ಬಿತ್ತನೆ ಶೇಂಗಾ ಖರೀದಿಗೆ ಹರಸಾಹಸ


Team Udayavani, Jul 15, 2019, 1:44 PM IST

15-July-28

ನಾಯಕನಹಟ್ಟಿ: ಬಿತ್ತನೆ ಶೇಂಗಾಕ್ಕಾಗಿ ರೈತ ಸಂಪರ್ಕ ಕೇಂದ್ರ ಎದುರು ಸರದಿ ಸಾಲಿನಲ್ಲಿ ಕುಳಿತಿರುವ ರೈತರು.

ನಾಯಕನಹಟ್ಟಿ: ಸೋಮವಾರ ವಿತರಿಸುವ ಶೇಂಗಾ ಬಿತ್ತನೆ ಬೀಜಕ್ಕಾಗಿ ಭಾನುವಾರ ರಾತ್ರಿಯೇ ರೈತರು ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದು, ಬಿತ್ತನೆ ಬೀಜ ಪಡೆಯಲು ಅನ್ನದಾತರು ಹರಸಾಹಸ ಪಡುವಂತಾಗಿದೆ.

ಹದಿನೈದು ದಿನಗಳಿಂದ ಶೇಂಗಾ ಬಿತ್ತನೆ ಬೀಜ ವಿತರಣೆ ವ್ಯವಸ್ಥೆ ಸುಧಾರಣೆಯಾಗುತ್ತಿಲ್ಲ. ನಾಯಕನಹಟ್ಟಿ ಹೋಬಳಿಯಲ್ಲಿನ 9 ಗ್ರಾಪಂಗಳಲ್ಲಿ ಪ್ರತಿ ದಿನ ಮೂರು ಗ್ರಾಪಂಗಳಿಗೆ ಮಾತ್ರ ಬಿತ್ತನೆ ಬೀಜ ನೀಡಲಾಗುತ್ತಿದೆ. ನಂತರ ಇದೇ ರೀತಿಯ ಪುನಾರಾವರ್ತನೆಯಾಗುತ್ತದೆ. ಕೃಷಿ ಇಲಾಖೆ ಪ್ರತಿದಿನ 150 ರಿಂದ 200 ರೈತರಿಗೆ ಮಾತ್ರ ಬಿತ್ತನೆ ಬೀಜ ವಿತರಿಸುತ್ತಿದೆ. ಹೋಬಳಿಯಲ್ಲಿ 21 ಸಾವಿರ ಹೆಕ್ಟೇರ್‌ ಶೇಂಗಾ ಬಿತ್ತನೆ ಕ್ಷೇತ್ರವಿದೆ. ಪಹಣಿಯನ್ನು ಹೊಂದಿರುವ ಸುಮಾರು 15 ಸಾವಿರ ರೈತರಿಗೆ ಶೇಂಗಾ ಬಿತ್ತನೆ ಬೀಜ ವಿತರಣೆ ಆಗಬೇಕಾಗಿದೆ.

ಜೂನ್‌ ತಿಂಗಳು ಶೇಂಗಾ ಬಿತ್ತನೆ ಸಕಾಲವಾಗಿದೆ. ಆದರೆ ಇಲ್ಲಿನ ಪ್ರದೇಶದಲ್ಲಿ ಇಲ್ಲಿಯವರೆಗೂ ಬಿತ್ತನೆಗೆ ಸಾಕಾಗುವಷ್ಟು ಮಳೆಯಾಗಿಲ್ಲ. ಈ ವಾರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಬಿತ್ತನೆ ದಾವಂತದಲ್ಲಿ ರೈತರಿದ್ದಾರೆ. ಹೀಗಾಗಿ ಹೇಗಾದರೂ ಮಾಡಿ ಬಿತ್ತನೆ ಬೀಜ ಪಡೆಯಬೇಕು ಎನ್ನುವ ಹಠಕ್ಕಾಗಿ ರಾತ್ರಿಯೇ ಬಂದು ರೈತ ಸಂಪರ್ಕ ಕೇಂದ್ರದಲ್ಲಿ ಸರದಿ ಸಾಲಿನಲ್ಲಿ ನಿಂತಿದ್ದಾರೆ.

ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಪಟ್ಟಣದ ಹೊರ ವಲಯದಲ್ಲಿದೆ. ಕಚೇರಿ ಆವರಣದಲ್ಲಿ ಯಾವುದೇ ವಿದ್ಯುತ್‌ ದೀಪಗಳಿಲ್ಲ. ಚಳಿ, ಮಳೆಯ ನಡುವೆ ರೈತರು, ರೈತ ಮಹಿಳೆಯರು ಕಚೇರಿ ಮುಂಭಾಗಿಲಿನಲ್ಲಿ ಮಲಗಿದ್ದಾರೆ. ನೆಲವೇ ಹಾಸಿಗೆ, ತಂದಿದ್ದ ಟವೆಲ್ ಅಥವ ಸೀರೆಯೇ ಹೊದಿಕೆಯಾಗಿದೆ. ರೈತ ಸಂಪರ್ಕ ಕೇಂದ್ರದ ಮುಂದೆ ದೀಪ, ನೀರು, ಶೌಚಾಲಯ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲ. ಹೀಗಿದ್ದರೂ ನೂರಾರು ರೈತರು ರಾತ್ರಿಯೇ ಬಂದು ಬೆಳಗ್ಗೆ ವಿತರಣೆ ಮಾಡುವ ಶೇಂಗಾ ಬಿತ್ತನೆ ಬೀಜಕ್ಕಾಗಿ ಕಾದು ಕುಳಿತಿದ್ದಾರೆ. ಅಬ್ಬೇನಹಳ್ಳಿ, ಮಲ್ಲೂರಹಳ್ಳಿ, ಎನ್‌.ಮಹಾದೇವಪುರ ಗ್ರಾಮದ ನೂರಾರು ರೈತರು ಬೆಳಗ್ಗೆ 10 ಗಂಟೆಯಾಗುವುದನ್ನೇ ಕಾಯುತ್ತಿದ್ದಾರೆ. ಹದಿನೈದು ದಿನಗಳಿಂದ ಶೇಂಗಾ ಬಿತ್ತನೆ ಬೀಜಕ್ಕಾಗಿ ಸುತ್ತಾಡಿ ರೋಸಿ ಹೋಗಿದ್ದೇವೆ ಎನ್ನುತ್ತಾರೆ ತಿಪ್ಪೇಸ್ವಾಮಿ, ಶಂಕ್ರಪ್ಪ, ಚೌಳಕೆರೆ ಗುಂಡಪ್ಪ, ಓಬಮ್ಮ ಮತ್ತಿತರರಿರು. ಇನ್ನಾದರು ಇಲಾಖೆ ರೈತರಿಗೆ ಶೀಘ್ರವಾಗಿ ಶೇಂಗಾ ವಿತರಣೆ ವ್ಯವಸ್ಥೆ ಒದಗಿಸಬೇಕು ಎನ್ನುವುದು ರೈತರ ಅಳಲು.

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.