38.50 ಲಕ್ಷ ರೂ. ಕಾಣಿಕೆ ಸಂಗ್ರಹ

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲದಲ್ಲಿ ಹುಂಡಿ ಹಣ ಎಣಿಕೆ

Team Udayavani, Oct 16, 2019, 4:07 PM IST

16-October-20

ನಾಯಕನಹಟ್ಟಿ: ಮಧ್ಯ ಕರ್ನಾಟಕದ ಪ್ರಮುಖ ದೇವಾಲಯವಾಗಿರುವ ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಮಂಗಳವಾರ ಹುಂಡಿ ಎಣಿಕಾ ಕಾರ್ಯ ನಡೆಯಿತು. ಒಟ್ಟು 38.50 ಲಕ್ಷ ರೂ. ಕಾಣಿಕೆ ಸಂಗ್ರಹಗೊಂಡಿದೆ.

ಒಳಮಠದ ಹುಂಡಿಗಳಲ್ಲಿ 30,51,395 ರೂ., ಹೊರಮಠದ ಹುಂಡಿಗಳಲ್ಲಿ 5,13,270 ರೂ. ಹಾಗೂ ದಾಸೋಹದ ಹುಂಡಿಯಲ್ಲಿ 2,85,415 ರೂ. ಸೇರಿದಂತೆ ಎರಡು ದೇವಾಲಯ ಹಾಗೂ ದಾಸೋಹದ  ಹುಂಡಿಗಳಲ್ಲಿ ಒಟ್ಟು 38,50,080 ರೂ. ಸಂಗ್ರಹವಾಗಿದೆ.

ಕಳೆದ ವರ್ಷ ನವೆಂಬರ್‌ 22 ರಂದು ಕಾಣಿಕೆ ಎಣಿಕೆ ಮಾಡಿದಾಗ 45,23,301 ರೂ. ದೇಣಿಗೆ ಹಣವನ್ನು ಭಕ್ತರು ನೀಡಿದ್ದರು. ಈ ಬಾರಿ ಕಳೆದ ವರ್ಷಕ್ಕಿಂತ ಒಂದು ತಿಂಗಳು ಮುಂಚೆ ಹುಂಡಿ ಹಣ ಎಣಿಕೆ ಮಾಡಲಾಗಿದೆ. ಹೀಗಾಗಿ 6,73,221 ರೂ. ಕಡಿಮೆ ಹಣ ಸಂಗ್ರಹವಾಗಿದೆ.

ಬೆಳ್ಳಿ ವಸ್ತುಗಳೇ ಹೆಚ್ಚು: ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಪ್ರಮಾಣದಲ್ಲಿ ಬೆಳ್ಳಿ ವಸ್ತುಗಳನ್ನು ಭಕ್ತರು ಹುಂಡಿಗೆ ಹಾಕಿದ್ದರು. ಬೆಳ್ಳಿಯ ಕಣ್ಣು, ತೊಟ್ಟಿಲು, ನಾಗರ ಹೆಡೆ, ಉಂಗುರ, ಛತ್ರಿ, ಪಾದುಕೆ, ತಟ್ಟೆ, ಇಷ್ಟಲಿಂಗದ ಕರಡಿಗೆ, ಮೀಸೆ ಸೇರಿದಂತೆ ನಾನಾ ವಸ್ತುಗಳಿದ್ದವು. ಮಕ್ಕಳಾಗಲಿ ಎಂದು ಹರಕೆ ಸಲ್ಲಿಸಿದವರು ಬೆಳ್ಳಿ ತೊಟ್ಟಿಲನ್ನು ಅರ್ಪಿಸುತ್ತಾರೆ.

ಹೀಗಾಗಿ 14 ಬೆಳ್ಳಿ ತೊಟ್ಟಿಲು ಹುಂಡಿಯಲ್ಲಿದ್ದವು. ಇವುಗಳ ಜತೆಗೆ ಬಂಗಾರದ ಉಂಗುರ, ಚೈನ್‌ ಸೇರಿದಂತೆ ನಾನಾ ವಸ್ತುಗಳಿದ್ದವು. ಅಲ್ಲದೆ ಸಿಂಗಪುರದ 20 ಸೆಂಟ್‌ ನಾಣ್ಯ ಹಾಗೂ ನ್ಯೂಜಿಲ್ಯಾಂಡ್‌ ನಾಣ್ಯಗಳು ಹುಂಡಿಯಲ್ಲಿ ಕಂಡು ಬಂದವು. ಚಲಾವಣೆಯನ್ನು
ನಿಷೇಧಿಸಲಾಗಿರುವ 500 ರೂ. ಮೌಲ್ಯದ 11 ನೋಟುಗಳನ್ನು ಭಕ್ತರು ಹುಂಡಿಗೆ ಸಮರ್ಪಿಸಿದ್ದರು.

