ಶೋಷಣೆಮುಕ್ತ ಸಮಾಜಕ್ಕೆ ಕಾನೂನು ಅಗತ್ಯ

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಇವೆ ಸಮಾನ ಹಕ್ಕುಗಳು•ಸಂಚಾರಿ ನಿಯಮ ಪಾಲಿಸಿ: ದೇವೇಂದ್ರ

Team Udayavani, Sep 9, 2019, 3:03 PM IST

9-Sepctember-18

ನಾಯಕನಹಟ್ಟಿ: ಮಲ್ಲೂರಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಚಳ್ಳಕೆರೆ ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್‌ ಮಾತನಾಡಿದರು.

ನಾಯಕನಹಟ್ಟಿ: ಶೋಷಣೆಮುಕ್ತ ಸಮಾಜಕ್ಕೆ ಸಾಮಾನ್ಯ ಕಾನೂನುಗಳು ಅಗತ್ಯ ಎಂದು ಚಳ್ಳಕೆರೆ ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್‌ ಹೇಳಿದರು.

ಮಲ್ಲೂರಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ರಥ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಎಲ್ಲ ಜನರು ಸಾಮಾನ್ಯ ಕಾನೂನುಗಳ ಬಗ್ಗೆ ಅರಿವು ಹೊಂದಿರಬೇಕು. ಸಂವಿಧಾನದಲ್ಲಿ ಹಕ್ಕುಗಳ ಜತೆ ಕರ್ತವ್ಯಗಳನ್ನು ನೀಡಲಾಗಿದೆ. ಎಲ್ಲರಿಗೂ ಕಾನೂನು ರೀತಿಯ ಹಕ್ಕುಗಳನ್ನು ನೀಡಲಾಗಿದೆ. ಆದರೆ ಇವುಗಳನ್ನು ಪಾಲಿಸಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ. ವ್ಯಕ್ತಿಗಳಲ್ಲಿರುವ ಅಮಾಯಕತೆ, ಅನಕ್ಷರತೆ ಕಂಡುಕೊಂಡ ವ್ಯಕ್ತಿಗಳು ಮೋಸ ಮಾಡುವ ಸಾಧ್ಯತೆ ಹೆಚ್ಚು. ದೈನಂದಿನ ಜೀವನದಲ್ಲಿ ಸಣ್ಣಪುಟ್ಟ ಕಾನೂನುಗಳ ಅರಿವು ಅಗತ್ಯವಾಗಿದೆ. ಬಾಲ್ಯ ವಿವಾಹದ ವಯಸ್ಸು, ರಸ್ತೆ ಸಂಚಾರ ನಿಯಮಗಳು, ವರದಕ್ಷಿಣೆ ಕಾನೂನುಗಳು, ಆಸ್ತಿ ಸ್ವತ್ತಿನ ಹಕ್ಕುಗಳು ಸೇರಿದಂತೆ ಹಲವು ವಿಷಯಗಳಿಗೆ ಕಠಿಣ ಕಾನೂನುಗಳಿವೆ. ಇವುಗಳನ್ನು ಬಗ್ಗೆ ಸ್ಪಷ್ಟ ಅರಿವನ್ನು ಹೊಂದಿರಬೇಕು. ಪ್ರಾಥಮಿಕ ಹಂತದ ಕಾನೂನುಗಳ ಮಾಹಿತಿ ಹೊಂದಿದ್ದರೆ ಶೋಷಣೆ ಕಡಿಮೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.

