ಬೆಳಗಾವಿ: ಗಡಿ ದಾಟಲು ನೆಗೆಟಿವ್‌ ವರದಿ ಕಡ್ಡಾಯ

ಮಹಾ ಗಡಿಯ ಕುಗನೊಳ್ಳಿ-ಕಾಗವಾಡ ಚೆಕ್‌ ಪೋಸ್ಟ್‌ಗೆ ಡಿಸಿ-ಎಸ್ಪಿ ಭೇಟಿ¬ಹೆಚ್ಚುತ್ತಿದೆ ಕೊರೊನಾ ಆತಂಕ

Team Udayavani, Aug 2, 2021, 3:45 PM IST

hjklhjk

ಬೆಳಗಾವಿ: ಮಹಾರಾಷ್ಟ್ರದಿಂದ ಬೆಳಗಾವಿ ಮೂಲಕ ರಾಜ್ಯದ ಗಡಿಪ್ರವೇಶಿಸುವ ಪ್ರಯಾಣಿಕರು ಕೋವಿಡ್‌ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್‌ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾ  ಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದರು.

ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್‌ ಪೋಸ್ಟ್‌ಗಳಿಗೆ ಅವರು ರವಿವಾರ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿ ನಿಯೋಜಿತ ಅಧಿ ಕಾರಿಗಳು ಹಾಗೂ ತಂಡಗಳ ಸಿಬ್ಬಂದಿ ಜತೆ ಚರ್ಚೆ ನಡೆಸಿದ ಅವರು, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ವಿಶೇಷ ಸರ್ವೇಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರು ಎರಡೂ ಡೋಸ್‌ ಲಸಿಕೆ ಪಡೆದಿದ್ದರೂ 72 ಗಂಟೆ ಒಳಗೆ ಮಾಡಿಸಿರುವ ಆರ್‌ಟಿಪಿಸಿಆರ್‌ ಪರೀಕ್ಷೆಯ ವರದಿ ನೆಗೆಟಿವ್‌ ಹೊಂದಿರುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಒಂದು ವೇಳೆ ಕುಟುಂಬದಲ್ಲಿ ಮರಣ ಅಥವಾ ತುರ್ತು ವೈದ್ಯಕೀಯ ಚಿಕಿತ್ಸೆಯ ಹಿನ್ನೆಲೆಯಲ್ಲಿ ರಾಜ್ಯವನ್ನು ಪ್ರವೇಶಿಸ ಬಯಸುವ ಪ್ರಯಾಣಿಕರಿಗೆ ಗಡಿಭಾಗದ ಚೆಕ್‌ ಪೋಸ್ಟ್‌ ಗಳಲ್ಲಿ ರ್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್‌ (ರ್ಯಾಟ್‌) ಮಾಡಿಸಬೇಕು. ಅದರ ವರದಿ ನೆಗೆಟಿವ್‌ ಇದ್ದರೆ ಅವಕಾಶ ಕಲ್ಪಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನೆರೆಯ ರಾಜ್ಯದಿಂದ ಬಸ್‌ ಮೂಲಕ ಆಗಮಿಸುವ ಪ್ರಯಾಣಿಕರ ಕೋವಿಡ್‌ ಪರೀಕ್ಷಾ ವರದಿಯನ್ನು ನಿರ್ವಾಹಕರು ಪರಿಶೀಲಿಸಬೇಕು. ಖಾಸಗಿ ವಾಹನಗಳ ಮೂಲಕ ಆಗಮಿಸುವ ಎಲ್ಲ ವಾಹನಗಳನ್ನು ಪರಿಶೀಲಿಸಿ ಕೋವಿಡ್‌ ನೆಗೆಟಿವ್‌ ವರದಿ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಬೇಕು. ವಾಹನ ಪರಿಶೀಲನೆಗೆ ಸಂಬಂಧಿ  ಸಿದಂತೆ ಸೂಕ್ತ ದಾಖಲೆಗಳನ್ನು ನಿರ್ವಹಿಸಬೇಕು ಎಂದು ಗಡಿ ಚೆಕ್‌ ಪೋಸ್ಟ್‌ಗಳಲ್ಲಿ ನಿಯೋಜಿತ ಆರೋಗ್ಯ ಹಾಗೂ ಪೊಲೀಸ್‌ ಇಲಾಖೆ ಸಿಬ್ಬಂದಿಗೆ ಜಿಲ್ಲಾ ಧಿಕಾರಿ ಎಂ.ಜಿ. ಹಿರೇಮಠ ನಿರ್ದೇಶನ ನೀಡಿದರು.

ಇದೇ ವೇಳೆ ಕಾಗವಾಡ ಬಳಿಯ ಚೆಕ್‌ ಪೋಸ್ಟ್‌ಗೂ ಜಿಲ್ಲಾಧಿಕಾರಿ ಹಿರೇಮಠ ಭೇಟಿ ನೀಡಿ ಪರಿಶೀಲಿಸಿದರು. ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಚೆಕ್‌ ಪೋಸ್ಟ್‌ ಗಳಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ಇದೇ ವೇಳೆ ಚಿಕ್ಕೋಡಿ ಬಳಿಯ ಮಾಂಜರಿ ಸೇತುವೆಯ ಬಳಿ ಕೃಷ್ಣಾ ನದಿಯ ಹರಿವು ಪ್ರಮಾಣವನ್ನು ಜಿಲ್ಲಾಧಿಕಾರಿ ಹಿರೇಮಠ ಪರಿಶೀಲಿಸಿದರು. ಚಿಕ್ಕೋಡಿ ಉಪ ವಿಭಾಗಾ ಧಿಕಾರಿ ಯುಕೇಶ್‌ ಕುಮಾರ್‌ ಅವರು ಕೋವಿಡ್‌ ತಡೆಗಟ್ಟುವುದಕ್ಕೆ ಸಂಬಂಧಿ ಸಿದಂತೆ ಸರ್ಕಾರದ ಮಾರ್ಗಸೂಚಿಗಳ ಪಾಲನೆ ಹಾಗೂ ಪ್ರವಾಹ ನಿರ್ವಹಣೆಯ ಕ್ರಮಗಳನ್ನು ವಿವರಿಸಿದರು. ತಹಶೀಲ್ದಾರರು, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸ್ಥಳೀಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.