ಹಲವಾರು ಭಕ್ತರು ಬಂಗಾರ ಹಾಗೂ ಬೆಳ್ಳಿಯ ವಸ್ತುಗಳನ್ನು ರಶೀದಿ ಸಹಿತವಾಗಿ ಹುಂಡಿಗೆ ಹಾಕಿದ್ದು ಕಂಡು ಬಂತು. ಈ ಬಾರಿ ದೊಡ್ಡ ಪ್ರಮಾಣದಲ್ಲಿ ಚಿಲ್ಲರೆ ನಾಣ್ಯಗಳು ಸಂಗ್ರಹವಾಗಿರುವುದು ವಿಶೇಷ.

ಹೊರಮಠದಲ್ಲಿ 1,68,605 ರೂ., ಒಳಮಠದಲ್ಲಿ 51,275 ರೂ. ಹಾಗೂ ದಾಸೋಹ ಹುಂಡಿಯಲ್ಲಿ 6,575 ರೂ. ಸೇರಿದಂತೆ ಒಟ್ಟು 2,26,455 ರೂ. ಮೌಲ್ಯದ ಚಿಲ್ಲರೆ ನಾಣ್ಯಗಳು ಸಂಗ್ರಹವಾಗಿದ್ದವು. ಭಾರೀ ಪ್ರಮಾಣದ ಚಿಲ್ಲರೆ ಹಣವನ್ನು ಬ್ಯಾಂಕ್‌ ಸಿಬ್ಬಂದಿಗಳು ನಾಣ್ಯದ ಅವಶ್ಯಕತೆ ಇರುವ ಗ್ರಾಹಕರಿಗೆ ವಿತರಿಸಿದರು.

ಒಂದು ತಿಂಗಳು ಮುಂಚೆ ಎಣಿಕೆ ಏಕೆ?: ಕಳೆದ ಸೆ. 30 ರಂದು ಹೊರಮಠದ ಹುಂಡಿ ಹಣವನ್ನು ಕಳುವು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಮುಂಚೆ ಹಣವನ್ನು ಎಣಿಕೆ ಮಾಡಲಾಗಿದೆ. ವರ್ಷದಲ್ಲಿ ಮೂರು ಬಾರಿ ಹುಂಡಿ ಹಣವನ್ನು ಎಣಿಕೆ ಮಾಡಲಾಗುತ್ತದೆ. ಹುಂಡಿ ಎಣಿಕೆ ಕಾರ್ಯದ ವೀಡಿಯೋ ಚಿತ್ರೀಕರಣ ಮಾಡಲಾಯಿತು. ಸಂಗ್ರಹವಾದ ಹಣವನ್ನು ಸ್ಥಳೀಯ ಕೆನರಾ ಬ್ಯಾಂಕ್‌ನಲ್ಲಿನ ತಿಪ್ಪೇರುದ್ರಸ್ವಾಮಿ ದೇವಾಲಯದ ಖಾತೆಗೆ ಜಮಾ ಮಾಡಲಾಯಿತು. ಎಣಿಕೆ ಕಾರ್ಯದಲ್ಲಿ ಕಂದಾಯ ಇಲಾಖೆಯ 70 ಸಿಬ್ಬಂದಿ, ಕೆನರಾ ಬ್ಯಾಂಕ್‌ ಸಿಬ್ಬಂದಿ ಹಾಗೂ ದೇವಾಲಯ ಸಿಬ್ಬಂದಿ ಪಾಲ್ಗೊಂಡಿದ್ದರು.

ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ, ದೇವಾಲಯದ ಇಒ ಎಸ್‌.ಪಿ.ಬಿ ಮಹೇಶ್‌, ಉಪ ತಹಶೀಲ್ದಾರ್‌ ಟಿ. ಜಗದೀಶ್‌, ಮುಜರಾಯಿ ತಹಶೀಲ್ದಾರ್‌ ಸಮೀವುಲ್ಲಾ, ಮುಜರಾಯಿ ಇಲಾಖೆ ಸಿಬ್ಬಂದಿ ರಂಗಪ್ಪ, ರೇಣುಕಮ್ಮ, ದೇವಾಲಯ ಸಮಿತಿ ಅಧ್ಯಕ್ಷ ಜೆ.ಪಿ. ರವಿಶಂಕರ್‌, ವ್ಯವಸ್ಥಾಪನ ಸಮಿತಿ ಸದಸ್ಯರಾದ ರುದ್ರಮುನಿ, ನಾಗಣ್ಣ, ಮುನಿಯಪ್ಪ, ಗೋವಿಂದರಾಜ್‌, ಎಸ್‌.ವಿ.ಟಿ ರೆಡ್ಡಿ, ಹಂಸವೇಣಿ, ಕೆನರಾ ಬ್ಯಾಂಕ್‌ ವ್ಯವಸ್ಥಾಪಕ ಈಶ್ವರಪ್ಪ, ಸಿಬ್ಬಂದಿ ಸತೀಶ್‌, ವಿರೂಪಾಕ್ಷಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.