ವಕೀಲ ಸಂಘದ ತಾಲೂಕು ಅಧ್ಯಕ್ಷ ಕೆ.ಎಂ. ನಾಗರಾಜ್‌ ಮಾತನಾಡಿ, ಸುವ್ಯವಸ್ಥಿತ ಸಮಾಜ ನಿರ್ಮಾಣಕ್ಕೆ ಕಾನೂನು ಬದ್ಧ ವ್ಯವಸ್ಥೆ ಅಗತ್ಯವಾಗಿದೆ. ಎಲ್ಲ ಜನರು ಎಲ್ಲ ಕಾನೂನುಗಳನ್ನು ಅರಿಯಬೇಕಾಗಿಲ್ಲ. ಆದರೆ ಸಾಮಾನ್ಯವಾದ ಹಾಗೂ ಕನಿಷ್ಟ ನಿಯಮಗಳ ಅರಿವು ಅಗತ್ಯ. ಕಾನೂನು ದೊಡ್ಡ ರೀತಿಯ ಪುಸ್ತಕವಲ್ಲ. ಇದು ಸಾಮಾನ್ಯ ಜ್ಞಾನವಾಗಿದೆ. ಇನ್ನೊಬ್ಬರಿಗೆ ತೊಂದರೆಯಾಗದಂತೆ ನಮ್ಮ ಬದುಕು ಸಾಗಿಸಬೇಕು. ಸಾಮಾನ್ಯ ಜ್ಞಾನದ ಅಂಶಗಳನ್ನು ಸೇರಿಸಿ ಕಾನೂನು ಚೌಕಟ್ಟು ನೀಡಲಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮನಾದ ಹಕ್ಕುಗಳಿವೆ. ಇನ್ನೊಬ್ಬರ ಹಕ್ಕುಗಳನ್ನು ಕಸಿದುಕೊಳ್ಳುವುದು ಕಾನೂನಿನ ಉಲ್ಲಂಘನೆಯಾಗುತ್ತದೆ. ಶಾಂತಿ, ಸಮಾಧಾನದ ಜೀವನಕ್ಕೆ ಕಾನೂನುಗಳು ಅಗತ್ಯ. ಅವುಗಳನ್ನು ಗೌರವಿಸುವ ಜವಾಬ್ದಾರಿಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ವಕೀಲ ಟಿ.ಎಸ್‌.ನಾಗರಾಜ್‌ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಮಾತನಾಡಿ, ಬಾಲ್ಯವಿವಾಹ ಅಪರಾಧವಾಗಿದೆ. ಇದಕ್ಕೆ ಮದುವೆ ಮಾಡಿದ ಪುರೋಹಿತ, ಪೋಷಕರು ಹೊಣೆಯಾಗುತ್ತಾರೆ. ಬಾಲ್ಯವಿವಾಹ ಸಮಾಜದಲ್ಲಿ ಕೆಟ್ಟ ಸಂಪ್ರದಾಯವಾಗಿದೆ. 1940ರಿಂದಲೇ ಇಂತಹ ವಿವಾಹವನ್ನು ತಡೆಗಟ್ಟಲು ಕಾಯ್ದೆ ರೂಪಿಸಲಾಗಿದೆ. ಇತ್ತೀಚೆಗೆ ಈ ಕಾನೂನನ್ನು ಬಿಗಿಗೊಳಿಸಲಾಗಿದೆ. 18 ವರ್ಷಕ್ಕಿಂತ ಕಡಿಮೆ ಇರುವ ಯುವತಿ, 21ವರ್ಷಕ್ಕಿಂತ ಕಡಿಮೆ ಇರುವ ಯುವಕನ ನಡುವೆ ನಡೆಯುವ ವಿವಾಹ ಬಾಲ್ಯವಿವಾಹವಾಗಿದೆ. ಗ್ರಾಪಂ ಅಧ್ಯಕ್ಷ ಎಂ.ಸಿ.ರಾಜಣ್ಣ, ಉಪಾಧ್ಯಕ್ಷೆ ಮಾರಕ್ಕ, ಸರಕಾರಿ ಅಭಿಯೋಜಕ ಜೆ.ಲಿಂಗೇಶ್ವರ, ವಕೀಲರ ಸಂಘದ ಉಪಾಧ್ಯಕ್ಷ ಡಿ.ಬಿ.ಬೋರಯ್ಯ, ಪಿಡಿಒ ಎಚ್.ಯರ್ರಿಸ್ವಾಮಿ, ಮುಖಂಡರಾದ ಕಾಟಯ್ಯ, ಬೋಸಯ್ಯ, ರಾಜಣ್ಣ, ತಮ್ಮಣ್ಣ ನಾಗೇಶ್‌, ಬೊಮ್ಮಯ್ಯ ಹಾಜರಿದ್ದರು.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.