ ತ್ಯಾಜ್ಯವನ್ನು ತುಂಬಿಸಿ ಕೆರೆಗೆ ಎಸೆಯಲಾಗುತ್ತದೆ. ಮತ್ತೂಂದೆಡೆ ಹಳೆ ಕಟ್ಟಡಗಳ ಗಾರೆ, ಇಟ್ಟಿಗೆಯಂತಹ ನಿರುಪಯುಕ್ತ ವಸ್ತುಗಳನ್ನು ಕೆರೆ ದಂಡೆಯಲ್ಲಿ ಸುರಿಯಲಾಗಿದೆ. ಕೆರೆ ರಕ್ಷಿಸಬೇಕಾದ ಸಣ್ಣ ನೀರಾವರಿ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕಣ್ಣುಚ್ಚಿ ಕುಳಿತಿದ್ದಾರೆ.
ಕೆರೆಯಂಗಳದಲ್ಲಿ ಸುರಿಯಲಾದ ಕಸದ ರಾಶಿ ಬಳಿ ನಾಯಿ, ಹಂದಿ ಹಾಗೂ ಸೊಳ್ಳೆ ಕಾಟ ಹೆಚ್ಚಿದೆ. ಇದರಿಂದ ನೈರ್ಮಲ್ಯ ಸಮಸ್ಯೆ ಎದುರಾಗಿದ್ದು, ಸುತ್ತಮುತ್ತಲಿನ ಬಡಾವಣೆಗಳ ಜನರಲ್ಲಿ ಸಾಂಕ್ರಾಮಿಕ ರೋಗ ಭೀತಿ ಮನೆ ಮಾಡಿದೆ. ಪಟ್ಟಣದ ದ್ಯಾಂಪುರ ರಸ್ತೆಯಲ್ಲಿ ನಿರ್ಮಿಸಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕೊಂಡೊಯ್ಯುವುದನ್ನು ಬಿಟ್ಟು ಗ್ರಾಮದ ಅಗಸರ ಕೆರೆಯಲ್ಲಿ ತ್ಯಾಜ್ಯ ಹಾಕುತ್ತಿದ್ದಾರೆ. ಪಪಂ ಅಧಿಕಾರಿಗಳು ತ್ಯಾಜ್ಯವನ್ನು ಕೂಡಲೇ ಸ್ವಚ್ಛಗೊಳಿಸಿ ಕೆರೆ ರಕ್ಷಣೆ ಮಾಡುವುದಕ್ಕೆ ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್