ನವರಾತ್ರಿ ಉತ್ಸವಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಿ : ಶಾಸಕ ಕಾಮತ್ ಸೂಚನೆ
Team Udayavani, Sep 21, 2019, 3:16 PM IST
ಮಂಗಳೂರು: ಇದೇ ಸೆಪ್ಟೆಂಬರ್ 28 ರಿಂದ ಮಂಗಳೂರು ಮಹಾನಗರದಲ್ಲಿ ನವರಾತ್ರಿ ಹಬ್ಬದ ಆಚರಣೆಗಳು ಪ್ರಾರಂಭವಾಗಲಿದ್ದು, ವಿವಿಧ ಸೇವಾ ಸಮಿತಿಗಳಿಂದ ಹಲವೆಡೆ ಸಾರ್ವಜನಿಕ ಶಾರದಾ ಮಹೋತ್ಸವಗಳು ನಡೆಯಲಿವೆ. ಈ ಹಿನ್ನಲೆಯಲ್ಲಿ ಉತ್ಸವಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಸಂಬಂಧಪಟ್ಟ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೈಸೂರಿನಂತೆ ಅದ್ದೂರಿಯಾಗಿ ಇಲ್ಲಿ ಕೂಡ ಮಂಗಳೂರು ದಸರಾ ಉತ್ಸವವನ್ನು ಆಚರಿಸಲಾಗುತ್ತದೆ. ಅದೇ ರೀತಿಯಲ್ಲಿ ವಿವಿಧ ದೇವಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆದ್ದರಿಂದ ಯಾವುದೇ ಯುವಕ ಮಂಡಲಗಳು, ಶಾರದಾ ಮಹೋತ್ಸವ ಸೇವಾ ಸಮಿತಿಯವರು ಸಾರ್ವಜನಿಕ ಶಾರದಾ ಮಹೋತ್ಸವವನ್ನು ಆಚರಿಸಲು ವಿದ್ಯುತ್ ಸಂಪರ್ಕದ ಬಗ್ಗೆ ಅರ್ಜಿ ಸಲ್ಲಿಸಿದ್ದಲ್ಲಿ ಮೆಸ್ಕಾಂ ಕಚೇರಿಯಿಂದ ಯಾವುದೇ ವಿಳಂಬ ಮಾಡದೇ ಮಂಜೂರು ಮಾಡಬೇಕು.
ಹಾಗೆ ಶಾರದಾ ಮಾತೆಯ ಶೋಭಾಯಾತ್ರೆ ಮಂಗಳೂರಿನ ಹಲವು ಪ್ರಮುಖ ಬೀದಿಗಳಲ್ಲಿ ಸಂಚರಿಸುವುದರಿಂದ ಎಲ್ಲಾ ರಸ್ತೆಗಳಲ್ಲಿ ಯಾವುದೇ ಹೊಂಡ, ಗುಂಡಿಗಳಿದ್ದಲ್ಲಿ ಅದನ್ನು ತಕ್ಷಣ ಮುಚ್ಚಿ ಶೋಭಾಯಾತ್ರೆ ಸರಾಗವಾಗಿ ಸಾಗಲು ಅನುಕೂಲವಾಗುವಂತೆ ಮಂಗಳೂರು ಮಹಾನಗರ ಪಾಲಿಕೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು.
ಇನ್ನು ಶೋಭಾಯಾತ್ರೆ ಅಥವಾ ಇತರ ಯಾವುದೇ ಅನುಮತಿ ಪೊಲೀಸ್ ಕಮೀಷನರೇಟ್ ಕಚೇರಿಯಿಂದ ಕೊಡಲು ಸಹಕರಿಸಬೇಕೆಂದು ಎಂದು ಶಾಸಕ ಡಿ ವೇದವ್ಯಾಸ ಕಾಮತ್ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